ರಾಜಮಾರ್ತಾಂಡನಿಗೆ ಮುಹೂರ್ತ
Team Udayavani, Dec 6, 2017, 4:42 PM IST
ಚಿರಂಜೀವಿ ಸರ್ಜಾ ಸಿನಿಮಾಗಳು ಸದ್ದಿಲ್ಲದೇ ಸೆಟ್ಟೇರುತ್ತಲೇ ಇವೆ. ಒಂದರ ಹಿಂದೊಂದರಂತೆ ಸಿನಿಮಾ ಮಾಡುತ್ತಾ ಬರುತ್ತಿರುವ ಚಿರಂಜೀವಿ ಸರ್ಜಾ ಅವರ ಹೊಸ ಚಿತ್ರವೊಂದು ಬುಧವಾರ ಆರಂಭವಾಗಿದೆ. ಅದು “ರಾಜಮಾರ್ತಾಂಡ’. ಈ ಚಿತ್ರವನ್ನು ರಾಮ್ನಾರಾಯಣ್ ನಿರ್ದೇಶಿಸುತ್ತಿದ್ದಾರೆ.
ರಾಮ್ ನಾರಾಯಣ್ ನಿರ್ದೇಶನದ “ಕ್ರ್ಯಾಕ್’ ಚಿತ್ರ ಕೆಲ ತಿಂಗಳ ಹಿಂದೆಯಷ್ಟೇ ಬಿಡುಗಡೆಯಾಗಿತ್ತು. ಈಗ ಚಿರಂಜೀವಿ ಜೊತೆ “ರಾಜಮಾರ್ತಾಂಡ’ ಮಾಡುತ್ತಿದ್ದಾರೆ. ಈ ಚಿತ್ರವನ್ನು ಶಿವಕುಮಾರ್ ಎನ್ ನಿರ್ಮಿಸುತ್ತಿದ್ದಾರೆ. ಈ ಹಿಂದೆ ಚಿರು ಜೊತೆ “ಅಜಿತ್’ ಸಿನಿಮಾ ಮಾಡಿದ ಅವರು ಈಗ “ರಾಜಮಾರ್ತಾಂಡ’ ಮಾಡುತ್ತಿದ್ದಾರೆ.
ಇದೊಂದು ಆ್ಯಕ್ಷನ್ ಜೊತೆಗೆ ಸೆಂಟಿಮೆಂಟ್ ಅಂಶಗಳೊಂದಿಗೆ ಸಾಗುವ ಸಿನಿಮಾವಾಗಿದ್ದು, ತನ್ನ ಸಾಮರ್ಥ್ಯದಿಂದ ಏನು ಬೇಕಾದರೂ ಪಡೆದುಕೊಳ್ಳುವ ವ್ಯಕ್ತಿಯಾಗಿ ಚಿರು ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರಕ್ಕೆ ಅರ್ಜುನ್ ಜನ್ಯಾ ಸಂಗೀತ, ಜಬೇಜ್ ಕೆ ಗಣೇಶನ್ ಛಾಯಾಗ್ರಹಣವಿದೆ. ನಾಯಕಿ ಸೇರಿದಂತೆ ಇತರ ಕಲಾವಿದರ ಆಯ್ಕೆ ನಡೆಯಬೇಕಿದೆ. ಈ ತಿಂಗಳಾಂತ್ಯದಿಂದ ಚಿತ್ರೀಕರಣ ಆರಂಭವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು
Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್ ಟೀಂ
ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು
MUST WATCH
ಹೊಸ ಸೇರ್ಪಡೆ
Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ
Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