ಪ್ರೀತಿ ಮತ್ತು ಕ್ರಾಂತಿಯ ನಡುವೆ ನಾನು ಮತ್ತು ಜಾನು


Team Udayavani, Dec 10, 2017, 12:01 PM IST

Naanu-Loves-Jaanu-2.jpg

ಕನ್ನಡ ಚಿತ್ರರಂಗದಲ್ಲಿ ಹೊಸಬರಿಗೆ ಹಾಗೂ ಹೊಸ ಚಿತ್ರಗಳಿಗೆ ಬರವಿಲ್ಲ. ಈಗಂತೂ ಹೊಸ ಆಸೆ, ಆಕಾಂಕ್ಷೆಗಳನ್ನು ಹೊತ್ತು ಬರುವವರ ಸಂಖ್ಯೆಗೇನೂ ಕಮ್ಮಿ ಇಲ್ಲ. ಅಂತಹ ಹೊಸ ತಂಡವೊಂದು ಹೊಸತನದ ಚಿತ್ರದೊಂದಿಗೆ ಗಾಂಧಿನಗರಕ್ಕೆ ಕಾಲಿಟ್ಟಿದೆ. “ನಾನು ಲವ್ವರ್‌ ಆಫ್ ಜಾನು’ ಸಿನಿಮಾ ಮೂಲಕ ಸುರೇಶ್‌ ಜಿ. ನಿರ್ದೇಶಕರಾಗುತ್ತಿದ್ದಾರೆ. ಈ ಸಿನಿಮಾದಲ್ಲಿ ಕೆಲಸ ಮಾಡಿರುವವರೆಲ್ಲರಿಗೂ ಇದು ಮೊದಲ ಅನುಭವ. ನಿರ್ದೇಶಕ ಸುರೇಶ್‌ ಅವರಿಗೆ ಇದು ಚೊಚ್ಚಲ ಚಿತ್ರವಾದರೂ ಈ ಹಿಂದೆ ಕೆಲ ಚಿತ್ರಗಳಲ್ಲಿ ಕೆಲಸ ಮಾಡಿದ ಅನುಭವ ಇದೆ. ಹೊಸಬರೇ ಸೇರಿ ಮಾಡಿರುವ “ನಾನು ಲವ್ವರ್‌ ಆಫ್ ಜಾನು’ ಬಗ್ಗೆ ಒಂದಷ್ಟು…

“ನಾನು ಲವ್ವರ್‌ ಆಫ್ ಜಾನು’ ಚಿತ್ರದ ಮೂಲಕ ಬಾರಿಗೆ ಸುರೇಶ್‌ ಜಿ ಮೊದಲ ಬಾರಿಗೆ ನಿರ್ದೇಶನ ಮಾಡುತ್ತಿದ್ದಾರಾದರೂ, ಸಾಕಷ್ಟು ಅನುಭವ ಪಡೆದುಕೊಂಡೇ ಚಿತ್ರ ನಿರ್ದೇಶನಕ್ಕಿಳಿದಿದ್ದಾರೆ. ಕಳೆದ ಆರೇಳು ವರ್ಷಗಳಿಂದಲೂ ಚಿತ್ರರಂಗದಲ್ಲಿರುವ ಅವರು, “ಗೊಂಬೆಗಳ ಲವ್‌’ ಮತ್ತು ‘ಪಯಣ’ ಚಿತ್ರಗಳಿಗೆ ಕೆಲಸ ಮಾಡಿದ್ದಾರೆ. ಆ ಬಳಿಕ ಒಂದಷ್ಟು ಚಿತ್ರಗಳಿಗೆ ಸ್ಕ್ರಿಪ್ಟ್ ಕೆಲಸವನ್ನೂ ಮಾಡಿದ್ದಾರೆ.

ಈಗ “ನಾನು ಲವ್ವರ್‌ ಆಫ್ ಜಾನು’ ಚಿತ್ರಕ್ಕೆ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ಈ ಚಿತ್ರಕ್ಕೆ ಬಹುತೇಕ ಹೊಸಬರೇ ಕೆಲಸ ಮಾಡಿದ್ದಾರೆ. ನಾಯಕ ಮತ್ತು ನಾಯಕಿ ಇಬ್ಬರಿಗೂ ಇದು ಹೊಸ ಅನುಭವ. ಆದರೆ, ಅವರ್ಯಾರು, ಹೆಸರೇನು ಎಂಬುದನ್ನು ಗೌಪ್ಯವಾಗಿಡುತ್ತಾರೆ ನಿರ್ದೇಶಕರು. ಯಾಕೆ? ಎಂಬ ಪ್ರಶ್ನೆಯನ್ನು ಅವರ ಮುಂದಿಟ್ಟರೆ, “ಹೊಸತನದ ಕಥೆ ಹೆಣೆದಿರುವುದರಿಂದ ಹೊಸ ನಾಯಕ, ನಾಯಕಿ ಇಲ್ಲಿದ್ದಾರೆ.

