ರಂಜನಿ ಎಂಬ ಸೂಫಿ


Team Udayavani, Jan 6, 2018, 10:21 AM IST

ranjani.jpg

ಕಿರುತೆರೆ ನಟಿಯರು ಬೆಳ್ಳಿತೆರೆಗೆ ಬರುತ್ತಿರುವುದು ಹೊಸದೇನಲ್ಲ. ಹಾಗೆ ಬಂದವರು ಅನೇಕರು. ಆದರೆ, ಉಳಿದದ್ದು ಬೆರಳೆಣಿಕೆಯಷ್ಟು ನಟಿಯರು. ಆ ಸಾಲಿಗೆ ರಂಜನಿ ರಾಘವನ್‌ ಕೂಡ ಸೇರುತ್ತಾರೆ ಎನ್ನಬಹುದು. ಕಾರಣ, ರಂಜನಿ ರಾಘವನ್‌ ಈಗ ಮತ್ತೂಂದು ಚಿತ್ರ ಒಪ್ಪಿದ್ದಾರೆ. ಅಷ್ಟೇ ಅಲ್ಲ, ಇನ್ನೂ ಎರಡು ಚಿತ್ರಗಳ ಮಾತುಕತೆಯೂ ಅಂತಿಮವಾಗಿದೆ.

“ಪುಟ್ಟಗೌರಿ ಮದುವೆ’ ಖ್ಯಾತಿಯ ರಂಜನಿ ರಾಘವನ್‌, “ರಾಜಹಂಸ’ ಚಿತ್ರದ ಬಳಿಕ ಒಪ್ಪಿಕೊಂಡ ಚಿತ್ರ ಯಾವುದು ಗೊತ್ತಾ? “ಸೂಫಿ’. ಚಿತ್ರದ ಶೀರ್ಷಿಕೆಯೇ ಹೇಳುವಂತೆ ಇದೊಂದು ಸಂಗೀತಕ್ಕೆ ಸಂಬಂಧಿಸಿದ ಪದ. ಇಲ್ಲಿ ರಂಜನಿ ಅವರು ಟೈಟಲ್‌ ಪಾತ್ರ ನಿರ್ವಹಿಸುತ್ತಿದ್ದಾರೆ ಎಂಬುದು ವಿಶೇಷ. ಇಡೀ ಚಿತ್ರದ ಕಥೆ ಕೂಡ ಅವರ ಸುತ್ತವೇ ಸಾಗಲಿದೆ. ಇನ್ನು, ಈ ಚಿತ್ರಕ್ಕೆ ಶಿವು ಜಮಖಂಡಿ ನಿರ್ದೇಶಕರು.

ವಿಜಯ್‌ ರಾಘವೇಂದ್ರ ಅಭಿನಯದ “ನನ್ನ ನಿನ್ನ ಪ್ರೇಮಕಥೆ’ ಬಳಿಕ ಶಿವು ಜಮಖಂಡಿ ನಿರ್ದೇಶಿಸುತ್ತಿರುವ ಚಿತ್ರವಿದು. ಈ ಚಿತ್ರಕ್ಕೆ ವಿನೋದ್‌ ಪಾಟೀಲ್‌ ಹೀರೋ. “ಜಸ್ಟ್‌ ಆಕಸ್ಮಿಕ’ ಚಿತ್ರ ಮಾಡಿದ್ದ ವಿನೋದ್‌ ಪಾಟೀಲ್‌ಗೆ “ಸೂಫಿ’ ಎರಡನೇ ಚಿತ್ರ. ಇದೊಂದು ಮ್ಯೂಸಿಕಲ್‌ ಜರ್ನಿ ಸಿನಿಮಾ ಎನ್ನುವ ರಂಜನಿ, “ಇಡೀ ಚಿತ್ರ ಸೂಫಿ ಸಂಗೀತದ ಹಿನ್ನೆಲೆಯಲ್ಲೇ ಸಾಗಲಿದೆ. ನನ್ನ ಪಾತ್ರಕ್ಕೆ ತುಂಬಾ ಪ್ರಾಮುಖ್ಯತೆ ಕೊಡಲಾಗಿದೆ.

ಅದೊಂದು ರೀತಿ ಬಜಾರಿಯಂತಹ ಪಾತ್ರವದು. “ರಾಜ ಹಂಸ’ ಚಿತ್ರದ ಬಳಿಕ ಕೇಳಿದ ಕಥೆಗಳ ಸಂಖ್ಯೆ ಎಂಟು. ಆ ಪೈಕಿ ಮಿಸ್‌ ಆಗಿದ್ದು ಎರಡು. ಬಿಟ್ಟಿದ್ದು ಆರು. ಮಿಸ್‌ ಆಗೋಕೆ ಕಾರಣ, ಡೇಟ್ಸ್‌. ಕೈ ಬಿಡಲು ಕಾರಣ ಕಥೆ, ಪಾತ್ರ ಹೊಂದಿಕೆಯಾಗಲ್ಲ ಎಂಬುದಕ್ಕೆ. ಸುಮ್ಮನೆ ಬಂದು ಹೋಗುವ ಪಾತ್ರಗಳಲ್ಲಿ ಕಾಣಿಸಿಕೊಳ್ಳಲು ನನಗೆ ಇಷ್ಟವಿರಲಿಲ್ಲ. ಹಾಗಾಗಿ, ಒಂದಷ್ಟು ಚಿತ್ರಗಳನ್ನು ಕೈ ಬಿಟ್ಟದ್ದು ನಿಜ. “ರಾಜಹಂಸ’ ನನಗೊಂದು ಒಳ್ಳೆಯ ಇಮೇಜ್‌ ತಂದುಕೊಡು.

ಆ ಚಿತ್ರ ನೋಡಿದವರೆಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದರು. ಅದರಿಂದ ಒಂದಷ್ಟು ಅವಕಾಶಗಳೂ ಬಂದಿದ್ದುಂಟು. ಹಾಗೆ ಬಂದ ಅವಕಾಶಗಳಲ್ಲಿ “ಸೂಫಿ’ ಚಿತ್ರವೂ ಒಂದು’ ಎಂದು ಹೇಳಿಕೊಳ್ಳುತ್ತಾರೆ ರಂಜನಿ. ಫೆಬ್ರವರಿಯಲ್ಲಿ ಚಿತ್ರೀಕರಣ ಶುರುವಾಗಲಿದ್ದು, ಸುಮಾರು 50 ದಿನಗಳ ಚಿತ್ರೀಕರಣ ನಡೆಯಲಿದೆ. “ನನ್ನ ನಿನ್ನ ಪ್ರೇಮಕಥೆ’ ಚಿತ್ರದಲ್ಲಿ ಕೆಲಸ ಮಾಡಿದ ಬಹುತೇಕ ತಂಡ ಇಲ್ಲಿ ಕೆಲಸ ಮಾಡಲಿದೆ. ಚಿತ್ರದಲ್ಲಿ ದೇವರಾಜ್‌, ರಮೇಶ್‌ ಭಟ್‌ ಸೇರಿದಂತೆ ಹಲವರು ನಟಿಸುತ್ತಿದ್ದಾರೆ ಎನ್ನುತ್ತಾರೆ ರಂಜನಿ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.