ಡಿ 29ಕ್ಕೆ ಚಮಕ್‌ ಜೊತೆಗೆ ಹಂಬಲ್‌ ಪೊಲಿಟೀಶಿಯನ್‌ ಬಿಡುಗಡೆ


Team Udayavani, Dec 21, 2017, 6:04 PM IST

humble11.jpg

ಹಂಬಲ್‌ ಪೊಲಿಟೀಶಿಯನ್‌ ನೋಗ್‌ರಾಜ್‌- ಕಳೆದ ಒಂದು ವರ್ಷದಿಂದ ಈ ಹೆಸರು ಓಡಾಡುತ್ತಲೇ ಇದೆ. ಅದಕ್ಕೆ ಕಾರಣ ದಾನಿಶ್‌ ಸೇಠ್. ದಾನಿಶ್‌ ಸೇಠ್ ಮೊದಲ ಬಾರಿಗೆ ನಾಯಕರಾಗಿ ನಟಿಸಿದ ಚಿತ್ರವಿದು. ಈಗ ಬಿಡುಗಡೆಯ ಹಂತಕ್ಕೆ ಬಂದಿದೆ. ಚಿತ್ರ ಡಿಸೆಂಬರ್‌ 29 ರಂದು ಬಿಡುಗಡೆಯಾಗುತ್ತಿದೆ. ಈ ಚಿತ್ರವನ್ನು ಸಾದ್‌ ಖಾನ್‌ ನಿರ್ದೇಶಿಸಿದ್ದು, ಪುಷ್ಕರ್‌, ರಕ್ಷಿತ್‌ ಶೆಟ್ಟಿ ಹಾಗೂ ಹೇಮಂತ್‌ ರಾವ್‌ ಈ ಚಿತ್ರದ ನಿರ್ಮಾಪಕರು. ಚಿತ್ರದಲ್ಲಿ ಶ್ರುತಿ ಹರಿಹರನ್‌ ನಾಯಕಿಯಾಗಿ ನಟಿಸಿದ್ದಾರೆ.

ನಿರ್ಮಾಪಕ ಪುಷ್ಕರ್‌ ಈ ಬಾರಿಯೂ “ಹಂಬಲ್‌ ಪೊಲಿಟಿಶಿಯನ್‌ ನೋಗ್‌ರಾಜ್‌’ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟಿದ್ದಾರೆ. ಅದಕ್ಕೆ ಕಾರಣ, ಕಳೆದ ವರ್ಷದ ಕೊನೆಯಲ್ಲಿ ಬಿಡುಗಡೆ ಮಾಡಿದ ಚಿತ್ರ ಕೊಟ್ಟ ಯಶಸ್ಸು. ಹೌದು, ಕಳೆದ ವರ್ಷದ ಡಿಸೆಂಬರ್‌ ಕೊನೆಯಲ್ಲಿ ರಕ್ಷಿತ್‌ ಶೆಟ್ಟಿ ನಾಯಕರಾಗಿದ್ದ “ಕಿರಿಕ್‌ ಪಾರ್ಟಿ’ ಬಿಡುಗಡೆಯಾಗಿ ದೊಡ್ಡ ಯಶಸ್ಸು ಕಂಡಿತ್ತು. 

ಆ ಚಿತ್ರದಲ್ಲಿ ಪುಷ್ಕರ್‌ ಕೂಡಾ ಕೈ ಜೋಡಿಸಿದ್ದರು. ಈಗ ಆದೇ ವಿಶ್ವಾಸದೊಂದಿಗೆ ಡಿಸೆಂಬರ್‌ ಕೊನೆಯಲ್ಲಿ “ಹಂಬಲ್‌ ಪೊಲಿಟಿಶಿಯನ್‌ ನೋಗ್‌ರಾಜ್‌’ ಬಿಡುಗಡೆ ಮಾಡುವುದಾಗಿ ಹೇಳುತ್ತಾರೆ. “ಕಳೆದ ವರ್ಷದ ಕೊನೆಯಲ್ಲಿ ತೆರೆಕಂಡ “ಕಿರಿಕ್‌ ಪಾರ್ಟಿ’ ದೊಡ್ಡ ಯಶಸ್ಸು ಕೊಟ್ಟಿತು. ಈಗ ಈ ಚಿತ್ರವೂ ಆದೇ ರೀತಿ ಗೆಲುವು ಕೊಡುತ್ತದೆ ಎಂಬ ವಿಶ್ವಾಸ ನಮಗಿದೆ. “ಕಿರಿಕ್‌ ಪಾರ್ಟಿ’ ಚಿತ್ರ ವಿದೇಶದಲ್ಲೂ ಒಳ್ಳೆಯ ಗಳಿಕೆ ಮಾಡಿತ್ತು. ನೋಗ್‌ರಾಜ್‌ ಆದನ್ನು ಮೀರಿಸುವ ನಿರೀಕ್ಷೆ ಇದೆ. ಏಕೆಂದರೆ ದಾನಿಶ್‌ಗೆ ವಿದೇಶದಲ್ಲೂ ಸಾಕಷ್ಟು ಮಂದಿ ಅಭಿಮಾನಿಗಳಿದ್ದಾರೆ’ ಎನ್ನುವುದು ಪುಷ್ಕರ್‌ ಮಾತು. 

ವರ್ಷದ ಕೊನೆಯಲ್ಲಿ, ಹೊಸ ವರ್ಷದ ಆರಂಭದಲ್ಲಿ ಚಿತ್ರ ಬಿಡುಗಡೆ ಮಾಡಲು ಕೂಡಾ ಒಂದು ಕಾರಣವಿದೆಯಂತೆ. ಅದು ಸಿನಿಮಾ ಪ್ರೀತಿಸುವವರಿಗಾಗಿ. ಹೌದು, ಕೆಲವರು ಹೊಸ ವರ್ಷವನ್ನು ಪಾರ್ಟಿ ಮಾಡಿ ಅಥವಾ ಇನ್ಯಾವುದೋ ರೂಪದಲ್ಲಿ ಸೆಲೆಬ್ರೆಟ್‌ ಮಾಡಿದರೆ, ಅನೇಕರು ಒಳ್ಳೆಯ ಸಿನಿಮಾವನ್ನು ಕುಟುಂಬ ಸಮೇತ ನೋಡುವ ಮೂಲಕ ಖುಷಿಯಿಂದ ಹೊಸ ವರ್ಷವನ್ನು ಆರಂಭಿಸುತ್ತಾರಂತೆ. ಆ ಉದ್ದೇಶದಿಂದಲೂ ವರ್ಷದ ಕೊನೆಯಲ್ಲಿ ಚಿತ್ರ ಬಿಡುಗಡೆ ಮಾಡುವುದಾಗಿ ಹೇಳುತ್ತಾರೆ. ಚಿತ್ರದ ಸಿಂಗಲ್‌ ಸ್ಕ್ರೀನ್‌ಗಳ ವಿತರಣೆಯನ್ನು ಜಯಣ್ಣ ಮಾಡುತ್ತಿದ್ದು, ಮಲ್ಟಿಪ್ಲೆಕ್ಸ್‌ ಅನ್ನು ಪುಷ್ಕರ್‌ ಅಂಡ್‌ ಟೀಂ ಮಾಡುತ್ತಿದೆ.

ಟಾಪ್ ನ್ಯೂಸ್

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.