ಜ.5ರಿಂದ ತುಳು ಫಿಲ್ಮ್ ಫೆಸ್ಟಿವಲ್ ಶುರು; 7 ದಿನಗಳು, 47 ಸಿನಿಮಾ!


Team Udayavani, Dec 8, 2017, 6:20 AM IST

tff.jpg

ಜನವರಿಯಲ್ಲಿ ಬೆಂಗಳೂರಿನಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯುವುದಕ್ಕೆ ಸದ್ದಿಲ್ಲದೆ ಸಿದ್ಧತೆಗಳು ನಡೆಯುತ್ತಿವೆ. ಈ ಮಧ್ಯೆ ಮಂಗಳೂರಿನಲ್ಲೂ ಒಂದು ಚಿತ್ರೋತ್ಸವ ನಡೆಸುವುದಕ್ಕೆ ಒಂದು ವೇದಿಕೆ ಸಜ್ಜಾಗಿದೆ. ತುಳು ಚಿತ್ರ ನಿರ್ಮಾಪಕರ ಸಂಘವು, ತುಳು ಚಿತ್ರೋತ್ಸವವನ್ನು ಆಯೋಜಿಸಲು ಉದ್ದೇಶಿಸಿದ್ದು, ಈ ಚಿತ್ರೋತ್ಸವವು ಜನವರಿ 5ರಿಂದ 11ರವರೆಗೂ ಏಳು ದಿನಗಳ ಕಾಲ ನಡೆಯಲಿದೆ. ಈ ಚಿತ್ರೋತ್ಸವವು ಮಂಗಳೂರಿನ ಸಿನಿಪೊಲೀಸ್‌ ಮಲ್ಟಿಪ್ಲೆಕ್ಸ್‌ನಲ್ಲಿ ಆಯೋಜಿತವಾಗಿದೆ.

ಕಳೆದ ಕೆಲವು ವರ್ಷಗಳಿಂದಿತ್ತೀಚೆಗೆ ತುಳು ಚಿತ್ರಗಳ ಬಿಡುಗಡೆ ಗಣನೀಯವಾಗಿ ಹೆಚ್ಚಿದ್ದು, ತುಳು ಚಿತ್ರಗಳನ್ನು ಜನಪ್ರಿಯಗೊಳಿಸುವುದಕ್ಕೆ ಈ ಚಿತ್ರೋತ್ಸವವನ್ನು ಆಯೋಜಿಸಲಾಗಿದೆ. ದಿನಕ್ಕೊಂದರಂತೆ ಏಳು ದಿನಗಳ ಕಾಲ ಒಟ್ಟು 47 ಚಿತ್ರಗಳು ಈ ಚಿತ್ರೋತ್ಸವದಲ್ಲಿ ಪ್ರದರ್ಶನವಾಗಲಿದ್ದು, ಇದರಲ್ಲಿ “ಒರಿಯರ್ದೊರಿ ಅಸಲ್‌’, “ಚಾಲಿ ಪೋಲಿಲು’, “ಎಕ್ಕ ಸಕ್ಕ’, “ಚಂಡಿಕೋರಿ’ ಸೇರಿದಂತೆ ಹಲವು ಚಿತ್ರಗಳು ಪ್ರದರ್ಶನವಾಗಲಿದೆ. ಈ ಚಿತ್ರೋತ್ಸವದಲ್ಲಿ ಬರೀ ಹೊಸ ತುಳು ಚಿತ್ರಗಳು ಮಾತ್ರ ಪ್ರದರ್ಶನವಾಗಲಿದ್ದು, ಹಳೆಯ ತುಳು ಚಿತ್ರಗಳನ್ನು ನೋಡಬೇಕೆಂದರೆ ಸಿಗುವುದಿಲ್ಲ. ಅದಕ್ಕೆ ಕಾರಣಗಳೂ ಇವೆ. ತುಳು ಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ರಾಜೇಶ್‌ ಬ್ರಹ್ಮಾವರ್‌ ಹೇಳುವಂತೆ, ಸ್ಯಾಟಿಲೈಟ್‌ ಮೂಲಕ ಪ್ರದರ್ಶನವಾಗುವ ಚಿತ್ರಗಳು ಮಾತ್ರ ಈ ಚಿತ್ರದಲ್ಲಿರುತ್ತವಂತೆ.

