ನಾನು ಚಿತ್ರ ನೋಡುವುದಕ್ಕೆ ಬಹಳ ಕಾತುರನಾಗಿದ್ದೀನಿ


Team Udayavani, Feb 21, 2018, 11:40 AM IST

Tagaru—-02.jpg

“ಕಡ್ಡಿಪುಡಿ’ ಚಿತ್ರದ ಸಂತೋಷಕೂಟದಲ್ಲೇ ಶಿವರಾಜಕುಮಾರ್‌ ಒಂದು ಮಾತು ಹೇಳಿದ್ದರು. ಇನ್ನೊಮ್ಮೆ ನಿರ್ದೇಶಕ ಸೂರಿ ಜೊತೆಗೆ ಕೆಲಸ ಮಾಡಬೇಕೆಂದು. ಅವರಿಬ್ಬರನ್ನು ಮತ್ತೂಮ್ಮೆ ಯಾರು ಸೇರಿಸುತ್ತಾರೆ ಎಂಬ ಕುತೂಹಲ ಎಲ್ಲರಿಗೂ ಇತ್ತು. ಈಗ ಅದು ಈಡೇರಿದೆ. ಸೂರಿ ನಿರ್ದೇಶನದಲ್ಲಿ ಶಿವರಾಜಕುಮಾರ್‌ ನಟಿಸಿರುವ “ಟಗರು’ ಚಿತ್ರವು ಶುಕ್ರವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

“ನಾನು ಮಾಡಿರುವ ಚಿತ್ರಗಳಲ್ಲೇ “ಕಡ್ಡಿಪುಡಿ’ ಒಂದು ಫೈನೆಸ್ಟ್‌ ಸಿನಿಮಾ. ಅದೊಂದು ಕಲ್ಟ್ ಚಿತ್ರ. ಟೆನ್ನಿಸ್‌ ಸ್ಟಾರ್‌ ಮಹೇಶ್‌ ಭೂಪತಿಯವರೂ ಸಹ ಚಿತ್ರ ನೋಡಿ ಅದ್ಭುತವಾಗಿದೆ ಎಂದು ಹೇಳಿದ್ದರು. ಅದಕ್ಕೂ ಮುನ್ನವೇ ಸೂರಿ ಜೊತೆಗೆ ಇನ್ನೊಂದು ಸಿನಿಮಾ ಮಾಡುವ ಬಗ್ಗೆ ಹೇಳಿದ್ದೆ. ಆಮೇಲೆ “ಟಗರು’ ಬಂತು. ಇದೊಂದು ವಿಭಿನ್ನ ಸಿನಿಮಾ. ಸೂರಿ ಬ್ರಾಂಡಿನ ಪೆಕ್ಯೂಲಿಯರ್‌ ಸಿನಿಮಾ.

“ಟಗರು – ಮೈಯೆಲ್ಲಾ ಪೊಗರು’ ಎಂಬ ಹೆಸರೇ ಹೇಳುವಂತೆ, ಇಲ್ಲಿ ಹೀರೋನ ಆ್ಯಟಿಟ್ಯೂಡ್‌ ಬಹಳ ವಿಭಿನ್ನ. ಅವನ ವರ್ತನೆ ವಿಭಿನ್ನ ಅಂದರೆ, 80 ಸೀನ್‌ಗಳಲ್ಲೂ ತಲೆ ಕೆಟ್ಟೋನ ತರಹ ಆಡ್ತಾನೆ ಅಂತಲ್ಲ. ಪರಿಸ್ಥಿತಿಗೆ ತಕ್ಕಂತೆ ಅವನ ಆ್ಯಟಿಟ್ಯೂಡ್‌ ತೋರಿಸುತ್ತಾನೆ. ಈ ತರಹ ಸಿನಿಮಾ ಬಂದಿಲ್ಲ ಅಂತಲ್ಲ. ಬಂದಿದ್ದರೂ ಜನ ಕನೆಕ್ಟ್ ಆಗುತ್ತಾರೆ’ ಎಂಬ ನಂಬಿಕೆ ಶಿವರಾಜಕುಮಾರ್‌ ಅವರಿಗಿದೆ.

