ರಾಜಮಾರ್ತಾಂಡನಿಗೆ ಮುಹೂರ್ತ
Team Udayavani, Dec 6, 2017, 4:42 PM IST
ಚಿರಂಜೀವಿ ಸರ್ಜಾ ಸಿನಿಮಾಗಳು ಸದ್ದಿಲ್ಲದೇ ಸೆಟ್ಟೇರುತ್ತಲೇ ಇವೆ. ಒಂದರ ಹಿಂದೊಂದರಂತೆ ಸಿನಿಮಾ ಮಾಡುತ್ತಾ ಬರುತ್ತಿರುವ ಚಿರಂಜೀವಿ ಸರ್ಜಾ ಅವರ ಹೊಸ ಚಿತ್ರವೊಂದು ಬುಧವಾರ ಆರಂಭವಾಗಿದೆ. ಅದು “ರಾಜಮಾರ್ತಾಂಡ’. ಈ ಚಿತ್ರವನ್ನು ರಾಮ್ನಾರಾಯಣ್ ನಿರ್ದೇಶಿಸುತ್ತಿದ್ದಾರೆ.
ರಾಮ್ ನಾರಾಯಣ್ ನಿರ್ದೇಶನದ “ಕ್ರ್ಯಾಕ್’ ಚಿತ್ರ ಕೆಲ ತಿಂಗಳ ಹಿಂದೆಯಷ್ಟೇ ಬಿಡುಗಡೆಯಾಗಿತ್ತು. ಈಗ ಚಿರಂಜೀವಿ ಜೊತೆ “ರಾಜಮಾರ್ತಾಂಡ’ ಮಾಡುತ್ತಿದ್ದಾರೆ. ಈ ಚಿತ್ರವನ್ನು ಶಿವಕುಮಾರ್ ಎನ್ ನಿರ್ಮಿಸುತ್ತಿದ್ದಾರೆ. ಈ ಹಿಂದೆ ಚಿರು ಜೊತೆ “ಅಜಿತ್’ ಸಿನಿಮಾ ಮಾಡಿದ ಅವರು ಈಗ “ರಾಜಮಾರ್ತಾಂಡ’ ಮಾಡುತ್ತಿದ್ದಾರೆ.
ಇದೊಂದು ಆ್ಯಕ್ಷನ್ ಜೊತೆಗೆ ಸೆಂಟಿಮೆಂಟ್ ಅಂಶಗಳೊಂದಿಗೆ ಸಾಗುವ ಸಿನಿಮಾವಾಗಿದ್ದು, ತನ್ನ ಸಾಮರ್ಥ್ಯದಿಂದ ಏನು ಬೇಕಾದರೂ ಪಡೆದುಕೊಳ್ಳುವ ವ್ಯಕ್ತಿಯಾಗಿ ಚಿರು ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರಕ್ಕೆ ಅರ್ಜುನ್ ಜನ್ಯಾ ಸಂಗೀತ, ಜಬೇಜ್ ಕೆ ಗಣೇಶನ್ ಛಾಯಾಗ್ರಹಣವಿದೆ. ನಾಯಕಿ ಸೇರಿದಂತೆ ಇತರ ಕಲಾವಿದರ ಆಯ್ಕೆ ನಡೆಯಬೇಕಿದೆ. ಈ ತಿಂಗಳಾಂತ್ಯದಿಂದ ಚಿತ್ರೀಕರಣ ಆರಂಭವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