ಮತ್ತೆ ಬಂದ ಯಜಮಾನ: ಆಗ ವಿಷ್ಣುವರ್ಧನ್‌ – ಈಗ ದರ್ಶನ್‌


Team Udayavani, Feb 13, 2018, 9:30 PM IST

darshan-(2).jpg

ಫೆಬ್ರವರಿ 16 ದರ್ಶನ್‌ ಹುಟ್ಟುಹಬ್ಬ. ಅಭಿಮಾನಿಗಳ ಸಂಭ್ರಮ ಈಗಾಗಲೇ ಆರಂಭವಾಗಿದೆ. ಈ ನಡುವೆಯೇ ದರ್ಶನ್‌ ಅವರ 51ನೇ ಚಿತ್ರದ ಶೀರ್ಷಿಕೆ ಕುತೂಹಲ ಕೂಡಾ ಅಭಿಮಾನಿಗಳಲ್ಲಿದೆ. ತಮ್ಮ ನೆಚ್ಚಿನ ನಟನ ಚಿತ್ರದ ಟೈಟಲ್‌ ಏನಿರಬಹುದೆಂಬುದನ್ನು ತಿಳಿಯಲು ಅಭಿಮಾನಿಗಳು ಉತ್ಸುಕರಾಗಿದ್ದಾರೆ. ಅದಕ್ಕೆ ಈಗ ಉತ್ತರ ಸಿಕ್ಕಿದೆ. ಅದು “ಯಜಮಾನ’. ಹೌದು, ದರ್ಶನ್‌ ಅವರ 51ನೇ ಚಿತ್ರಕ್ಕೆ “ಯಜಮಾನ’ ಎಂದು ಟೈಟಲ್‌ ಇಡಲಾಗಿದೆ.

ಹಾಗಾಗಿ, ಮುಂದಿನ ದಿನಗಳಲ್ಲಿ ದರ್ಶನ್‌ ಅಭಿಮಾನಿಗಳು ಪ್ರೀತಿಯಿಂದ ಅವರನ್ನು ಯಜಮಾನ ಎಂದು ಕರೆಯಬಹುದು. ನಿಮಗೆ ಗೊತ್ತಿರುವಂತೆ “ಯಜಮಾನ’ ಶೀರ್ಷಿಕೆಯಡಿ ಈಗಾಗಲೇ ಚಿತ್ರ ಬಂದಿದೆ. ವಿಷ್ಣುವರ್ಧನ್‌ ಅವರು ನಟಿಸಿರುವ ಈ ಚಿತ್ರ ದೊಡ್ಡ ಯಶಸ್ಸು ಕಂಡಿದೆ. ಈಗ 18 ವರ್ಷಗಳ ನಂತರ ಮತ್ತೆ ಈ ಟೈಟಲ್‌ ರಿಪೀಟ್‌ ಆಗಿದೆ. ಸಹಜವಾಗಿಯೇ ಈಗ ಹಳೆಯ ಯಶಸ್ವಿ ಹಾಗೂ ಸ್ಟಾರ್‌ ನಟರ ಚಿತ್ರಗಳ ಶೀರ್ಷಿಕೆಗಳು ಬಳಕೆಯಾಗುತ್ತಿವೆ.

ಈಗಾಗಲೇ ವಿಷ್ಣುವರ್ಧನ್‌ ಅವರ ಮತ್ತೂಂದು ಯಶಸ್ವಿ ಚಿತ್ರ “ಕೋಟಿಗೊಬ್ಬ’ ಇಟ್ಟುಕೊಂಡು ಸುದೀಪ್‌ ಸಿನಿಮಾ ಮಾಡಿದ್ದಾರೆ. ಈಗ ಆ ಸಾಲಿಗೆ ಹೊಸ ಸೇರ್ಪಡೆ “ಯಜಮಾನ’. ದರ್ಶನ್‌ “ಯಜಮಾನ’ ಟೈಟಲ್‌ನಡಿ ನಟಿಸುತ್ತಿರುವುದರಿಂದ ದರ್ಶನ್‌ ಅಭಿಮಾನಿಗಳ ಜೊತೆ ವಿಷ್ಣುವರ್ಧನ್‌ ಅವರ ಅಭಿಮಾನಿಗಳು ಕೂಡಾ ಚಿತ್ರದ ಬಗ್ಗೆ ಕುತೂಹಲ ಹೊಂದಿದ್ದಾರೆ. ಈ ಚಿತ್ರವನ್ನು ಬಿ.ಸುರೇಶ್‌ ಹಾಗೂ ಶೈಲಜಾ ನಾಗ್‌ ನಿರ್ಮಿಸುತ್ತಿದ್ದು, ಪಿ.ಕುಮಾರ್‌ ಈ ಸಿನಿಮಾದ ನಿರ್ದೇಶಕರು.

