ನರ್ತಕಿ ಮುಂದೆ ಡಾ.ರಾಜ್‌ ಕಟೌಟ್‌


Team Udayavani, Jan 22, 2018, 10:41 AM IST

Kanaka.jpg

ಸಾಮಾನ್ಯವಾಗಿ ಗಾಂಧಿನಗರದಲ್ಲಿ ಥಿಯೇಟರ್‌ ಮುಂದೆ ಕಟೌಟ್‌ ನಿಲ್ಲಿಸೋದು ಸಿನಿಮಾ ಬಿಡುಗಡೆಯ ಮುನ್ನ ದಿನ, ಅಂದರೆ ಗುರುವಾರ ರಾತ್ರಿ. ಆದರೆ, ಈ ಬಾರಿ ನರ್ತಕಿ ಚಿತ್ರಮಂದಿರದ ಮುಂದೆ ಇದೇ ಬುಧವಾರ (ಜ.24) ಬೃಹತ್‌ ಕಟೌಟ್‌ ಒಂದು ತಲೆ ಎತ್ತಲಿದೆ. ಕೇವಲ ತಲೆ ಎತ್ತುವುದಷ್ಟೇ ಅಲ್ಲ, ಅಭಿಮಾನಿಗಳು ಮೆರವಣಿಗೆ ಮೂಲಕ ಬಂದು ಬೃಹತ್‌ ಹಾರ ಹಾಗೂ ಹಾಲಿನಾಭಿಷೇಕ ಕೂಡಾ ಮಾಡಲಿದ್ದಾರೆ.

ಅಷ್ಟಕ್ಕೂ ಯಾರ ಕಟೌಟ್‌ ಎಂದರೆ ಅದು ಡಾ.ರಾಜಕುಮಾರ್‌ ಅವರ ಕಟೌಟ್‌. ಹೌದು, ನರ್ತಕಿ ಚಿತ್ರಮಂದಿರದ ಮುಂದೆ ಬುಧವಾರ ಬೆಳಗ್ಗೆ ರಾಜಕುಮಾರ್‌ ಅವರ 80 ಅಡಿ ಕಟೌಟ್‌ ತಲೆ ಎತ್ತಲಿದೆ. ರಾಜ್‌ಕುಮಾರ್‌ ಅವರ ಯಾವ ಚಿತ್ರವಾದರೂ ಮರುಬಿಡುಗಡೆಯಾಗುತ್ತಿದೆಯಾ ಎಂದು ನೀವು ಕೇಳಬಹುದು. ಖಂಡಿತಾ ಇಲ್ಲ. ಕಟೌಟ್‌ ತಲೆ ಎತ್ತಲು ಕಾರಣ “ಕನಕ’ ಚಿತ್ರ.

ಆರ್‌.ಚಂದ್ರು ನಿರ್ದೇಶನ, ನಿರ್ಮಾಣದ “ಕನಕ’ ಚಿತ್ರ ಜನವರಿ 26 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಚಿತ್ರದಲ್ಲಿ ದುನಿಯಾ ವಿಜಯ್‌ ನಾಯಕ. ಅವರಿಲ್ಲಿ ರಾಜ್‌ಕುಮಾರ್‌ ಅಭಿಮಾನಿಯಾಗಿ ಕಾಣಿಸಿಕೊಂಡಿದ್ದಾರೆ. ಡಾ.ರಾಜ್‌ ಅವರ ಆದರ್ಶಗಳನ್ನು ಪಾಲಿಸಿಕೊಂಡು ಬರುತ್ತಿರುವ ನಾಯಕನ ಪಾತ್ರ ಅವರದು. ಅದೇ ಕಾರಣದಿಂದ ಈಗ ಡಾ.ರಾಜ್‌ಕುಮಾರ್‌ ಅವರ ಬೃಹತ್‌ ಕಟೌಟ್‌ ಅನ್ನು “ಕನಕ’ ಬಿಡುಗಡೆಯಾಗುತ್ತಿರುವ ಪ್ರಮುಖ ಚಿತ್ರಮಂದಿರದ ಮುಂದೆ ನಿಲ್ಲಿಸಲಾಗುತ್ತದೆ.

“ಅಣ್ಣಾವ್ರ ಆದರ್ಶಗಳನ್ನಿಟ್ಟುಕೊಂಡು ಈ ಸಿನಿಮಾ ಮಾಡಿದ್ದೇನೆ. ಇಡೀ ಸಿನಿಮಾದ ಥೀಮ್‌ ಕೂಡಾ ಅದೇ. ಆ ಕಾರಣದಿಂದ ಅಣ್ಣಾವ್ರ ಕಟೌಟ್‌ ಅನ್ನು ಬುಧವಾರ ಅದ್ಧೂರಿಯಾಗಿ ನಿಲ್ಲಿಸುತ್ತಿದ್ದೇವೆ’ ಎನ್ನುತ್ತಾರೆ ನಿರ್ದೇಶಕ ಚಂದ್ರು. ಅಣ್ಣಾವ್ರ ಕಟೌಟ್‌ ಜೊತೆ ವಿಜಯ್‌ ಕಟೌಟ್‌ ಕೂಡಾ ತಲೆ ಎತ್ತಲಿದೆ. ಅಂದಹಾಗೆ ಚಿತ್ರ 350 ರಿಂದ 400 ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ. 

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.