“ಟಗರು – ಮೈಯೆಲ್ಲಾ ಪೊಗರು’ ಶುರುವಾಗಿದ್ದು ಕಳೆದ ನವೆಂಬರ್‌ನಲ್ಲಿ. ಸ್ವಲ್ಪ ನಿಧಾನವಾಯ್ತಲ್ಲ ಎಂದರೆ, ಅದಕ್ಕೆ ಕಾರಣ- ಚಿತ್ರದ ಪೋಸ್ಟರ್‌ಗಳು ಎನ್ನುತ್ತಾರೆ ಅವರು. “ನಾವು ಆರಂಭದಲ್ಲಿ ಫೋಟೋ ಶೂಟ್‌ ಮಾಡಿ ಪೋಸ್ಟರ್‌ಗಳನ್ನ ಬಿಟ್ಟೆವು. ಆ ಪೋಸ್ಟರ್‌ಗಳು ಯಾವ ಮಟ್ಟಿಗೆ ಹಿಟ್‌ ಆಯಿತು ಎಂದರೆ, ಇದಕ್ಕೆ ಇಷ್ಟೇ ಸಾಲಲ್ಲ, ಇನ್ನೇನೋ ಬೇಕು ಅಂತ ಸೂರಿಗೆ ಅನಿಸೋಕೆ ಶುರುವಾಯ್ತು.

ಜನ ಇಟ್ಟ ನಂಬಿಕೆ ಮತ್ತು ನಿರೀಕ್ಷೆಗಳು ಮಿಸ್‌ಫೈರ್‌ ಆಗಬಾರದು ಎಂಬ ಕಾರಣಕ್ಕೆ ಸೂರಿ ಕೂತು ಇನ್ನಷ್ಟು ವರ್ಕ್‌ ಮಾಡಿದರು. ಆಮೇಲೆ ಚಿತ್ರ ಇನ್ನೊಂದು ಲೆವೆಲ್‌ಗೆ ಹೋಯಿತು. ಚಿತ್ರ ನೋಡಿದವರು, ಪೊಗರು ಚೆನ್ನಾಗಿದೆ ಎಂದು ಖಂಡಿತಾ ಮಾತಾಡುತ್ತಾರೆ ಎಂಬ ನಂಬಿಕೆ ನನಗಿದೆ’ ಎನ್ನುತ್ತಾರೆ ಅವರು. ಇಷ್ಟಕ್ಕೂ “ಟಗರು’ ಚಿತ್ರದ ಕಥೆ ಏನು? ಕಥೆಯನ್ನು ಶಿವರಾಜಕುಮಾರ್‌ ಅವರು ಬಿಟ್ಟುಕೊಡುವುದಿಲ್ಲ.

ಬರೀ ಚಿತ್ರದ ಒನ್‌ಲೈನ್‌ ಅಷ್ಟೇ ಹೇಳುತ್ತಾರೆ.”ಚೇಸಿಂಗ್‌ ದಿ ಕ್ರೈಮ್‌ ಅನ್ನೋದು ಈ ಚಿತ್ರದ ಹಿನ್ನೆಲೆ. ಇಲ್ಲಿ ನಾಯಕ ಕ್ರೈಮ್‌ನ ಯಾವ್ಯಾವ ರೀತಿಯಲ್ಲಿ ಬೆನ್ನು ಹತ್ತುತ್ತಾನೆ ಅನ್ನೋದು ಕಥೆ. ಇಲ್ಲಿ ಸಂಗೀತ ಬಹಳ ಮುಖ್ಯವಾದ ಪಾತ್ರ ವಹಿಸಿದೆ. ಚಿತ್ರವನ್ನು ಸಂಗೀತ ಇನ್ನೊಂದು ಲೆವೆಲ್‌ಗೆ ತೆಗೆದುಕೊಂಡು ಹೋಗಬಹುದು ಎಂದು ನಿರೀಕ್ಷೆ ಮಾಡಿರಲಿಲ್ಲ. ಆದರೆ, ಚರಣ್‌ರಾಜ್‌ ಬಹಳ ಅದ್ಭುತವಾಗಿ ಕೆಲಸ ಮಾಡಿದ್ದಾರೆ.

