ಕೋಮಲ ಹಿಂದೆ ಹೊರಟ ಪ್ರೇಮ್‌!


Team Udayavani, Jan 13, 2018, 11:52 AM IST

Prem-(9).jpg

ಕನ್ನಡ ಚಿತ್ರರಂಗದಲ್ಲಿ ಬಹುಶಃ ಇಂದ್ರಸೇನ ಅವರ ಹೆಸರು ಗೊತ್ತೇ ಇರುತ್ತೆ. ಹಲವು ಚಿತ್ರಗಳಲ್ಲಿ ಸಂಗೀತ ನೀಡಿದವರು ಇಂದ್ರಸೇನ. ಅಷ್ಟೇ ಅಲ್ಲ, ಗೀತೆ ರಚನೆ, ಕಥೆ, ಸಂಭಾಷಣೆ, ಚಿತ್ರಕಥೆಯಲ್ಲೂ ತೊಡಗಿಸಿಕೊಂಡವರು. ಈಗೇಕೆ ಅವರ ವಿಷಯ ಅನ್ನುವುದಕ್ಕೆ ಒಂದು ಕಾರಣವಿದೆ. ಅವರೀಗ ಒಂದು ಚಿತ್ರಕ್ಕೆ ಸಂಭಾಷಣೆ ಮತ್ತು ಚಿತ್ರಕಥೆ ಬರೆದಿದ್ದಾರೆ. ಆ ಚಿತ್ರಕ್ಕೆ “ಕೆ ಫಾರ್‌ ಕೋಮಲ’ ಎಂದು ನಾಮಕರಣ ಮಾಡಲಾಗಿದೆ. ಈ ಚಿತ್ರದ ಹೀರೋ ನೆನಪಿರಲಿ ಪ್ರೇಮ್‌.

ಈ ಚಿತ್ರದ ಶೀರ್ಷಿಕೆಗೆ “ಇವಳಿಂದ್ಲೇ ನಾನ್‌ ಇಂಗ್ಲೀಷ್‌ನಲ್ಲಿ ಫೇಲು..’ ಎಂಬ ಅಡಿಬರಹವಿದೆ. ಅಲ್ಲಿಗೆ ಇದೊಂದು ಮಧುರ ನೆನಪಿನ ಪಿಸುಮಾತುಗಳ ನಡುವಣ ಚಿತ್ರಣ ಅನ್ನೋದು ಗೊತ್ತಾಗುತ್ತೆ. ಈ ಚಿತ್ರಕ್ಕೆ ಶಶಾಂಕ್‌ ರಾಜ್‌ ನಿರ್ದೇಶನ ಮಾಡುತ್ತಿದ್ದಾರೆ. ಮೈಸೂರಿನ ಶಶಿಕುಮಾರ್‌ ಅವರು ಈ ಚಿತ್ರ ನಿರ್ಮಿಸುತ್ತಿದ್ದಾರೆ. ಚಿತ್ರಕ್ಕೆ ನಾಯಕಿಯ ಹುಡುಕಾಟ ನಡೆಯುತ್ತಿದೆ. ಇಂದ್ರಸೇನ ಅವರು ಸುಮಾರು 21 ಚಿತ್ರಗಳಿಗೆ ಸಂಗೀತ ನೀಡಿದ್ದಾರೆ.

ಆ ಪೈಕಿ ಹಲವು ಚಿತ್ರಗಳಿಗೆ ಸಂಭಾಷಣೆ ಬರೆದಿರುವುದು ಉಂಟು. “ನೀನಿಲ್ಲದ ಮಳೆ’ ಚಿತ್ರಕ್ಕೂ ಇಂದ್ರಸೇನ ಸಂಭಾಷಣೆ ಬರೆದು, ಸಂಗೀತದೊಂದಿಗೆ ಗೀತೆ ರಚಿಸಿದ್ದಾರೆ. ಬಹುತೇಕ ಹೊಸಬರ ಚಿತ್ರಗಳಿಗೆ ಸಂಗೀತ ಕೊಡುತ್ತಲೇ ಬಂದಿರುವ ಇಂದ್ರಸೇನ ಅವರಿಗೆ ಬರವಣಿಗೆ ಮೇಲೆ ಸಾಕಷ್ಟು ತುಡಿತ. ಅದು ಅವರನ್ನು ಸಂಭಾಷಣೆಕಾರರನ್ನಾಗಿಸಿದೆ. “ಕೆ ಫಾರ್‌ ಕೋಮಲ’ ರೆಗ್ಯುಲರ್‌ ಕಮರ್ಷಿಯಲ್‌ ಚಿತ್ರ.