ಇತ್ತೀಚೆಗಷ್ಟೇ ಈ ಚಿತ್ರದ ಮುಹೂರ್ತ ನಡೆದಿತ್ತು. ಚಿತ್ರದಲ್ಲಿ ದರ್ಶನ್‌ಗೆ ನಾಯಕಿಯಾಗಿ ರಶ್ಮಿಕಾ ಮಂದಣ್ಣ ನಟಿಸುತ್ತಿದ್ದಾರೆ. ಚಿತ್ರದ ಚಿತ್ರೀಕರಣ ಫೆಬ್ರವರಿ 19ರಿಂದ ಆರಂಭವಾಗಲಿದೆ. ಚಿತ್ರಕ್ಕೆ ಹರಿಕೃಷ್ಣ ಸಂಗೀತ,”ಬಹದ್ದೂರ್‌’ ಚೇತನ್‌ ಸಂಭಾಷಣೆ,  ಶ್ರೀಶ ಕೂದುವಳ್ಳಿ ಛಾಯಾಗ್ರಹಣವಿದೆ. ಚಿತ್ರದಲ್ಲಿ ರವಿಶಂಕರ್‌, ದೇವರಾಜ್‌, ಧನಂಜಯ್‌ ಸೇರಿದಂತೆ ಅನೇಕರು ನಟಿಸುತ್ತಿದ್ದಾರೆ. 

ಅಂದಹಾಗೆ, ದರ್ಶನ್‌ ಅವರ 50ನೇ ಚಿತ್ರ “ಕುರುಕ್ಷೇತ್ರ’ ಸದ್ಯ ಪೋಸ್ಟ್‌ ಪ್ರೊಡಕ್ಷನ್‌ ಕೆಲಸದಲ್ಲಿ ಬಿಝಿ. ಇನ್ನು, ಈ ಹಿಂದೆ ದರ್ಶನ್‌ “ಒಡೆಯರ್‌’ ಸಿನಿಮಾದಲ್ಲಿ ನಟಿಸುತ್ತಾರೆ ಹಾಗೂ ಈ ಚಿತ್ರವನ್ನು ಸಂದೇಶ್‌ ನಾಗರಾಜ್‌ ನಿರ್ಮಿಸುತ್ತಾರೆಂಬ ಸುದ್ದಿಯನ್ನು ನೀವು ಕೇಳಿರುತ್ತೀರಿ. ಆರಂಭದಲ್ಲಿ ಈ ಚಿತ್ರವನ್ನು ಪವನ್‌ ಒಡೆಯರ್‌ ನಿರ್ದೇಶಿಸುತ್ತಾರೆಂದು ಹೇಳಲಾಗಿತ್ತು. ಆ ನಂತರ ಪವನ್‌ ಬದಲಾದ ಸುದ್ದಿಯೂ ಬಂತು.

ಎಲ್ಲಾ ಓಕೆ, ಹಾಗಾದರೆ “ಒಡೆಯರ್‌’ ಚಿತ್ರವನ್ನು ಯಾರು ನಿರ್ದೇಶಿಸುತ್ತಾರೆಂದು ನೀವು ಕೇಳಬಹುದು. ಅದಕ್ಕೆ ಉತ್ತರ ಎಂ.ಡಿ. ಶ್ರೀಧರ್‌. ಈಗಾಗಲೇ ಎಂ.ಡಿ.ಶ್ರೀಧರ್‌ ಅವರು ದರ್ಶನ್‌ ಜೊತೆ “ಪೊರ್ಕಿ’ ಹಾಗೂ “ಬುಲ್‌ ಬುಲ್‌’ ಸಿನಿಮಾ ಮಾಡಿದ್ದಾರೆ. ಈಗ “ಒಡೆಯರ್‌’ ಚಿತ್ರ ಮಾಡುವ ಅವಕಾಶ ಸಿಕ್ಕಿದೆ. 

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.