ನರ್ತಕಿ ಎದುರು ಅಣ್ಣಾವ್ರ ಕಟೌಟ್‌


Team Udayavani, Jan 26, 2018, 12:00 PM IST

Kanaka-(8).jpg

ಬೆಂಗಳೂರಿನ ನರ್ತಕಿ ಚಿತ್ರಮಂದಿರ ಎದುರು ಡಾ.ರಾಜಕುಮಾರ್‌ ಅವರ ಕಟೌಟ್‌ ನಿಂತಿದೆ. ಹೌದು, ಬುಧವಾರ ದುನಿಯಾ ವಿಜಯ್‌ ಅಭಿಮಾನಿಗಳು ಅಣ್ಣಾವ್ರ ಕಟೌಟ್‌ಗೆ ಹಾರ ಹಾಕಿ ಹಾಲಿನ ಅಭಿಷೇಕ ಮಾಡುವ ಮೂಲಕ “ಕನಕ’ನ ಆಗಮನಕ್ಕೆ ಸಜ್ಜಾಗಿದ್ದಾರೆ. ನಿರ್ದೇಶಕ ಕಮ್‌ ನಿರ್ಮಾಪಕ ಆರ್‌.ಚಂದ್ರು ಅವರು, ನರ್ತಕಿ ಚಿತ್ರಮಂದಿರದಲ್ಲಿ ಅಣ್ಣಾವ್ರ ಕಟೌಟ್‌ ನಿಲ್ಲಿಸುವುದಾಗಿ ಈ ಹಿಂದೆ ಹೇಳಿದ್ದರು.

ಅದರಂತೆ, ಅವರು ಕಟೌಟ್‌ ನಿಲ್ಲಿಸುವ ಮೂಲಕ  ಅಭಿಮಾನಿಗಳ ಮೊಗದಲ್ಲಿ ಸಂತಸದ ಹೊಳೆ ಹರಿಸಿದ್ದಾರೆ. “ಒಡಹುಟ್ಟಿದವರು’ “ಆಕಸ್ಮಿಕ’, “ಶಬ್ಧವೇದಿ’ ಚಿತ್ರಗಳ ಬಳಿಕ ನರ್ತಕಿ ಚಿತ್ರಮಂದಿರದಲ್ಲಿ ಈಗ ಅಣ್ಣಾವ್ರ ಕಟೌಟ್‌ ನಿಂತಿದೆ. ಸುಮಾರು ಎರಡುವರೆ ದಶಕಗಳ ಹಿಂದೆ ಅಣ್ಣಾವ್ರ ಚಿತ್ರಗಳು ನರ್ತಕಿ ಚಿತ್ರಮಂದಿರದಲ್ಲಿ ಬಿಡುಗಡೆಯಾದಾಗ, ಅಲ್ಲಿ ಎತ್ತರದ ಕಟೌಟ್‌ ತಲೆಎತ್ತುತ್ತಿದ್ದವು.

ಅಭಿಮಾನಿಗಳು ಸಂತಸದಿಂದಲೇ ಕಟೌಟ್‌ಗೆ ಹಾರ ಹಾಕಿ ಸಂಭ್ರಮಿಸುತ್ತಿದ್ದರು. ಆ ಸಂಭ್ರಮ ಈಗ “ಕನಕ’ ಚಿತ್ರದ ಬಿಡುಗಡೆ ಮುನ್ನ ಕಾಣಬಹುದಾಗಿದೆ. ಬುಧವಾರ ಬೆಳಗ್ಗೆಯೇ ಅಣ್ಣಾವ್ರ ಕಟೌಟ್‌ ನಿಂತಿದ್ದು, ಅಭಿಮಾನಿಗಳು ಕಟೌಟ್‌ ನಿಲ್ಲಿಸುವ ಸಂದರ್ಭದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಇಂದು “ಕನಕ’ ರಾಜ್ಯಾದ್ಯಂತ ತೆರೆ ಕಾಣುತ್ತಿದ್ದು, ಅಣ್ಣಾವ್ರ ಕಟೌಟ್‌ ಪಕ್ಕ “ಕನಕ’ ಚಿತ್ರದ ನಾಯಕ ದುನಿಯಾ ವಿಜಯ್‌ ಅವರ ಕಟೌಟ್‌ ಕೂಡ ನಿಲ್ಲಲಿದೆ. 

“ಕನಕ’ಗೆ “ರಾಜ್‌ಕುಮಾರ್‌ ಫ್ಯಾನ್‌’ ಎಂಬ ಅಡಿಬರಹ ಕೂಡಾ ಇದೆ.  “ಕನಕ’ ಆಟೋ ಡ್ರೆ„ವರ್‌ ಒಬ್ಬನ ಕಥೆ. ಆತನೇನು ಡಿಗ್ರಿ ಮಾಡಿದೋನಲ್ಲ. ಓದಿದ್ದು ಕಡಿಮೆಯೇ. ಆದರಾತ ಅಪ್ಪಟವಾಗಿ ಡಾ. ರಾಜ್‌ಕುಮಾರ್‌ ಅವರ ಅಭಿಮಾನಿ. ಇಂಥಾ ವ್ಯಕ್ತಿಯ ಲವ್‌, ಅದರ ಸುತ್ತಲ ಘಟನಾವಳಿಗಳನ್ನು ಸಿನಿಮಾ ಮಾಡಲು ಹೊರಟಿದ್ದಾರೆ ಚಂದ್ರು.

ಚಿತ್ರದಲ್ಲಿ ತೆಲುಗು ನಟಿ ಸುಧಾ ಅವರು ನಟಿಸಿದ್ದಾರೆ. ವಿಶೇಷವೆಂದರೆ, ಅವರಿಲ್ಲಿ ದುನಿಯಾ ವಿಜಯ್‌ ಅವರ ತಾಯಿಯಾಗಿ ನಟಿಸುತ್ತಿದ್ದಾರೆ. ನಟಿ ಸುಧಾ ಅವರು ತೆಲುಗಿನಲ್ಲಿ ಬಹು ಬೇಡಿಕೆಯ ಪೋಷಕ ನಟಿ. ಚಿರಂಜೀವಿ ಸೇರಿದಂತೆ ಮಹೇಶ್‌ಬಾಬು ಹಾಗೂ ಇತರೆ ನಟರ ಬಹುತೇಕ ಚಿತ್ರಗಳಲ್ಲಿ ನಟಿಸಿದ್ದಾರೆ.

ಚಿತ್ರದಲ್ಲಿನ ವಿಜಯ್‌ ಅವರ ಇಂಟ್ರೋಡಕ್ಷನ್‌ ಸಾಂಗ್‌ ಅನ್ನು ಅದ್ಧೂರಿಯಾಗಿ ಚಿತ್ರೀಕರಿಸಲಾಗಿದೆ. ವಿಶಿಷ್ಟವಾದ ವಾರಿಯರ್‌ ಶೈಲಿಯ  ಈ ಹಾಡು ದೇವನಹಳ್ಳಿ ಬಳಿ ಹದಿನೈದೆಕರೆಯಷ್ಟು ವಿಶಾಲವಾದ ಕೆಂಪು ಹುಡಿ ಮಣ್ಣಿನ ಪ್ರದೇಶದಲ್ಲಿ ಚಿತ್ರೀಕರಣಗೊಂಡಿದೆ. ಚಿತ್ರಕ್ಕೆ ಸತ್ಯ ಹೆಗಡೆ ಛಾಯಾಗ್ರಹಣ, ನವೀನ್‌ ಸಜ್ಜು ಸಂಗೀತವಿದೆ.

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.