ಸತ್ಯಪ್ರಕಾಶ್ ಚಿತ್ರಕ್ಕೆ ಟೈಟಲ್ ಸಿಕ್ತು…
Team Udayavani, Jan 20, 2018, 11:34 AM IST
“ರಾಮಾ ರಾಮಾ ರೇ’ ಚಿತ್ರದ ನಂತರ ನಿರ್ದೇಶಕ ಡಿ.ಸತ್ಯಪ್ರಕಾಶ್ “ಹೆಬ್ಬುಲಿ’ ಚಿತ್ರದ ನಿರ್ಮಾಪಕರಲ್ಲೊಬ್ಬರಾದ ಉಮಾಪತಿಯವರಿಗೆ ಸಿನಿಮಾ ಮಾಡಲಿದ್ದು, ಚಿತ್ರದ ಪ್ರಮುಖ ಪಾತ್ರಕ್ಕಾಗಿ ಶಾಲಾ ಹುಡುಗನೊಬ್ಬನ ಹುಡುಕಾಟ ಮಾಡುತ್ತಿದ್ದಾರೆಂಬ ಸುದ್ದಿಯನ್ನು ನೀವು ಓದಿರುತ್ತೀರಿ. ಆಗ ಆ ಸಿನಿಮಾಕ್ಕೆ ಟೈಟಲ್ ಆಗಿರಲಿಲ್ಲ.
ಈಗ ಚಿತ್ರಕ್ಕೆ ಶೀರ್ಷಿಕೆ ಅಂತಿಮವಾಗಿದೆ. ಅದು “ಒಂದಲ್ಲಾ ಎರಡಲ್ಲಾ’. ಹೌದು, ತಮ್ಮ ನಿರ್ದೇಶನದ ಎರಡನೇ ಸಿನಿಮಾಕ್ಕೆ “ಒಂದಲ್ಲಾ ಎರಡಲ್ಲಾ’ ಎಂಬ ಟೈಟಲ್ ಇಟ್ಟಿದ್ದಾರೆ. ಕಥೆಗೆ ಈ ಶೀರ್ಷಿಕೆ ಹೆಚ್ಚು ಸೂಕ್ತ ಎನಿಸಿದ ಕಾರಣ ಆ ಶೀರ್ಷಿಕೆಯನ್ನೇ ಚಿತ್ರತಂಡ ಅಂತಿಮಗೊಳಿಸಿದೆ. ಚಿತ್ರೀಕರಣ ಈ ತಿಂಗಳಾಂತ್ಯದಿಂದ ಆರಂಭವಾಗಲಿದೆ.
ಚಿತ್ರದ ಮುಖ್ಯಪಾತ್ರಧಾರಿ 8 ರಿಂದ 10 ವರ್ಷದ ಹುಡುಗನಾಗಿರಬೇಕಾಗಿದ್ದರಿಂದ, ಚಿತ್ರತಂಡ ಆಡಿಷನ್ ಮೂಲಕ ಆಯ್ಕೆ ಮಾಡಿದೆ. ಅದರ ಹೊರತಾಗಿ ರಂಗಭೂಮಿಯಲ್ಲಿ ಅನುಭವ ಹೊಂದಿರುವ ಅನೇಕ ಕಲಾವಿದರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇದು ಕಮರ್ಷಿಯಲ್ ಸಿನಿಮಾವಲ್ಲ. ಹೊಸ ಬಗೆಯ ಕಥೆಯೊಂದಿಗೆ ಈ ಬಾರಿಯೂ ಸತ್ಯಪ್ರಕಾಶ್ ಸಿನಿಮಾ ಮಾಡುತ್ತಿದ್ದಾರೆ.
ಇಲ್ಲಿ ನಾಯಕ-ನಾಯಕಿ, ವಿಲನ್ ಯಾರೂ ಇರೋದಿಲ್ಲ. ಚಿತ್ರತಂಡ ಹೇಳುವಂತೆ ಕಥೆಯೇ ಈ ಚಿತ್ರದ ನಾಯಕ. ಚಿತ್ರಕ್ಕೆ ವಾಸುಕಿ ವೈಭವ್ ಸಂಗೀತ, ಲವಿತ್ ಛಾಯಾಗ್ರಹಣ, ವರದರಾಜ ಕಾಮತ್ ಕಲಾನಿರ್ದೇಶನ, ಕೆಂಪರಾಜು ಸಂಕಲನ ಚಿತ್ರಕ್ಕಿದೆ. ಚಿತ್ರೀಕರಣ ಮಲೆನಾಡಿನ ವಿವಿಧ ಕಡೆಗಳಲ್ಲಿ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