ಅವರನ್ನು ಈಗಲೇ ಪರಿಚಯಿಸುವುದಿಲ್ಲ. ವಿಶೇಷ ಕಾರ್ಯಕ್ರಮದ ಮೂಲಕ ಅವರಿಬ್ಬರನ್ನೂ ಪರಿಚಯಿಸುತ್ತೇನೆ’ ಎಂದಷ್ಟೇ ಹೇಳಿ ಸುಮ್ಮನಾಗುತ್ತಾರೆ ನಿರ್ದೇಶಕ ಸುರೇಶ್‌. ಹಾಗಾದರೆ, ಈ “ನಾನು ಲವ್ವರ್‌ ಜಾನು’ ಚಿತ್ರ ಯಾವ ಜಾತಿಗೆ ಸೇರಿದ್ದು? “ಚಿತ್ರದ ಶೀರ್ಷಿಕೆಯೇ ಹೇಳುವಂತೆ, ಇದೊಂದು ಪ್ರೀತಿ ಕುರಿತಾದ ಚಿತ್ರ. 16 ರಿಂದ 60 ವರ್ಷದವರು ಕುಳಿತು ನೋಡಬಹುದಾದ ಅಪ್ಪಟ ಭಾವನಾತ್ಮಕ ಸಂಬಂಧಗಳ ಸುತ್ತ ಸಾಗುವ ಚಿತ್ರ.

ಎಲ್ಲಾ ಚಿತ್ರಗಳಲ್ಲೂ ಪ್ರೀತಿ ಕಥೆಗಳು ಸಹಜ. ಆದರೆ, ಇಲ್ಲೂ ಪ್ರೀತಿಯ ಕಥೆ ಇದ್ದರೂ, ಅದಕ್ಕೊಂದು ಹೊಸ ಸ್ಪರ್ಶ ಕೊಡಲಾಗಿದೆ. ಈಗಿನ ಟ್ರೆಂಡ್‌ಗೆ ತಕ್ಕಂತೆ ಕಥೆ ಹೆಣೆಯಲಾಗಿದೆ. ಬೆಂಗಳೂರು, ಮಂಗಳೂರು, ತುಮಕೂರು ಮತ್ತು ಚಿಕ್ಕಮಗಳೂರು ಸುತ್ತಮುತ್ತಲ ಸುಂದರ ತಾಣಗಳಲ್ಲಿ ಚಿತ್ರೀಕರಿಸಲಾಗಿದೆ ಎಂದು ವಿವರ ಕೊಡುತ್ತಾರೆ ನಿರ್ದೇಶಕರು.

ಈಗಾಗಲೇ ಚಿತ್ರದ ಟೀಸರ್‌ವೊಂದನ್ನು ಬಿಡುಗಡೆ ಮಾಡಿರುವ ಚಿತ್ರತಂಡ, ಅದಕ್ಕೆ ಸಿಕ್ಕಿರುವ ಪ್ರತಿಕ್ರಿಯೆ ನೋಡಿ ಫ‌ುಲ್‌ ಖುಷಿಯ ಮೂಡ್‌ನ‌ಲ್ಲಿದೆ. ಅಂದಹಾಗೆ, ಜಯಣ್ಣ ಮತ್ತು ಭೋಗೇಂದ್ರ ಟೀಸರ್‌ ಬಿಡುಗಡೆ ಮಾಡಿದ್ದಾರೆ. ಬಿಡುಗಡೆಯಾಗಿರುವ ಟೀಸರ್‌ಗೊಂದು ವಿಶೇಷವೂ ಇದೆ. ಆ ಟೀಸರ್‌ನಲ್ಲೂ ನಾಯಕ ಮತ್ತು ನಾಯಕಿಯನ್ನೆಲ್ಲಿ ತೋರಿಸಿಲ್ಲ. ಟೀಸರ್‌ನಲ್ಲಿ ನಾಯಕ-ನಾಯಕಿ ಇದ್ದರೂ ಸಹ, ಅವರು ಸ್ಪಷ್ಟವಾಗಿ ಗೋಚರಿಸುವುದಿಲ್ಲ.

