ನಿರ್ದೇಶಕ ಪವನ್ ಒಡೆಯರ್ ನಿಶ್ಚಿತಾರ್ಥ
Team Udayavani, Dec 7, 2017, 3:31 PM IST
ನಿರ್ದೇಶಕ ಪವನ್ ಒಡೆಯರ್ ನಟಿ ಆಪೇಕ್ಷಾ ಪುರೋಹಿತ್ ಅವರ ಕೈ ಹಿಡಿಯಲಿದ್ದಾರೆ ಹಾಗೂ ಸದ್ಯದಲ್ಲೇ ಅವರ ನಿಶ್ಚಿತಾರ್ಥ ನಡೆಯಲಿದೆ ಎಂಬ ಸುದ್ದಿ ನಿಮಗೆ ಗೊತ್ತೇ ಇದೆ. ಈಗ ಪವನ್ ಒಡೆಯರ್ ನಿಶ್ಚಿತಾರ್ಥ ನಡೆದಿದೆ. ಗುರುವಾರ ಪವನ್ ಒಡೆಯರ್ ನಿಶ್ಚಿತಾರ್ಥ ಬಾಗಲಕೋಟೆಯಲ್ಲಿ ನಡೆದಿದೆ.
ಎರಡು ಕುಟುಂಬಗಳ ಆಪ್ತೆಷ್ಟರಷ್ಟೇ ಭಾಗಿಯಾಗಿದ್ದ ಈ ಸರಳ ಸಮಾರಂಭದಲ್ಲಿ ಅಪೇಕ್ಷಾ ಅವರಿಗೆ ಪವನ ಉಂಗುರು ತೊಡಿಸಿದರು. ಅಪೇಕ್ಷಾ ಪುರೋಹಿತ್ ಅವರದು ಮೂಲತಃ ಬಾಗಲಕೋಟೆ. ಫ್ಯಾಷನ್ ಡಿಸೈನರ್ ಆಗಿರುವ ಅಪೇಕ್ಷಾ, ಸೀತಾರಾಮ್ ನಿರ್ದೇಶನದ “ಕಾಫಿ ತೋಟ’ ಚಿತ್ರದ ನಾಯಕಿಯಾಗಿ ನಟಿಸಿದ್ದರು.
ಇಬ್ಬರು ಉತ್ತರ ಕರ್ನಾಟಕದವರಾಗಿದ್ದು, ಪವನ್ಗೆ ಉತ್ತರ ಕರ್ನಾಟಕದ ಹುಡುಗಿಯನ್ನೇ ಮದುವೆಯಾಗಬೇಕೆಂಬ ಆಸೆ ಇತ್ತಂತೆ. ಅದರಂತೆ ಈಗ ಅಪೇಕ್ಷಾ ಅವರ ಕೈ ಹಿಡಿಯುತ್ತಿದ್ದಾರೆ. ಮುಂದಿನ ವರ್ಷ ಆಗಸ್ಟ್ನಲ್ಲಿ ಇವರ ಮದುವೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?