ಇಡೀ ಚಿತ್ರದ ಸೌಂಡಿಂಗ್‌ ಬಹಳ ಚೆನ್ನಾಗಿ ಬಂದಿದೆ. ಪದೇಪದೇ ಕೇಳಬೇಕು ಅನಿಸುತ್ತೆ’ ಎಂಬುದು ಶಿವರಾಜಕುಮಾರ್‌ ಅವರ ಅಭಿಪ್ರಾಯ. ಇನ್ನು ಸೂರಿ ನಿರ್ದೇಶನ ಮತ್ತು ಮಹೇಂದ್ರ ಸಿಂಹ ಅವರ ಛಾಯಾಗ್ರಹಣದ ಬಗ್ಗೆ ಒಳ್ಳೆಯ ಮಾತುಗಳನ್ನಾಡುತ್ತಾರೆ ಶಿವರಾಜಕುಮಾರ್‌. “ಇಂಥದ್ದೊಂದು ಒಳ್ಳೆಯ ತಂಡವನ್ನು ಜೊತೆಗೆ ಸೇರಿಸಿದ್ದು ಸೂರಿ.

ನಾನೊಬ್ಬನೇ ಏನೋ ವಿಭಿನ್ನವಾಗಿ ಮಾಡ್ತೀನಿ ಅಂತ ಮಾಡೋಕೆ ಆಗಲ್ಲ. ಒಂದು ಬೇರೆ ಪ್ರಯತ್ನ ಮಾಡಬೇಕು ಎಂದರೆ ಈ ತರಹದ ಜನ ಬೇಕು. ಎಲ್ಲರೂ ಒಟ್ಟಾದಾಗಲೇ ಅದೊಂದು ಸಿನಿಮಾ ಆಗೋಕೆ ಸಾಧ್ಯ. ನಾವೇನೋ ವಿಭಿನ್ನ ಸಿನಿಮಾ ಮಾಡ್ತೀವಿ ಎಂದರೆ ಸಾಲದು. ಜನರಿಗೂ ನಾವು ವಿಭಿನ್ನವಾಗಿ ಏನೋ ಮಾಡಿದ್ದೀವಿ ಎನಿಸಬೇಕು. ಅದಕ್ಕೆ ಎಲ್ಲರ ಸಾಥ್‌ ಬೇಕು.

ಈ ಚಿತ್ರದಲ್ಲಿ ಅದಾಗಿದೆ. ಧನಂಜಯ್‌, ವಸಿಷ್ಠ ತರಹದ ಒಳ್ಳೆಯ ಕ್ಯಾಲಿಬರ್‌ನ ಕಲಾವಿದರಿದ್ದಾರೆ. ಭಾವನಾ ಮೆನನ್‌, ದೇವರಾಜ್‌, ಮಾನ್ವಿತಾ ಹೀಗೆ ಹೊಸಬರು, ಹಳಬರು ಎಲ್ಲಾ ಸೇರಿ ಈ ಚಿತ್ರ ಮಾಡಿದ್ದಾರೆ. ಒಂದೊಂದು ಫ್ರೆಮ್‌ ಅನ್ನೂ ಮಹೇಂದ್ರ ಸಿಂಹ ಮತ್ತು ಸೂರಿ ಬಹಳ ಅದ್ಭುತವಾಗಿ ಡಿಸೈನ್‌ ಮಾಡಿದ್ದಾರೆ. ಇದೆಲ್ಲಾ ಕಾರಣಗಳಿಗೆ ಚಿತ್ರದಲ್ಲಿ ನಟಿಸಿರುವುದಕ್ಕೆ ಬಹಳ ಖುಷಿ ಇದೆ.

ಕೆಲವು ಸಿನಿಮಾಗಳು ಮುಗಿದರೆ ಸಾಕು ಅಂತ ಅನ್ನಿಸೋದು ಉಂಟು. ಆದರೆ, ಈ ಚಿತ್ರ ಮಾತ್ರ ಇದುವರೆಗೂ ಸಾಕು ಎನಿಸಿಲ್ಲ. ನಿಜ ಹೇಳಬೇಕೆಂದರೆ, ಈ ಚಿತ್ರ ಹೇಗೆ ಬಂದಿದೆ ಅಂತ ನನಗೇ ತುಂಬಾ ಕುತೂಹಲವಿದೆ. ಹಾಗಾಗಿ ನಾನು ಚಿತ್ರ ನೋಡುವುದಕ್ಕೆ ಬಹಳ ಕಾತುರನಾಗಿದ್ದೀನಿ’ ಎನ್ನುತ್ತಾರೆ ಶಿವರಾಜಕುಮಾರ್‌.

ಟಾಪ್ ನ್ಯೂಸ್

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.