ಧ್ವಜ ಹಾರಿಸಿದ ಅಶೋಕ್ ಕಶ್ಯಪ್
Team Udayavani, Feb 12, 2018, 7:00 PM IST
ಜಗ್ಗೇಶ್ ಅಭಿನಯದ “ಲಿಫ್ಟ್ ಕೊಡ್ಲ’ ಚಿತ್ರ ನಿರ್ದೇಶಿಸಿದ್ದ ಅಶೋಕ್ ಕಶ್ಯಪ್ ಅವರು ಸದ್ದಿಲ್ಲದೆಯೇ ಒಂದು ಸಿನಿಮಾ ಮಾಡು ಮುಗಿಸಿದ್ದಾರೆ. ಆ ಚಿತ್ರಕ್ಕೀಗ ಹಿನ್ನೆಲೆ ಸಂಗೀತದ ಕೆಲಸ ನಡೆಯುತ್ತಿದೆ. ಅಂದಹಾಗೆ, ಅಶೋಕ್ ಕಶ್ಯಪ್ ನಿರ್ದೇಶನದ ಚಿತ್ರಕ್ಕೆ “ಧ್ವಜ’ ಎಂದು ನಾಮಕರಣ ಮಾಡಲಾಗಿದೆ. ಸಿಬಿಜೆ ಪ್ರೊಡಕ್ಷನ್ಸ್ ಬ್ಯಾನರ್ನಲ್ಲಿ ಸುಧಾ ಬಸವೇಗೌಡ ಅವರು ನಿರ್ಮಿಸುತ್ತಿರುವ ಈ ಚಿತ್ರದಲ್ಲಿ ಪ್ರಿಯಾಮಣಿ ನಾಯಕಿಯಾಗಿ ನಟಿಸಿದ್ದಾರೆ.
ರವಿ ನಾಯಕರಾಗಿ ಅಭಿನಯಿಸಿದ್ದಾರೆ. ಅವರಿಲ್ಲಿ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ಅಶೋಕ್ ಕಶ್ಯಪ್ ನಿರ್ದೇಶನದ ಜತೆಗೆ ಛಾಯಾಗ್ರಹಣವನ್ನೂ ಮಾಡಿದ್ದಾರೆ. ಇದೊಂದು ರಾಜಕೀಯ, ಲವ್ಸ್ಟೋರಿ ಮತ್ತು ಥ್ರಿಲ್ಲರ್ ಅಂಶಗಳನ್ನು ಒಳಗೊಂಡಿದೆ. ಬೆಂಗಳೂರು, ಮೈಸೂರು ಮತ್ತು ಮೇಲುಕೋಟೆಯಲ್ಲಿ ಸುಮಾರು 80 ದಿನಗಳ ಕಾಲ ಚಿತ್ರೀಕರಣ ಮಾಡಿದ್ದಾರೆ.
ಚಿತ್ರದಲ್ಲಿ ದಿವ್ಯಾ ಉರುಡುಗ, ಟಿ.ಎನ್. ಸೀತಾರಾಂ, ವೀಣಾಸುಂದರ್, ತಬಲನಾಣಿ, ಬಲ, ಮಂಡ್ಯ ರವಿ, ಸುಂದರರಾಜ್ ಸೇರಿದಂತೆ ಇನ್ನು ಅನೇಕ ಕಲಾವಿದರು ನಟಿಸಿದ್ದಾರೆ. ಚಿತ್ರದ ಐದು ಹಾಡುಗಳಿಗೆ “ಕಬಾಲಿ’ ಚಿತ್ರಕ್ಕೆ ಸಂಗೀತ ನೀಡಿದ್ದ ಸಂತೋಷ್ ನಾರಾಯಣನ್ ಸಂಗೀತ ನೀಡಿದ್ದಾರೆ.
ಕೆ.ಕಲ್ಯಾಣ್, ಕವಿರಾಜ್, ರವಿ, ಚಂದನ್ ಹಾಗೂ ಮಂಜು ಮಾಂಡವ್ಯ ಗೀತೆಗಳನ್ನು ರಚಿಸಿದ್ದಾರೆ. ರವಿಚಂದ್ರನ್ ಸಂಕಲನ ಮಾಡಿದರೆ, ಕಲೈ, ತ್ರಿಭುವನ್ ನೃತ್ಯ ನಿರ್ದೇಶನ ಮಾಡಿದ್ದಾರೆ. ಮಾಸ್ ಮಾದ, ಜಾಲಿ ಬಾಸ್ಟಿನ್ ಸಾಹಸ ನಿರ್ದೇಶನವಿದೆ. ಪ್ರಕಾಶ್ ಅವರ ಕಲಾ ನಿರ್ದೇಶನ ಚಿತ್ರಕ್ಕಿದೆ. ಮಂಜು ಮಾಂಡವ್ಯ ಸಂಭಾಷಣೆ ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್ ಶೋ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ
Kannada Cinema: ತೆರೆಗೆ ಬಂತು ಯುವ, ತಾರಿಣಿ
MUST WATCH
ಹೊಸ ಸೇರ್ಪಡೆ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’