ಮುಖ್ಯಮಂತ್ರಿಗಳಿಗೆ ಸುದೀಪ್‌ ನೀಡಿದ ಪತ್ರದಲ್ಲೇನಿದೆ ಗೊತ್ತಾ?


Team Udayavani, Dec 11, 2017, 3:01 PM IST

sudeep-siddu].jpg

ಇಂದು ಬೆಳಿಗ್ಗೆ ನಟ ಸುದೀಪ್‌ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿ, ಕೆಲವು ಕಾಲ ಮಾತುಕತೆ ನಡೆಸಿದ್ದಾರೆ. ಪ್ರಮುಖವಾಗಿ ಡಾ. ವಿಷ್ಣುವರ್ಧನ್‌ ಅವರ ಸ್ಮಾರಕ ನಿರ್ಮಾಣದ ವಿಷಯದ ಕುರಿತು ಮಾತನಾಡಿರುವ ಸುದೀಪ್‌, ಈ ಕುರಿತು ಮುಖ್ಯಮಂತ್ರಿಗಳಿಗೆ ಒಂದು ಪತ್ರವನ್ನೂ ಸಲ್ಲಿಸಿದ್ದಾರೆ. ಇಷ್ಟಕ್ಕೂ ಆ ಪತ್ರದಲ್ಲೇನಿದೆ ಗೊತ್ತಾ? ಓದಿ ನೋಡಿ …

ಕಳೆದ 8 ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಡಾ. ವಿಷ್ಣುವರ್ಧನ ಅವರ ಸ್ಮಾರಕ ನಿರ್ಮಾಣದ ವಿಷಯಕ್ಕೆ ತಾರ್ಕಿಕ ಅಂತ್ಯವನ್ನು ಒದಗಿಸಲು ಇದು ಸಕಾಲವೆಂದು ಭಾವಿಸುತ್ತೇನೆ. ಮೈಸೂರಿನಲ್ಲಿ ಸ್ಮಾರಕ ನಿರ್ಮಾಣಕ್ಕೆ ಸ್ಥಳ ನಿಗದಿಯಾಗಿದ್ದರೂ ಸಹ, ಅಂತ್ಯ ಸಂಸ್ಕಾರವಾದ ಜಾಗದಲ್ಲಿಯೇ ಅವರ ನೆನಪಿನ ಸ್ಮಾರಕ ಇರಬೇಕೆಂಬುದು ಕನ್ನಡಿಗರ ಮತ್ತು ಅವರ ಅಸಂಖ್ಯಾತ ಅಭಿಮಾನಿಗಳ ಕೋರಿಕೆಯಾಗಿರುವುದು ತಮಗೆ ತಿಳಿಯದ ವಿಷಯವೇನಲ್ಲ.

ಡಾ.ಭಾರತಿ ವಿಷ್ಣುವರ್ಧನ್‌ ಅವರ ಇಚ್ಛೆಯಂತೆ ಮೈಸೂರಿನಲ್ಲಿಯೇ ಸ್ಮಾರಕವಾಗುವುದಾದರೆ, ಯಾರ ಅಂಭ್ಯಂತರವೂ ಇಲ್ಲ. ಆದರೆ, ಅಭಿಮಾನ್‌ ಸ್ಟುಡಿಯೋದಲ್ಲಿ ಸ್ಮಾರಕದ ಬದಲಾಗಿ ಅವರ ಅಂತ್ಯ ಸಂಸ್ಕಾರವಾದ ಜಾಗದ ಒಂದು ಎಕರೆ ಪ್ರದೇಶವನ್ನು “ಡಾ.ವಿಷ್ಣುವರ್ಧನ ಪುಣ್ಯ ಭೂಮಿ’ ಎಂದು ಗುರುತಿಸಿ, ಅಭಿವೃದ್ಧಿಪಡಿಸಲು ಕೋರುತ್ತೇನೆ.

ಒಂದು ವೇಳೆ, ಒಂದು ಕಡೆ ಸ್ಮಾರಕ ಮತ್ತೂಂದು ಕಡೆ ಪುಣ್ಯಭೂಮಿ ಎಂದು ಅಭಿವೃದ್ಧಿಪಡಿಸುವುದು ಸರ್ಕಾರಿ ನಿಯಮಗಳಿಗೆ ವಿರುದ್ಧ ಎನ್ನುವುದಾದರೆ, ಕೇವಲ ಒಂದು ಎಕರೆ ಜಾಗವನ್ನು ಕೊಟ್ಟರೆ, ಡಾ.ವಿಷ್ಣುವರ್ಧನ ಅವರ ಹಿತೈಷಿಗಳಾದ ನಾವು ಮತ್ತು ಅವರ ಅಭಿಮಾನಿಗಳು ಸೇರಿ ಡಾ.ವಿಷ್ಣುವರ್ಧನ ಪುಣ್ಯಭೂಮಿಯನ್ನು ಅಭಿಮಾನಿಗಳಿಗಾಗಿ ಈ ಪುಣ್ಯಭೂಮಿ ಅಭಿವೃದ್ಧಿಗೆ ಸಂಕಲ್ಪ ಹೊಂದಬೇಕೆಂದು ಈ ಮೂಲಕ ಕೋರುತ್ತೇನೆ.

