ಮಾರ್ಚ್‌ 9ಕ್ಕೆ ಯಾವುದೇ ಕನ್ನಡ ಚಿತ್ರ ಬಿಡುಗಡೆ ಇಲ್ಲ


Team Udayavani, Mar 3, 2018, 4:14 PM IST

ufo-cuba.jpg

ಇತ್ತೀಚಿನ ದಿನಗಳಲ್ಲಿ ವಾರಕ್ಕೆ ಆರೆಂಟು ಸಿನಿಮಾಗಳು ಬಿಡುಗಡೆಯಾಗುತ್ತಿರುವುದು ಎಲ್ಲರಿಗೂ ಗೊತ್ತೇ ಇದೆ. ಆದರೆ, ಈ ವಾರ ಯಾವುದೇ ಕನ್ನಡ ಚಿತ್ರವೂ ಬಿಡುಗಡೆಯಾಗುತ್ತಿಲ್ಲ. ಅದಕ್ಕೆ ಕಾರಣ, ಚಿತ್ರಪ್ರದರ್ಶನದಲ್ಲಿ ಉಂಟಾಗಿರುವ ಸಮಸ್ಯೆ. ಯುಎಫ್ಓ ಮತ್ತು ಕ್ಯೂಬ್‌ ವೆಚ್ಚ ದುಬಾರಿಯಾಗುತ್ತಿರುವ ಹಿನ್ನೆಲೆಯಲ್ಲಿ, ರಿಯಾಯಿತಿಗಾಗಿ ನಡೆಸಿದ ಸಭೆಗಳು ವಿಫ‌ಲವಾಗಿದ್ದು ಮಾರ್ಚ್‌ 9ರಿಂದ ಯುಎಫ್ಓ ಹಾಗೂ ಕ್ಯೂಬ್‌ ಯಾವುದೇ ಹೊಸ ಚಿತ್ರಗಳನ್ನು ಕೊಡದಿರಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ತೀರ್ಮಾನಿಸಿದೆ. 

ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು ಈ ವಿಷಯವನ್ನು ಸ್ಪಷ್ಟಪಡಿಸಿರುವ ಅವರು, “ಈಗಾಗಲೇ ಆಂಧ್ರ, ತೆಲಂಗಾಣ, ಪುದುಚೆರಿ, ತಮಿಳುನಾಡು, ಕೇರಳ ರಾಜ್ಯಗಳು ಕಳೆದ ಮಾರ್ಚ್‌ 2 ರಿಂದಲೇ ಹೊಸ ಚಿತ್ರಗಳನ್ನು ಕೊಡದೆ ಧರಣಿ ನಡೆಸುತ್ತಿವೆ. ಕನ್ನಡ ಚಿತ್ರರಂಗ ಕೂಡ ಮಾರ್ಚ್‌ 2ರಿಂದಲೇ ಹೊಸ ಚಿತ್ರಗಳನ್ನು ಕೊಡದಿರಲು ತೀರ್ಮಾನಿಸಲಾಗಿತ್ತು. ಆದರೆ, ಕೆಲ ಚಿತ್ರಗಳು ಒಪ್ಪಂದ ಮಾಡಿಕೊಂಡ ಹಿನ್ನೆಲೆಯಲ್ಲಿ, ಅವುಗಳಿಗೆ ಬಿಡುಗಡೆಯ ಅವಕಾಶ ಮಾಡಿಕೊಟ್ಟು, ಮಾರ್ಚ್‌ 9 ರಿಂದ ಯಾವುದೇ ಹೊಸ ಚಿತ್ರಗಳನ್ನು ಕೊಡಬಾರದು ಎಂದು ನಿರ್ಧರಿಸಲಾಗಿದೆ’ ಎಂದು ಸಾ.ರಾ.ಗೋವಿಂದು ಹೇಳಿದರು.

“ಮಾರ್ಚ್‌ 9ರಂದು ಎಂಟು ಚಿತ್ರಗಳು ಬಿಡುಗಡೆಗೆ ಸಜ್ಜಾಗಿದ್ದವು. ಆ ಚಿತ್ರಗಳ ನಿರ್ಮಾಪಕರ ಜತೆಗೆ ಮಾತುಕತೆ ನಡೆಸಿ, ಅವರಿಂದ ಒಪ್ಪಿಗೆ ಪಡೆದು, ಪತ್ರಕ್ಕೆ ಸಹಿ ಹಾಕುವ ಮೂಲಕ ಮಾರ್ಚ್‌ 9 ರಂದು ಯಾವುದೇ ಚಿತ್ರ ಬಿಡುಗಡೆ ಮಾಡದಿರಲು ತೀರ್ಮಾನಿಸಲಾಗಿದೆ. ಮಾರ್ಚ್‌ 9ರಂದು “ಯೋಗಿ ದುನಿಯಾ’, “ದಂಡುಪಾಳ್ಯ 3′,” ಓ ಪ್ರೇಮವೇ’, “ನನಗಿಷ್ಟ’, “ಮುಖ್ಯಮಂತ್ರಿ ಕಳೆದೋದ್ನಪ್ಪೋ’, “ಹೀಗೊಂದು ದಿನ’, “ಇದಂ ಪ್ರೇಮಂ ಜೀವನಂ’ ಚಿತ್ರಗಳು ಬಿಡುಗಡೆಯಾಗಬೇಕಿತ್ತು. ಆದರೆ, ಯುಎಫ್ಓ, ಕ್ಯೂಬ್‌ನ ಈಗಿನ ದರದಲ್ಲಿ ಶೇ.25ರಷ್ಟು ಕಡಿಮೆ ಮಾಡಬೇಕೆಂಬ ಮಂಡಳಿಯ ಒತ್ತಾಯಕ್ಕೆ ಸಹಕರಿಸಿ, ನಿರ್ಮಾಪಕರು ಚಿತ್ರ ಬಿಡುಗಡೆಯನ್ನು ಮುಂದೂಡಲು ಒಪ್ಪಿದ್ದಾರೆ.