ಅಂಥದ್ದೊಂದು ಟೀಸರ್‌ ಬಿಡುಗಡೆ ಮಾಡಿ, ಒಂದಷ್ಟು ಕುತೂಹಲ ಮೂಡಿಸಿದ್ದಾರೆ ನಿರ್ದೇಶಕರು. ಈ ಟೀಸರ್‌ನ ಮತ್ತೂಂದು ವಿಶೇಷವೆಂದರೆ, ಟೀಸರ್‌ಗೆ ನಿರ್ದೇಶಕ ಯೋಗರಾಜ್‌ಭಟ್‌ ಅವರು ಹಿನ್ನೆಲೆ ಧ್ವನಿ ಕೊಟ್ಟಿದ್ದಾರೆ. ಅವರ ಹಿನ್ನೆಲೆ ಧ್ವನಿಯಲ್ಲಿ ಮೂಡಿಬಂದಿರುವ ಟೀಸರ್‌ ಸಾಕಷ್ಟು ಸದ್ದು ಮಾಡಿರುವುದರಿಂದ ಚಿತ್ರತಂಡಕ್ಕೆ ಇನ್ನಷ್ಟು ಉತ್ಸಾಹ ಬಂದಿದೆ.

ಹಾಗಾದರೆ, ಇದರ ಕಥೆ ಏನು? “ಕ್ರಾಂತಿ ಮತ್ತು ಪ್ರೀತಿ’ ಎಂದು ಒನ್‌ಲೈನ್‌ ಹೇಳಿ ಸುಮ್ಮನಾಗುತ್ತಾರೆ ನಿರ್ದೇಶಕ ಸುರೇಶ್‌. ಒಂದು ಪ್ರೀತಿ ಇದೆ ಅಂದಮೇಲೆ, ಅಲ್ಲಿ ದ್ವೇಷವೂ ಇರುತ್ತೆ. ಇಲ್ಲೂ ಅದೆಲ್ಲಾ ಇದ್ದರೂ, ಸಮಾಜದೊಳಗಿನ ಕ್ರಾಂತಿ ನಡುವೆ ಪ್ರೀತಿ ಗೆಲ್ಲುತ್ತಾ ಅನ್ನುವುದನ್ನು ಸೂಕ್ಷ್ಮವಾಗಿ ಹೇಳಿದ್ದಾರಂತೆ ನಿರ್ದೇಶಕರು. ಚಿತ್ರದಲ್ಲಿ ಚಿಕ್ಕಣ್ಣ, ಸುಚೇಂದ್ರ ಪ್ರಸಾದ್‌, ರಾಕ್‌ಲೈನ್‌ ವೆಂಕಟೇಶ್‌, ಹರಿಣಿ ಸೇರಿದಂತೆ ಇತರೆ ಕಲಾವಿದರು ನಟಿಸಿದ್ದಾರೆ.

ಶ್ರೀನಾಥ್‌ ವಿಜಿ ಸಂಗೀತ ನೀಡಿದ್ದಾರೆ. ಶಿವು ಕ್ಯಾಮೆರಾ ಹಿಡಿದರೆ, ರಾಜ್‌ಶಿವ ಸಂಕಲನ ಮಾಡಿದ್ದಾರೆ. ಕಲಾತಪಸ್ವಿ ಬ್ಯಾನರ್‌ನಲ್ಲಿ ಐವರು ಗೆಳೆಯರು ಸೇರಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಚಂದ್ರು, ರಾಜು ಕಲ್‌ಕುಣಿಕೆ, ವಿಷ್ಣು ಭಂಡಾರಿ,ರವಿಶಂಕರ್‌ ಮತ್ತು ಮೂಡ್ಲಿರಾಮ್‌ ಚಿತ್ರದ ನಿರ್ಮಾಪಕರು. ಚಿತ್ರದಲ್ಲಿ ಹಾಡು ಮತ್ತು ಫೈಟ್‌, ಚೇಸಿಂಗ್‌ ಹೈಲೈಟ್‌. ವಿಕ್ರಂ ಫೈಟ್‌ ಮಾಡಿಸಿದ್ದಾರೆ.

ಇನ್ನು, ನಾಗೇಂದ್ರಪ್ರಸಾದ್‌ ಅವರೇ ನಾಲ್ಕು ಹಾಡುಗಳನ್ನು ರಚಿಸಿದ್ದಾರೆ. ವಿಜಯಪ್ರಕಾಶ್‌, ಶ್ರೇಯಾ ಘೋಷಾಲ್‌, ಕಾರ್ತಿಕ್‌, ಚಿನ್ಮಯಿ, ಹರಿಚರಣ್‌ ಹಾಡಿದ್ದಾರೆ.  ಕಳೆದ ಎರಡು ವರ್ಷಗಳ ಹಿಂದೆ ಶುರುವಾಗಿದ್ದ ಈ ಚಿತ್ರ ಈಗ ಬಿಡುಗಡೆಗೆ ರೆಡಿಯಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ, ಹೊಸ ವರ್ಷಕ್ಕೆ ಪ್ರೇಕ್ಷಕರ ಮುಂದೆ ಬರಲಿದೆ.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.