50 ಸಂಭ್ರಮದಲ್ಲಿ ಮಿಂದೆದ್ದ ಮಫ್ತಿ ತಂಡ


Team Udayavani, Jan 20, 2018, 9:00 PM IST

Mufti_(136).jpg

ಶಿವರಾಜಕುಮಾರ್‌ ಹಾಗೂ ಶ್ರೀಮುರಳಿ ಅಭಿನಯದ “ಮಫ್ತಿ’ ಚಿತ್ರ ಯಶಸ್ವಿ 50 ದಿನಗಳ ಪ್ರದರ್ಶನ ಕಂಡಿದೆ. ಆ ಖುಷಿಗೆ ಶಿವರಾಜಕುಮಾರ್‌ ಅಭಿಮಾನಿಗಳೆಲ್ಲರೂ ಸೇರಿ “ಮಫ್ತಿ’ಯ ಮಸ್ತಿ ಸಂಭ್ರಮ ಆಚರಿಸಿದ್ದಾರೆ. ಶುಕ್ರವಾರ ಸಂಜೆ ಶಿವರಾಜಕುಮಾರ್‌ ಅವರ ಮನೆಯಲ್ಲಿ ಸೇರಿದ್ದ ನೂರಾರು ಅಭಿಮಾನಿಗಳು, ಚಿತ್ರತಂಡವನ್ನು ಆಹ್ವಾನಿಸಿ, ಎಲ್ಲರಿಗೂ ನೆನಪಿನ ಕಾಣಿಕೆ ನೀಡುವ ಮೂಲಕ ವಿಶೇಷವಾಗಿ 50 ದಿನಗಳ ಸಂಭ್ರಮ ಆಚರಿಸಿ ಖುಷಿಪಟ್ಟರು.

ಅಖೀಲ ಕರ್ನಾಟಕ ಡಾ.ಶಿವರಾಜಕುಮಾರ್‌ ಸೇನಾ ಸಮಿತಿ ಮತ್ತು ಗಂಡುಗಲಿ ಡಾ.ಶಿವರಾಜಕುಮಾರ್‌ ಅಭಿಮಾನಿಗಳ ಸಂಘದ ಪದಾಧಿಕಾರಿಗಳು ಜೊತೆಯಾಗಿ “ಮಫ್ತಿ’ ಚಿತ್ರದ ಸಂಭ್ರಮದಲ್ಲಿ ಮಿಂದೆದ್ದರು. ಶಿವರಾಜಕುಮಾರ್‌, ಶ್ರೀಮುರಳಿ, ನಿರ್ಮಾಪಕರಾದ ಜಯಣ್ಣ, ಭೋಗೇಂದ್ರ, ನಿರ್ದೇಶಕ ನರ್ತನ್‌, ಸಂಭಾಷಣೆಕಾರ ರಾಮ್‌ಲಕ್ಷ್ಮಣ್‌, ಸಾಹಸ ನಿರ್ದೇಶಕ ರವಿವರ್ಮ ಹಾಗು ಬಾಲನಟಿ ನೈನಾ ಸೇರಿದಂತೆ ಚಿತ್ರತಂಡ ಅಭಿಮಾನಿಗಳ ಅಭಿಮಾನದ ಪ್ರೀತಿಯ ಗೌರವ ಸ್ವೀಕರಿಸಿದರು.

ಈ ವೇಳೆ ಅಭಿಮಾನಿಗಳು ಬೃಹತ್‌ ಕೇಕ್‌ ತಂದಿದ್ದರು. ಆದರೆ, ಶಿವರಾಜಕುಮಾರ್‌ ಅವರು, ಕೇಕ್‌ ಕಟ್‌ ಮಾಡಲು ಒಪ್ಪಲಿಲ್ಲ. ಕಾರಣ, ಕಾಶಿನಾಥ್‌ ಅವರ ಅಗಲಿಕೆ. ಮೊನ್ನೆಯಷ್ಟೇ ಕಾಶಿನಾಥ್‌ ಅವರು ನಿಧನರಾಗಿದ್ದಾರೆ. ನಾವು ಸಿಹಿ ಹಂಚಿ ತಿನ್ನೋದು ಸರಿಯಲ್ಲ. 50 ದಿನದ ಸಂಭ್ರಮ ಪಡೋಣ ಆದರೆ, ಕೇಕ್‌ ಕಟ್‌ ಮಾಡುವುದು ಬೇಡ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿದರು.

ಈ ಚಿತ್ರದ ಯಶಸ್ಸಿನ ಹಿಂದೆ ಜನರಿದ್ದಾರೆ. ಎಲ್ಲಕ್ಕೂ ಹೆಚ್ಚಾಗಿ, ಇಡೀ ತಂಡ ಶ್ರಮ ಪಟ್ಟು ಕೆಲಸ ಮಾಡಿದೆ. ಒಳ್ಳೆಯ ಚಿತ್ರಕ್ಕೆ ಜನರು ಬೆಂಬಲಿಸುತ್ತಾರೆ ಎಂಬುದಕ್ಕೆ “ಮಫ್ತಿ’ ಸಾಕ್ಷಿ. ನಿರ್ದೇಶಕರಿಗೆ ಇನ್ನೂ ಒಳ್ಳೆಯ ಯಶಸ್ಸು ಸಿಗಲಿ’ ಎಂದು ಶುಭಹಾರೈಸಿದರು ಶಿವರಾಜಕುಮಾರ್‌. ಶ್ರೀಮುರಳಿ ಕೂಡ ಗೆಲುವಿನ ಬಗ್ಗೆ ಖುಷಿಗೊಂಡು, ಈ ಗೆಲುವು ತಂಡದ ಶ್ರಮಕ್ಕೆ ಸಿಕ್ಕಿದ್ದು ಎಂದರು. ಉಳಿದಂತೆ ವೇದಿಕೆಯಲ್ಲಿದ್ದವರೆಲ್ಲರೂ ಅನುಭವ ಹಂಚಿಕೊಂಡರು.

ಟಾಪ್ ನ್ಯೂಸ್

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.