ಅಭಿಮಾನಿಗಳ ಸಮ್ಮುಖದಲ್ಲಿ ನಿಖಿಲ್ ಬರ್ತ್ಡೇ
Team Udayavani, Jan 23, 2018, 10:53 AM IST
ಯುವ ನಟ ನಿಖಿಲ್ಕುಮಾರ್ ಸೋಮವಾರ ತಮ್ಮ ಅಭಿಮಾನಿಗಳ ಸಮ್ಮುಖದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡರು. ಬೆಳಗ್ಗೆಯಿಂದಲೇ ರಾಜ್ಯದ ಹಲವು ಕಡೆಯಿಂದ ಆಗಮಿಸಿದ ಅಭಿಮಾನಿಗಳು ಅವರ ಮನೆಯ ಮುಂದೆ ನಿಂತು ಜೈಕಾರ ಕೂಗುವ ಮೂಲಕ ವಿಶೇಷವಾದ ಕೇಕ್ ಕತ್ತರಿಸಿ ಹುಟ್ಟಹಬ್ಬವನ್ನು ಆಚರಿಸಿದರು.
ಸಾಲಗಟ್ಟಿ ನಿಂತಿದ್ದ ಅಭಿಮಾನಿಗಳನ್ನು ಪ್ರೀತಿಯಿಂದಲೇ ಬಂದು ಮಾತನಾಡಿಸಿದ ನಿಖಿಲ್ ಅವರ ಕೈ ಕುಲುಕಿ, ಜೊತೆಗೊಂದು ಫೋಟೋ ತೆಗೆಸಿಕೊಂಡು ಅಭಿಮಾನಿಗಳನ್ನು ಖುಷಿಪಡಿಸಿದರು. ಈ ವೇಳೆ “ಕುರುಕ್ಷೇತ್ರ’ ನಿರ್ಮಾಪಕ ಮುನಿರತ್ನ ಅವರು ನಿಖಿಲ್ಕುಮಾರ್ ಮನೆಗೆ ತೆರಳಿ, ಹುಟ್ಟುಹಬ್ಬದ ಶುಭಕೋರಿದ್ದಾರೆ.
ಇದೇ ಸಂದರ್ಭದಲ್ಲಿ ನಿಖಿಲ್ಕುಮಾರ್ ಅವರ ಅಭಿಮಾನಿಗಳು ತನ್ನ ಪ್ರೀತಿಯ ನಾಯಕನ ಹುಟ್ಟುಹಬ್ಬದ ಅಂಗವಾಗಿ ಅನ್ನದಾನ, ರಕ್ತದಾನ ಕೂಡ ಹಮ್ಮಿಕೊಂಡಿದ್ದರು. ನಿಖಿಲ್ಕುಮಾರ್ “ಜಾಗ್ವಾರ್’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟು, ಈಗ “ಕುರುಕ್ಷೇತ್ರ’ ಚಿತ್ರದಲ್ಲಿ ಅಭಿಮನ್ಯು ಪಾತ್ರವನ್ನು ನಿರ್ವಹಿಸಿದ್ದಾರೆ. ಈಗಾಗಲೇ ನಿಖಿಲ್ಕುಮಾರ್ ಅವರ ವಿಶೇಷ ಪೋಸ್ಟರ್ ಮತ್ತು ಟೀಸರ್ಗೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ.
ನಿರ್ದೇಶಕ ಎ.ಹರ್ಷ ಅವರ ಅವರ ನಿರ್ದೇಶನದ ‘ಸೀತಾರಾಮ ಕಲ್ಯಾಣ’ ಚಿತ್ರಕ್ಕೂ ನಿಖಿಲ್ ಕುಮಾರ್ ಹೀರೋ ಆಗಿದ್ದಾರೆ. ಈ ಚಿತ್ರಕ್ಕೆ ರಚಿತಾ ರಾಮ್ ನಾಯಕಿಯಾಗಿದ್ದು, ಉಳಿದಂತೆ ತಮಿಳು ನಟ ಶರತ್ಕುಮಾರ್, ಆದಿತ್ಯ ಮೆನನ್, ಸುಧಾರಾಣಿ, ಸಾಧುಕೋಕಿಲ, ಚಿಕ್ಕಣ್ಣ ಸೇರಿದಂತೆ ಹಲವರು ಅಭಿನಯಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು
Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್ ಟೀಂ
MUST WATCH
ಹೊಸ ಸೇರ್ಪಡೆ
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