ಟಗರು ಹವಾ ಶುರು!


Team Udayavani, Feb 20, 2018, 11:01 AM IST

Tagaru.jpg

ಶಿವರಾಜಕುಮಾರ್‌ ಅಭಿಮಾನಿಗಳು ಶುಕ್ರವಾರಕ್ಕೆ ಕಾಯುತ್ತಿದ್ದಾರೆ. ಕುತೂಹಲದಿಂದ ಕಾಯುತ್ತಿದ್ದ ಸಿನಿಮಾವನ್ನು ಬೆಳ್ಳಂಬೆಳಗೆ ಕಣ್ತುಂಬಿಕೊಳ್ಳಲು ತುದಿಗಾಲಿನಲ್ಲಿ ನಿಂತಿದ್ದಾರೆ. ಇಷ್ಟು ಹೇಳಿದ ಮೇಲೆ ಯಾವ ಸಿನಿಮಾ ಬಗ್ಗೆ ಹೇಳುತ್ತಿದ್ದೇವೆ ಎಂದು ನಿಮಗೆ ಗೊತ್ತಾಗಿರಬಹುದು. ಹೌದು, ನಾವು ಹೇಳುತ್ತಿರೋದು “ಟಗರು’ ಸಿನಿಮಾ ಬಗ್ಗೆ. ಟ್ರೇಲರ್‌ ಹಾಗೂ ಹಾಡುಗಳ ಮೂಲಕ ಸಿಕ್ಕಾಪಟ್ಟೆ ನಿರೀಕ್ಷೆ ಹುಟ್ಟಿಸಿರುವ “ಟಗರು’ ಚಿತ್ರ ಈ ವಾರ (ಫೆ.23) ತೆರೆಕಾಣುತ್ತಿದೆ.

ಇತ್ತೀಚಿನ ವರ್ಷಗಳಲ್ಲಿ ಅತಿ ಹೆಚ್ಚು ನಿರೀಕ್ಷೆ ಹುಟ್ಟಿಸಿರುವ ಶಿವರಾಜಕುಮಾರ್‌ ಚಿತ್ರವೆಂದರೆ ಅದು “ಟಗರು’. ಸೂರಿ ನಿರ್ದೇಶನದ ಈ ಚಿತ್ರವನ್ನು ಕೆ.ಪಿ.ಶ್ರೀಕಾಂತ್‌ ನಿರ್ಮಿಸಿದ್ದಾರೆ. ಮಾನ್ವಿತಾ ಹರೀಶ್‌ ಹಾಗೂ ಭಾವನಾ ನಾಯಕಿಯರು. “ಟಗರು’ ಚಿತ್ರ ಪ್ರದರ್ಶನ ಶುಕ್ರವಾರ ಮುಂಜಾನೆ 5.45 ರಿಂದಲೇ ಆರಂಭವಾಗಲಿದ್ದು, ಚಿತ್ರಮಂದಿರಗಳಲ್ಲಿ ದಿನಕ್ಕೆ 6 ಶೋಗಳ ಪ್ರದರ್ಶನ ಕಾಣಲಿದೆ. ಸಾಮಾನ್ಯವಾಗಿ ಬಳ್ಳಾರಿ, ಹೊಸಪೇಟೆಗಳಲ್ಲಿ ಕನ್ನಡ ಚಿತ್ರಗಳು ಮುಂಜಾನೆ ಪ್ರದರ್ಶನ ಕಾಣುತ್ತಿದ್ದವು.

ಆದರೆ, “ಟಗರು’ ಚಿತ್ರ ಕೇವಲ ಬಳ್ಳಾರಿ, ಹೊಸಪೇಟೆಯಷ್ಟೇ ಅಲ್ಲದೇ, ರಾಜ್ಯದ ಬಹುತೇಕ ಚಿತ್ರಮಂದಿರಗಳಲ್ಲಿ ಮುಂಜಾನೆ ಪ್ರದರ್ಶನ ಕಾಣುತ್ತಿರೋದು ವಿಶೇಷ. ಇನ್ನು, ಅಭಿಮಾನಿಗಳು ಕೂಡಾ ತಮ್ಮದೇ ಶೈಲಿಯಲ್ಲಿ “ಟಗರು’ ಸಂಭ್ರವನ್ನು ಆಚರಿಸಲಿದ್ದಾರೆ. ಮೆರವಣಿಗೆ, ಅನ್ನದಾನ ಸೇರಿದಂತೆ ಶಿವರಾಜಕುಮಾರ್‌ ಅಭಿಮಾನಿ ಸಂಘಗಳು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿವೆ.