ಲವ್‌ಸ್ಟೋರಿ ಇಲ್ಲಿದ್ದರೂ, ಪ್ರತಿಯೊಬ್ಬರ ಲೈಫ‌ಲ್ಲಿ ಹೈಸ್ಕೂಲ್‌ ಮಟ್ಟದಲ್ಲೊಬ್ಬ ನೆನಪಿನ ಗೆಳತಿ, ಹುಡುಗಿ, ಲವ್ವರ್‌ ಇದ್ದೇ ಇರುತ್ತಾಳೆ. ಮದುವೆಯಾಗಿ ಹೆಂಡ್ತಿ, ಮಕ್ಕಳ ಜತೆ ಹೋಗುವಾಗ, ಎಲ್ಲೋ ಒಂದು ಕಡೆ ಆ ಹೈಸ್ಕೂಲ್‌ ಹುಡುಗಿ, ಗೆಳತಿ ಅಥವಾ ಹಳೇ ಲವ್ವರ್‌ ಎದುರಾದಾಗ, ಹಿಂದಿನ ನೆನಪಿನಂಗಳದಲ್ಲಿ ಆಗುವಂತಹ ತಳಮಳ. ಆಕೆಯ ನೋಟಕ್ಕೆ ಬಿದ್ದು, ಲವ್‌ ಮಾಡಿ, ಫೇಲ್‌ ಆಗಿದ್ದನ್ನು ನೆನಪಿಸಿಕೊಳ್ಳುವ ಸಂದರ್ಭಗಳು ಹಳೇ ಮಧುರ ಕಥೆಯನ್ನು ಹೇಳುತ್ತವೆ. ಅಂತಹ ಅನೇಕ ವಿಷಯಗಳು ಈ ಚಿತ್ರದಲ್ಲಿವೆ ಎಂಬುದು ಇಂದ್ರಸೇನ ಅವರ ಮಾತು.

ಅಂದಹಾಗೆ, ಫೆಬ್ರವರಿಯಲ್ಲಿ ಚಿತ್ರಕ್ಕೆ ಚಾಲನೆ ಸಿಗಲಿದೆ. ಚಿತ್ರದಲ್ಲಿ ನಾಲ್ಕು ಹಾಡುಗಳಿರಲಿವೆ. ಜತೆಗೆ ಎರಡು ಬಿಟ್‌ ಇದೆ. ಇದೊಂದು ಮ್ಯೂಸಿಕಲ್‌ ಲವ್‌ಸ್ಟೋರಿಯಾಗಿದ್ದರೂ, ಅಪ್ಪಟ ಮನರಂಜನೆ ಇರಲಿದೆ. ಚಿತ್ರಕ್ಕೆ ನೆನಪಿರಲಿ ಪ್ರೇಮ್‌ ಈಗ ಹೀರೋ ಆಗಿ ಪಕ್ಕಾ ಆಗಿದ್ದಾರೆ. ಉಳಿದಂತೆ ರವಿಶಂಕರ್‌ ನಟಿಸುತ್ತಿದ್ದಾರೆ. ಉಳಿದ ತಾರಾಬಳಗದ ಆಯ್ಕೆ ಇನ್ನಷ್ಟೇ ನಡೆಯಬೇಕಿದೆ. ಚಿತ್ರಕ್ಕೆ  ಪ್ರಭು ಕ್ಯಾಮೆರಾ ಹಿಡಿಯುತ್ತಿದ್ದಾರೆ. ಚೈನೈ ಮೂಲದ ಪ್ರಭು ಅವರಿಗೆ ಕನ್ನಡದ ಮೊದಲ ಚಿತ್ರವಿದು ಎಂಬುದು ಅವರ ಹೇಳಿಕೆ.

ಟಾಪ್ ನ್ಯೂಸ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.