ಇದೇ ಡಿಸೆಂಬರ್‌ 30 ಕ್ಕೆ ಡಾ.ವಿಷ್ಣುವರ್ಧನ್‌ ಅವರ 8 ನೇ ಪುಣ್ಯಸ್ಮರಣೆ ಇರುವುದರಿಂದ, ತಾವು ಆದಷ್ಟು ಬೇಗ ಈ ವಿಷಯಕ್ಕೆ ತಾರ್ಕಿಕ ಅಂತ್ಯವನ್ನು ಒದಗಿಸಿದರೆ, ಹಿಂದಿನ ಸರ್ಕಾರದಲ್ಲಿ ಘೋಷಣೆಯಾಗಿದ್ದ ಸ್ಮಾರಕ ಯೋಜನೆಯನ್ನು ಸಾಕಾರಗೊಳಿಸಿದ ಕೀರ್ತಿ ತಮ್ಮದಾಗುತ್ತದೆ ಮತ್ತು ಅಸಂಖ್ಯಾತ ವಿಷ್ಣು ಅಭಿಮಾನಿಗಳ ಬಹುದಿನಗಳ ಬೇಡಿಕೆ ಈಡೇರಿಸಿದಂತಾಗುತ್ತದೆ.

ಈ ಸ್ಮಾರಕದ ವಿಷಯ ಪರಿಹಾರಕ್ಕೆ ಸಂಬಂಧಿಸಿದಂತೆ ಕೆಲವೊಂದು ಸಾಧ್ಯತೆಗಳನ್ನು ತಮ್ಮ ಗಮನಕ್ಕೆ ತರಲು ಇಚ್ಛಿಸುತ್ತೇನೆ. ಇವುಗಳು ಖಂಡಿತ ಸಹಕಾರಿಯಾಗಬಲ್ಲದೆಂದು ನಂಬಿದ್ದೇನೆ.

1. ಅಭಿಮಾನ್‌ ಸ್ಟುಡಿಯೋದಲ್ಲಿ ಡಾ. ವಿಷ್ಣುವರ್ಧನ ಸ್ಮಾರಕಕ್ಕಾಗಿ ನಿಗದಿಪಡಿಸಿರುವ ಎರಡು ಎಕರೆ ಜಾಗದ ಬದಲು ಒಂದು ಅಥವಾ ಅರ್ಧ ಎಕರೆ ಜಾಗವನ್ನು ಅಖೈರುಗೊಳಿಸುವುದು.

2. ದಿ.ಬಾಲಕೃಷ್ಣ ಅವರ ಕುಟುಂಬಕ್ಕೆ ಪರಿಹಾರ ಒದಗಿಸುವುದು. ಅಭಿಮಾನ್‌ ಸ್ಟುಡಿಯೋ ಸರ್ಕಾರಿ ಜಮೀನಾಗಿರುವ ಕಾರಣ, ಸರ್ಕಾರವೇ ಅದಕ್ಕೆ ಪರಿಹಾರ ಹಣ ಕೊಟ್ಟು ಖರೀದಿಸಲಾಗುವುದಿಲ್ಲವೆಂದರೆ, ಅದನ್ನು ಖರೀದಿಸಲು ವಿಷ್ಣು ಅಭಿಮಾನಿಗಳಿಗೆ ಅವಕಾಶ ಮಾಡಿಕೊಡುವುದು.

3. ಅಭಿಮಾನ್‌ ಸ್ಟುಡಿಯೋದ ಮೇಲೆ ಸರ್ಕಾರ ಹಾಕಿರುವ ಮೊಕದ್ದಮೆಗಳನ್ನು ವಾಪಸ್ಸು ಪಡೆಯುವುದು.

4. ಈ ಸಂಬಂಧ ಬಾಲಕೃಷ್ಣ ಅವರ ಕುಟುಂಬದ ಜೊತೆ ಖುದ್ದಾಗಿ ತಾವೇ ಒಂದು ಸಭೆ ನಡೆಸಿದರೆ ಖಂಡಿತ ಅವರು ಒಪ್ಪುತ್ತಾರೆ ಎಂಬುದು ನನ್ನ ಖಚಿತ ನಿಲುವು.

ಈ ಸಾಧ್ಯತೆಗಳು ನನ್ನ ತಿಳುವಳಿಕೆಗೆ ಸಂಬಂಧಿಸಿರುವುಗಳೇ ಆಗಿವೆ. ಈ ಸಾಧ್ಯತೆಗಳನ್ನು ತಾವು ಬಳಸುವುದು ಅಥವಾ ಸರ್ಕಾರಿ ನಿಮಗಳನುಸಾರ ಮುಂದುವರಿಯುವುದು ತಮ್ಮ ವಿವೇಚನೆಗೆ ಬಿಟ್ಟ ಸಂಗತಿಗಳಾಗಿವೆ. ದಯಮಾಡಿ ಡಾ.ವಿಷ್ಣುವರ್ಧನ ಅವರ ಪುಣ್ಯ ಭೂಮಿ ನಿರ್ಮಾಣಕ್ಕೆ ಡಿಸೆಂಬರ್‌ 30ರ ಒಳಗೆ ತಾರ್ಕಿಕ ಅಂತ್ಯ ಒದಗಿಸಬೇಕೆಂದು ವಿನಂತಿಸುತ್ತೇನೆ.

ವಂದನೆಗಳೊಂದಿಗೆ…
ತಮ್ಮ ವಿಶ್ವಾಸಿ,
ಕಿಚ್ಚ ಸುದೀಪ್‌

ಟಾಪ್ ನ್ಯೂಸ್

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.