“ತುಳು ಭಾಷೆಯ “ಎನ್ನ ತಂಗಡಿ’, “ಬಂಗಾರ್‌ ಪಟ್ಲೆರ್‌’ನಂತಹ ಹಳೆಯ ಮತ್ತು ಜನಪ್ರಿಯ ಚಿತ್ರಗಳನ್ನು ತೋರಿಸುವ ಆಸೆ ಇದೆ. ಆದರೆ, ಅವೆಲ್ಲಾ ನೆಗೆಟಿವ್‌ನಲ್ಲಿದ್ದು, ಅದನ್ನು ಡಿಜಿಟಲ್‌ಗೆ ವರ್ಗಾವಣೆ ಮಾಡುವುದಕ್ಕೆ ಒಂದಿಷ್ಟು ಖರ್ಚಾಗುತ್ತದೆ. ನಿರ್ಮಾಪಕರು ತಾವೇ ಮುಂದೆ ಬಂದು ವರ್ಗಾವಣೆ ಮಾಡಿಸಿಕೊಟ್ಟರೆ ಅಂತಹ ಚಿತ್ರಗಳನ್ನು ಪ್ರದರ್ಶಿಸಬಹುದು. ಇಲ್ಲವಾದರೆ ಡಿಜಿಟಲ್‌ ಚಿತ್ರಗಳನ್ನು ಮಾತ್ರ ಪ್ರದರ್ಶಿಸಲಾಗುತ್ತದೆ. ಪ್ರಶಸ್ತಿ ವಿಜೇತ ಚಿತ್ರಗಳಷ್ಟೇ ಅಲ್ಲ, ಯಶಸ್ವಿಯಾದ ಹಲವು ಚಿತ್ರಗಳೂ ಈ ಚಿತ್ರೋತ್ಸವದಲ್ಲಿ ಪ್ರದರ್ಶನವಾಗಲಿದೆ’ ಎನ್ನುತ್ತಾರೆ.

ತುಳು ಚಿತ್ರಗಳನ್ನು ಜನಪ್ರಿಯಗೊಳಿಸುವುದಕ್ಕೆ ಈ ಚಿತ್ರೋತ್ಸವವನ್ನು ಹಮ್ಮಿಕೊಳ್ಳಲಾಗಿದೆ ಎನ್ನುವ ಅವರು, “ಈ ಚಿತ್ರೋತ್ಸವವನ್ನು ಕನ್ನಡ ಚಿತ್ರರಂಗದ ಭಾಗವಾಗಿ ಆಯೋಜಿಸಲಿದ್ದು, ಚಿತ್ರೋತ್ಸವದ ಜೊತೆಗೆ ಹಲವು ಸಂವಾದಗಳನ್ನು ಸಹ ಹಮ್ಮಿಕೊಳ್ಳಲಾಗಿದೆ. ಅದೇ ಕಾರಣಕ್ಕೆ ಕನ್ನಡ ಸೇರಿದಂತೆ ಇತರೆ ಭಾಷೆಗಳ ನಿರ್ಮಾಪಕರು, ನಿರ್ದೇಶಕರು, ಕಲಾವಿದರು, ತಂತ್ರಜ್ಞರು ಮತ್ತು ಸರಕಾರದ ಪ್ರತಿನಿಧಿಗಳನ್ನು ಈ ಚಿತ್ರೋತ್ಸವಕ್ಕೆ ಆಹ್ವಾನಿಸಿ, ಸಂವಾದವನ್ನು ಆಯೋಜಿಸಲಾಗುತ್ತಿದೆ. ಅಷ್ಟೇ ಅಲ್ಲದೆ ತುಳು ಚಿತ್ರರಂಗ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚೆ ನಡೆಸಲಾಗುತ್ತದೆ. ಸದ್ಯ ತುಳು ಚಿತ್ರರಂಗವು ಕೆಲವು ಸಮಸ್ಯೆಗಳನ್ನು ಎದುರಿಸುತ್ತಿವೆ. ಪ್ರಮುಖವಾಗಿ ಚಿತ್ರಮಂದಿರದ ಸಮಸ್ಯೆ ಹೆಚ್ಚಾಗಿದೆ. ಇದೆಲ್ಲದಕ್ಕೂ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಚರ್ಚೆ ನಡೆಯಲಿದೆ’ ಎನ್ನುತ್ತಾರೆ ರಾಜೇಶ್‌ ಬ್ರಹ್ಮಾವರ್‌. 

ಈ ತುಳು ಚಿತ್ರೋತ್ಸವ ಯಶಸ್ವಿಯಾದರೆ ಮುಂದಿನ ದಿನಗಳಲ್ಲಿ ಬೆಂಗಳೂರು, ಹುಬ್ಬಳ್ಳಿ, ಹೈದರಾಬಾದ್‌, ಚೆನ್ನೈ, ಮುಂಬೈ ಮುಂತಾದ ನಗರಗಳಲ್ಲೂ ಆಯೋಜಿಸುವ ಯೋಜನೆಯನ್ನು ತುಳು ಚಿತ್ರ ನಿರ್ಮಾಪಕರ ಸಂಘ ಹಮ್ಮಿಕೊಂಡಿದೆ.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.