ನರ್ತಕಿ ಎದುರು ಅಣ್ಣಾವ್ರ ಕಟೌಟ್‌


Team Udayavani, Jan 26, 2018, 12:00 PM IST

Kanaka-(8).jpg

ಬೆಂಗಳೂರಿನ ನರ್ತಕಿ ಚಿತ್ರಮಂದಿರ ಎದುರು ಡಾ.ರಾಜಕುಮಾರ್‌ ಅವರ ಕಟೌಟ್‌ ನಿಂತಿದೆ. ಹೌದು, ಬುಧವಾರ ದುನಿಯಾ ವಿಜಯ್‌ ಅಭಿಮಾನಿಗಳು ಅಣ್ಣಾವ್ರ ಕಟೌಟ್‌ಗೆ ಹಾರ ಹಾಕಿ ಹಾಲಿನ ಅಭಿಷೇಕ ಮಾಡುವ ಮೂಲಕ “ಕನಕ’ನ ಆಗಮನಕ್ಕೆ ಸಜ್ಜಾಗಿದ್ದಾರೆ. ನಿರ್ದೇಶಕ ಕಮ್‌ ನಿರ್ಮಾಪಕ ಆರ್‌.ಚಂದ್ರು ಅವರು, ನರ್ತಕಿ ಚಿತ್ರಮಂದಿರದಲ್ಲಿ ಅಣ್ಣಾವ್ರ ಕಟೌಟ್‌ ನಿಲ್ಲಿಸುವುದಾಗಿ ಈ ಹಿಂದೆ ಹೇಳಿದ್ದರು.

ಅದರಂತೆ, ಅವರು ಕಟೌಟ್‌ ನಿಲ್ಲಿಸುವ ಮೂಲಕ  ಅಭಿಮಾನಿಗಳ ಮೊಗದಲ್ಲಿ ಸಂತಸದ ಹೊಳೆ ಹರಿಸಿದ್ದಾರೆ. “ಒಡಹುಟ್ಟಿದವರು’ “ಆಕಸ್ಮಿಕ’, “ಶಬ್ಧವೇದಿ’ ಚಿತ್ರಗಳ ಬಳಿಕ ನರ್ತಕಿ ಚಿತ್ರಮಂದಿರದಲ್ಲಿ ಈಗ ಅಣ್ಣಾವ್ರ ಕಟೌಟ್‌ ನಿಂತಿದೆ. ಸುಮಾರು ಎರಡುವರೆ ದಶಕಗಳ ಹಿಂದೆ ಅಣ್ಣಾವ್ರ ಚಿತ್ರಗಳು ನರ್ತಕಿ ಚಿತ್ರಮಂದಿರದಲ್ಲಿ ಬಿಡುಗಡೆಯಾದಾಗ, ಅಲ್ಲಿ ಎತ್ತರದ ಕಟೌಟ್‌ ತಲೆಎತ್ತುತ್ತಿದ್ದವು.

ಅಭಿಮಾನಿಗಳು ಸಂತಸದಿಂದಲೇ ಕಟೌಟ್‌ಗೆ ಹಾರ ಹಾಕಿ ಸಂಭ್ರಮಿಸುತ್ತಿದ್ದರು. ಆ ಸಂಭ್ರಮ ಈಗ “ಕನಕ’ ಚಿತ್ರದ ಬಿಡುಗಡೆ ಮುನ್ನ ಕಾಣಬಹುದಾಗಿದೆ. ಬುಧವಾರ ಬೆಳಗ್ಗೆಯೇ ಅಣ್ಣಾವ್ರ ಕಟೌಟ್‌ ನಿಂತಿದ್ದು, ಅಭಿಮಾನಿಗಳು ಕಟೌಟ್‌ ನಿಲ್ಲಿಸುವ ಸಂದರ್ಭದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಇಂದು “ಕನಕ’ ರಾಜ್ಯಾದ್ಯಂತ ತೆರೆ ಕಾಣುತ್ತಿದ್ದು, ಅಣ್ಣಾವ್ರ ಕಟೌಟ್‌ ಪಕ್ಕ “ಕನಕ’ ಚಿತ್ರದ ನಾಯಕ ದುನಿಯಾ ವಿಜಯ್‌ ಅವರ ಕಟೌಟ್‌ ಕೂಡ ನಿಲ್ಲಲಿದೆ. 

“ಕನಕ’ಗೆ “ರಾಜ್‌ಕುಮಾರ್‌ ಫ್ಯಾನ್‌’ ಎಂಬ ಅಡಿಬರಹ ಕೂಡಾ ಇದೆ.  “ಕನಕ’ ಆಟೋ ಡ್ರೆ„ವರ್‌ ಒಬ್ಬನ ಕಥೆ. ಆತನೇನು ಡಿಗ್ರಿ ಮಾಡಿದೋನಲ್ಲ. ಓದಿದ್ದು ಕಡಿಮೆಯೇ. ಆದರಾತ ಅಪ್ಪಟವಾಗಿ ಡಾ. ರಾಜ್‌ಕುಮಾರ್‌ ಅವರ ಅಭಿಮಾನಿ. ಇಂಥಾ ವ್ಯಕ್ತಿಯ ಲವ್‌, ಅದರ ಸುತ್ತಲ ಘಟನಾವಳಿಗಳನ್ನು ಸಿನಿಮಾ ಮಾಡಲು ಹೊರಟಿದ್ದಾರೆ ಚಂದ್ರು.

ಚಿತ್ರದಲ್ಲಿ ತೆಲುಗು ನಟಿ ಸುಧಾ ಅವರು ನಟಿಸಿದ್ದಾರೆ. ವಿಶೇಷವೆಂದರೆ, ಅವರಿಲ್ಲಿ ದುನಿಯಾ ವಿಜಯ್‌ ಅವರ ತಾಯಿಯಾಗಿ ನಟಿಸುತ್ತಿದ್ದಾರೆ. ನಟಿ ಸುಧಾ ಅವರು ತೆಲುಗಿನಲ್ಲಿ ಬಹು ಬೇಡಿಕೆಯ ಪೋಷಕ ನಟಿ. ಚಿರಂಜೀವಿ ಸೇರಿದಂತೆ ಮಹೇಶ್‌ಬಾಬು ಹಾಗೂ ಇತರೆ ನಟರ ಬಹುತೇಕ ಚಿತ್ರಗಳಲ್ಲಿ ನಟಿಸಿದ್ದಾರೆ.

ಚಿತ್ರದಲ್ಲಿನ ವಿಜಯ್‌ ಅವರ ಇಂಟ್ರೋಡಕ್ಷನ್‌ ಸಾಂಗ್‌ ಅನ್ನು ಅದ್ಧೂರಿಯಾಗಿ ಚಿತ್ರೀಕರಿಸಲಾಗಿದೆ. ವಿಶಿಷ್ಟವಾದ ವಾರಿಯರ್‌ ಶೈಲಿಯ  ಈ ಹಾಡು ದೇವನಹಳ್ಳಿ ಬಳಿ ಹದಿನೈದೆಕರೆಯಷ್ಟು ವಿಶಾಲವಾದ ಕೆಂಪು ಹುಡಿ ಮಣ್ಣಿನ ಪ್ರದೇಶದಲ್ಲಿ ಚಿತ್ರೀಕರಣಗೊಂಡಿದೆ. ಚಿತ್ರಕ್ಕೆ ಸತ್ಯ ಹೆಗಡೆ ಛಾಯಾಗ್ರಹಣ, ನವೀನ್‌ ಸಜ್ಜು ಸಂಗೀತವಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.