ಈಗಾಗಲೇ ಚಿತ್ರದ ಮುಂಗಡ ಬುಕ್ಕಿಂಗ್‌ ಕೂಡಾ ಆರಂಭವಾಗಿದ್ದು, ಬುಕ್ಕಿಂಗ್‌ನಲ್ಲೂ “ಟಗರು’ ಹವಾ ಜೋರಾಗಿದೆ.  300 ರಿಂದ 400 ಚಿತ್ರಮಂದಿರಗಳಲ್ಲಿ “ಟಗರು’ ಬಿಡುಗಡೆಯಾಗುತ್ತಿದ್ದು, ಕೇವಲ ಕರ್ನಾಟಕವಷ್ಟೇ ಅಲ್ಲದೇ, ಹೊರರಾಜ್ಯಗಳಲ್ಲೂ ಫೆ.23 ರಂದೇ ಬಿಡುಗಡೆಯಾಗುತ್ತಿದೆ. ಚೆನ್ನೈ, ಪುಣೆ, ಮುಂಬೈ, ಗೋವಾ, ಅಹಮದಾಬಾದ್‌, ಹೈದರಾಬಾದ್‌, ದೆಹಲಿ ಸೇರಿದಂತೆ ಹಲವು ಕಡೆಗಳಲ್ಲಿ “ಟಗರು’ ಚಿತ್ರ ಬಿಡುಗಡೆಯಾಗುತ್ತಿದೆ.

ಚಿತ್ರದ ಬಗೆಗಿನ ಕ್ರೇಜ್‌ ಕಂಡು ನಿರ್ಮಾಪಕ ಕೆ.ಪಿ.ಶ್ರೀಕಾಂತ್‌ ಖುಷಿಯಾಗಿದ್ದಾರೆ. “ಅಭಿಮಾನಿಗಳು ಗುರುವಾರ ಮಧ್ಯರಾತ್ರಿಯೇ ಸಿನಿಮಾ ಪ್ರದರ್ಶನ ಮಾಡುವಂತೆ ಒತ್ತಾಯಿಸುತ್ತಿದ್ದಾರೆ. ಆದರೆ, ನಾವೇ ಬೇಡ ಎಂದು ಶುಕ್ರವಾರ ಮುಂಜಾನೆಯಿಂದ ಪ್ರದರ್ಶನ ಆರಂಭಿಸುತ್ತಿದ್ದೇವೆ. ಶಿವಣ್ಣ ಅಭಿಮಾನಿಗಳು “ಟಗರು’ ಸಂಭ್ರಮವನ್ನು ಬೇರೆ ಬೇರೆ ರೀತಿಯಲ್ಲಿ ಆಚರಿಸುತ್ತಿದ್ದೇವೆ. “ಜೋಗಿ’, “ಜೋಗಯ್ಯ’ ನಂತರ ಈಗ “ಟಗರು’ಗೆ ಈ ಮಟ್ಟದ ಕ್ರೇಜ್‌ ಹುಟ್ಟಿದೆ’ ಎನ್ನುವುದು ಶ್ರೀಕಾಂತ್‌ ಮಾತು. 

* ಮುಂಜಾನೆ 5.45 ರಿಂದ ಪ್ರದರ್ಶನ ಆರಂಭ
* ಮೆರವಣಿಗೆ, ಅನ್ನದಾನ ಮೂಲಕ ಅಭಿಮಾನಿಗಳ ಸಂಭ್ರಮ
* ಹೊರರಾಜ್ಯಗಳಲ್ಲೂ ಫೆ.23ರಂದೇ ಬಿಡುಗಡೆ

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.