ಭುರ್ಜ್‌ ಖಲೀಫಾದಲ್ಲಿ ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ


Team Udayavani, Dec 11, 2017, 9:00 PM IST

Hottegagi-Genu-Battegagi-(1).jpg

ಅನಂತ್‌ ನಾಗ್‌ ಮತ್ತು ರಾಧಿಕಾ ಚೇತನ್‌ ಅಭಿನಯದ “ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ’ ಚಿತ್ರದ ಚಿತ್ರೀಕರಣ ಮುಗಿದು, ಇದೀಗ ಪೋಸ್ಟ್‌ ಪ್ರೊಡಕ್ಷನ್‌ ಹಂತದಲ್ಲಿದೆ. ಎಲ್ಲಾ ಅಂದುಕೊಂಡಂತೆ ಆದರೆ, ಜನವರಿ ಅಥವಾ ಫೆಬ್ರವರಿಯಲ್ಲಿ ಚಿತ್ರ ಬಿಡುಗಡೆಯಾಗಲಿದೆ. ವಿಶೇಷವೆಂದರೆ, ಈ ಚಿತ್ರಕ್ಕಾಗಿ ಜಗತ್ತಿನ ಅತ್ಯಂತ ಎತ್ತರದ ಕಟ್ಟಡವಾದ ಭುರ್ಜ್‌ ಖಲೀಫಾದಲ್ಲಿ ಚಿತ್ರೀಕರಣ ಮಾಡಲಾಗಿದೆ.

ಹಾಗೆ ಚಿತ್ರೀಕರಣ ಮಾಡಿದ ಮೊದಲ ಕನ್ನಡ ಚಿತ್ರ ಎಂಬ ಹೆಗ್ಗಳಿಕೆಗೆ ನರೇಂದ್ರ ಬಾಬು ನಿರ್ದೇಶನದ “ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ’ ಪಾತ್ರವಾಗಿದೆ. ಚಿತ್ರದಲ್ಲಿ ಎತ್ತರದ ಕಟ್ಟಡಗಳಿರುವ ನಗರವೊಂದು ಹಿನ್ನೆಲೆಯಾಗಿ ಬೇಕಿತ್ತಂತೆ. ಮುಂಬೈ, ಬಾಲಿ … ಹೀಗೆ ಯಾವ್ಯಾವ ಸ್ಕೈಕ್ರಾಪರ್‌ಗಳು ಎಲ್ಲೆಲ್ಲಿವೆ ಮತ್ತು ಎಲ್ಲಿ ಚಿತ್ರೀಕರಣ ಮಾಡಬೇಕೆಂದು ಚಿತ್ರತಂಡದವರು ತಲೆ ಕೆಡಿಸಿಕೊಂಡಾಗ, ಹೊಳೆದ ಹೆಸರು ದುಬೈ.

ದುಬೈ ನಗರದಲ್ಲಿ ಹಲವು ಸ್ಕೈಕ್ರಾಪರ್‌ಗಳಿವೆ. ಅಲ್ಲಿ ಚಿತ್ರೀಕರಣ ಮಾಡಬೇಕೆಂದರೆ ತುಂಬಾ ಖರ್ಚಾಗುತ್ತದೆ. ಆ ಸಂದರ್ಭದಲ್ಲಿ ದುಬೈನಲ್ಲಿ ನೆಲೆಸಿರುವ ಅನಿವಾಸಿ ಭಾರತೀಯ ಹರೀಶ್‌ ಶೇರಿಗಾರ್‌ ಎಂಟ್ರಿ ಕೊಟ್ಟಿದ್ದಾರೆ. ಈ ಹಿಂದೆ ಅನಂತ್‌ ನಾಗ್‌ ಅವರು ಹರೀಶ್‌ ಶೇರಿಗಾರ್‌ ನಿರ್ಮಾಣದ “ಮಾರ್ಚ್‌ 22′ ಚಿತ್ರದಲ್ಲಿ ನಟಿಸಿದ್ದರು. ಅದೇ ಸ್ನೇಹದಲ್ಲಿ ದುಬೈನಲ್ಲಿ ಚಿತ್ರೀಕರಣ ಮಾಡುವುದಕ್ಕೆ ಸಾಧ್ಯವಾ ಎಂದು ಕೇಳಿದಾಗ,

ದುಬೈನ ಚಿತ್ರೀಕರಣದ ಖರ್ಚು ತಾವು ನೋಡಿಕೊಳ್ಳುವುದಾಗಿ ಅವರು ಅವರು ಹೇಳಿದರಂತೆ. ದುಬೈನಲ್ಲಿ ಚಿತ್ರೀಕರಣಕ್ಕೆ ಎಲ್ಲಾ ರೀತಿಯ ನೆರವು ಮಾಡುವ ಮೂಲಕ ಅವರು ಸಹ-ನಿರ್ಮಾಪಕರಾಗಿ ಚಿತ್ರತಂಡವನ್ನು ಸೇರಿಕೊಂಡಿದ್ದಾರೆ. ಚಿತ್ರತಂಡದವರು ಬರೀ ದುಬೈನಲ್ಲಿ ಒಂದು ವಾರ ಕಾಲ ಚಿತ್ರೀಕರಣ ಮಾಡಿದ್ದಷ್ಟೇ ಅಲ್ಲ,

ವಿಶ್ವದ ಅತೀ ಎತ್ತರದ ಕಟ್ಟಡ ಎಂಬ ಹೆಗ್ಗಳಿಕೆಯ ಭುರ್ಜ್‌ ಖಲೀಫಾದಲ್ಲೂ ಚಿತ್ರೀಕರಣ ಮಾಡಲಾಗಿದೆ. ಇದುವರೆಗೂ ಕನ್ನಡ ಚಿತ್ರರಂಗದಿಂದ ಅಲ್ಲಿ ಯಾರೂ ಚಿತ್ರೀಕರಣ ಮಾಡಿರಲಿಲ್ಲ. ಅಲ್ಲಿ ಚಿತ್ರೀಕರಣ ಮಾಡುವುದು ಸಹ ಅಷ್ಟು ಸುಲಭವಲ್ಲವಂತೆ. ಏಕೆಂದರೆ, ಅಲ್ಲಿ ಚಿತ್ರೀಕರಣ ಮಾಡುವುದಕ್ಕೆ ಅನುಮತಿ ಸಹ ಸಿಗುವುದಿಲ್ಲ. ಆದರೆ, ಸ್ನೇಹಿತರ ಸಹಾಯದಿಂದ ಅನುಮತಿ ಸಿಗುವುದಷ್ಟೇ ಅಲ್ಲ, ಚಿತ್ರೀಕರಣ ಸಹ ಸಾಧ್ಯವಾಗಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.