ತಿಲಕ್‌ ಈಗ ಕಮಾಂಡೋ; ತಮಿಳು ತಂಡದ ಕನ್ನಡ ಚಿತ್ರದಲ್ಲಿ ನಟನೆ


Team Udayavani, Jan 11, 2018, 4:43 PM IST

Tilak-(10).jpg

ತಿಲಕ್‌ ಈಗ ಹೊಸ ಗೆಟಪ್‌ನಲ್ಲಿ ಕಾಣಿಸಿಕೊಳ್ಳೋಕೆ ಸಜ್ಜಾಗಿದ್ದಾರೆ. ಹೀಗೆಂದಾಕ್ಷಣ, ಇನ್ನೇನೋ ಕಲ್ಪನೆ ಬೇಡ. ಅವರೀಗ ಹೊಸ ಚಿತ್ರವೊಂದರಲ್ಲಿ ಆರ್ಮಿ ಮ್ಯಾನ್‌ ಲುಕ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರಷ್ಟೇ. ಆ ಚಿತ್ರಕ್ಕೆ ಇನ್ನೂ ಶೀರ್ಷಿಕೆ ಪಕ್ಕಾ ಆಗಿಲ್ಲ. ಚೆನ್ನೈನ ಲೆಸ್ಲಿ ಎನ್ನುವವರು ಆ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಲೆಸ್ಲಿ ಅವರು ತಮಿಳಿನಲ್ಲಿ ಆ ಚಿತ್ರ ಮಾಡುವ ಯೋಚನೆಯಲ್ಲಿದ್ದರು. ಚಿತ್ರದ ಪಾತ್ರಕ್ಕೆ ನಯನಾತಾರಾ ಅವರೇ ಬೇಕಿದ್ದರಿಂದ, ಅವರ ಡೇಟ್ಸ್‌ ಸದ್ಯಕ್ಕಿರಲಿಲ್ಲ. ಹಾಗಾಗಿ, ಲೆಸ್ಲಿ ಅವರು ಮೊದಲು ಕನ್ನಡದಲ್ಲಿ ಆ ಚಿತ್ರವನ್ನು ಮಾಡಿ ನಂತರ ತಮಿಳಿನಲ್ಲಿ ಮಾಡಲು ನಿರ್ಧರಿಸಿ, ಇಲ್ಲಿ ಚಿತ್ರ ಮಾಡೋಕೆ ಸಜ್ಜಾಗಿದ್ದಾರೆ ಎಂಬುದು ತಿಕಲ್‌ ಮಾತು.

ತಿಲಕ್‌ ಈ ಚಿತ್ರದಲ್ಲಿ ಕಮಾಂಡೋ ಪಾತ್ರ ನಿರ್ವಹಿಸುತ್ತಿದ್ದಾರೆ. “ಅದೊಂದು ಸೈನ್ಸ್‌ ಫಿಂಕ್ಷನ್‌ ಕಥೆ. ಕನ್ನಡದಲ್ಲಿ ಸಾಕಷ್ಟು ಆ ಬಗೆಯ ಚಿತ್ರ ಬಂದಿರಬಹುದು. ಆದರೆ, ನನ್ನ ಮಟ್ಟಿಗೆ ಹೇಳುವುದಾದರೆ, ಲೆಸ್ಲಿ ಅವರ ಕಥೆ ಭಿನ್ನವಾಗಿದೆ. ತೆರೆಯ ಮೇಲೆ ಹೇಗೆ ತರಬೇಕು ಎಂಬ ಪ್ಲಾನಿಂಗ್‌ ಕೂಡ ಚೆನ್ನಾಗಿ ಮಾಡಿಕೊಂಡಿದ್ದಾರೆ. 

ಚಿಕ್ಕಮಗಳೂರು, ಕಳಸ, ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ. ಈ ಚಿತ್ರದ ಇನ್ನೊಂದು ವಿಶೇಷವೆಂದರೆ, ಇದೇ ಮೊದಲ ಸಲ ಕಮಾಂಡೋ ಪಾತ್ರ ನಿರ್ವಹಿಸುತ್ತಿದ್ದೇನೆ. ಇಲ್ಲಿ ನನ್ನ ಗೆಟಪ್‌ ಸಹ ಬದಲಾಗಿದೆ. ಅಂದರೆ, ಕ್ಲೀನ್‌ ಶೇವ್‌ ಮಾಡಿಕೊಂಡು ಪಕ್ಕಾ ಆರ್ಮಿ ಅಧಿಕಾರಿಯಾಗಿ ಕಾಣಿಸಿಕೊಳ್ಳುತ್ತಿದ್ದೇನೆ. ಶನಿವಾರದವರೆಗೂ “ಇರುವುದೆಲ್ಲವ ಬಿಟ್ಟು’ ಚಿತ್ರದ ಚಿತ್ರೀಕರಣ ನಡೆಯಲಿದೆ. ಆ ಚಿತ್ರದ ಪಾತ್ರಕ್ಕೆ ದಾಡಿ ಬಿಟ್ಟಿದ್ದು, ಭಾನುವಾರ ಕ್ಲೀನ್‌ ಶೇವ್‌ ಮಾಡಿಕೊಳ್ಳಲಿದ್ದೇನೆ. ಮುಂದಿನ ವಾರವೇ ಚಿತ್ರದ ಚಿತ್ರೀಕರಣಕ್ಕೆ ಚಾಲನೆ ಸಿಗಲಿದೆ. ಬಹುತೇಕ ತಮಿಳು ತಂತ್ರಜ್ಞರೇ ಇಲ್ಲಿ ಕೆಲಸ ಮಾಡಲಿದೆ. ಇನ್ನುಳಿದಂತೆ, ಕಲಾವಿದರ ಆಯ್ಕೆ ಕೂಡ ನಡೆಯುತ್ತಿದೆ’ ಎಂದು ವಿವರ ಕೊಡುತ್ತಾರೆ ತಿಲಕ್‌.

“ಸರ್ವಸ್ವ’ ಚಿತ್ರದ ನಂತರ ತಿಲಕ್‌ “ದಿ ವಿಲನ್‌’ ಚಿತ್ರ ಒಪ್ಪಿಕೊಂಡು, ಅದಾಗಲೇ ಲಂಡನ್‌ ಹಾಗು ಬ್ಯಾಂಕಾಕ್‌ನಲ್ಲಿ ನಡೆದ ಚಿತ್ರೀಕರಣದಲ್ಲಿ ಭಾಗವಹಿಸಿ ಬಂದಿದ್ದಾರೆ. ಆ ಬಳಿಕ ಮೇಘನಾ ರಾಜ್‌ ಅವರೊಂದಿಗೆ “ಇರುವುದೆಲ್ಲವ ಬಿಟ್ಟು’ ಚಿತ್ರದಲ್ಲಿ ನಟಿಸಿದ್ದಾರೆ. ಇನ್ನಷ್ಟು ಕಥೆಗಳನ್ನು ಕೇಳುತ್ತಿದ್ದಾರೆ. ಆದರೆ, ಯಾವುದನ್ನೂ ಅಂತಿಮ ಮಾಡಿಲ್ಲ ಎಂಬುದು ಅವರ ಮಾತು.

ಟಾಪ್ ನ್ಯೂಸ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

sanju weds geetha 2 song shooting

Sanju Weds Geetha 2; ಕಲರ್’ಫುಟ್ ಸೆಟ್ ನಲ್ಲಿ ಸಂಜು ಹಾಡು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.