ಮಂಡಳಿ ಏನೇ ತೀರ್ಮಾನ ತೆಗೆದುಕೊಂಡರೂ ಅದು ನಿರ್ಮಾಪಕರ ಒಳಿತಿಗಾಗಿ. ಈ ವಾರ ತೆರೆಕಾಣಬೇಕಿದ್ದ ಚಿತ್ರಗಳು ಈ ಸಮಸ್ಯೆ ಬಗೆಹರಿದರೆ, ಮುಂದಿನ ವಾರ ಬಿಡುಗಡೆಯಾಗಲಿವೆ. ಮುಂದಿನ ವಾರ ಅಂದರೆ, ಮಾರ್ಚ್‌ 16ಕ್ಕೆ ಬಿಡುಗಡೆಯಾಗಬೇಕಿದ್ದ ಚಿತ್ರಗಳು ಮಾರ್ಚ್‌ 23 ಕ್ಕೆಹೋಗಲಿವೆ. ಹಾಗೆಯೇ ಬಿಡುಗಡೆ ದಿನಾಂಕ ಘೋಷಿಸಿರುವ ಚಿತ್ರಗಳು ಒಂದೊಂದು ವಾರ ಮುಂದಕ್ಕೆ ಹೋಗಬೇಕು.

ಈಗ ಬಿಡುಗಡೆಯಾಗದ ಚಿತ್ರಗಳಿಗೆ ಮುಂದಿನವಾರ ಮೊದಲ ಆದ್ಯತೆ ಕಲ್ಪಿಸುವುದಾಗಿ ಹೇಳಿದರಲ್ಲದೆ, ಮಂಡಳಿ ಮಾತಿಗೆ ಒಪ್ಪಿದ ಎಲ್ಲಾ ನಿರ್ಮಾಪಕರಿಗೂ ಅಭಿನಂದಿಸುವುದಾಗಿ’ ಹೇಳಿದರು ಸಾ.ರಾ.ಗೋವಿಂದು. “ಈಗಾಗಲೇ ಪರ್ಯಾಯ ವ್ಯವಸ್ಥೆಗೆ ಮಾತುಕತೆಯೂ ನಡೆಸಲಾಗಿದ್ದು, ಒಬ್ಬರು ಮಂಡಳಿಗೆ ಪತ್ರ ಬರೆದಿದ್ದಾರೆ. ಎಲ್ಲಾ ಸೌಲಭ್ಯದೊಂದಿಗೆ ಚಿತ್ರ ಬಿಡುಗಡೆಗೆ ಅವಕಾಶ ಮಾಡಿಕೊಡುವ ಬಗ್ಗೆ ಚರ್ಚಿಸಿದ್ದಾರೆ. ಪ್ರೊಜೆಕ್ಟರ್‌ ಮತ್ತು ಸರ್ವರ್‌ಗಳಿಗೆ ತುಂಬಾ ವೆಚ್ಚ ತಗುಲಿರುವುದರಿಂದ, ಅದನ್ನು ಯಾರು ವ್ಯವಸ್ಥೆ ಮಾಡಬೇಕು ಎಂಬ ಕುರಿತು ಮಾತುಕತೆ ನಡೆಯುತ್ತಿದೆ.

ಒಂದು ವೇಳೆ, ಕೇವಲ ಮಲ್ಟಿಪ್ಲೆಕ್ಸ್‌ಗಳಲ್ಲಿ ಚಿತ್ರ ಬಿಡುಗಡೆ ಮಾಡುತ್ತೇವೆ ಎನ್ನುವ ನಿರ್ಮಾಪಕರಿಗೆ ವ್ಯವಸ್ಥೆ ಮಾಡಿಕೊಡಲಾಗುತ್ತದೆ. ಮಲ್ಟಿಪ್ಲೆಕ್ಸ್‌ನವರು ಅವರೇ ಸ್ವತಹ ಸರ್ವರ್‌ ಹಾಕಿಕೊಂಡಿದ್ದು, ಅಲ್ಲಿ ಯಾವುದೇ ಸಮಸ್ಯೆ ಇಲ್ಲ. ಒಟ್ಟು 60 ಮಲ್ಟಿಪ್ಲೆಕ್ಸ್‌ಗಳಿದ್ದು, ಅಲ್ಲಿ ಬಿಡುಗಡೆ ಮಾಡುವ ಚಿತ್ರಗಳಿಗೆ ಯಾವುದೇ ಸಮಸ್ಯೆ ಇಲ್ಲ’ ಎಂದರು ಸಾ.ರಾ.ಗೋವಿಂದು. ಈ ವೇಳೆ ಎಂ.ಜಿ. ರಾಮಮೂರ್ತಿ, ಎನ್‌.ಎಂ. ಸುರೇಶ್‌, ಪ್ರವೀಣ್‌ಕುಮಾರ್‌, ನಿರ್ಮಾಪಕರಾದ ಮನೋಜ್‌, ತನುಷ್‌, ಶಿವಕುಮಾರ್‌ ಇತರರು ಇದ್ದರು.

ಬೇಡಿಕೆ ಈಡೇರುವವರೆಗೂ ಚಿತ್ರ ಬಿಡುಗಡೆ ಮಾಡುವುದಿಲ್ಲ: ನಿರ್ಮಾಪಕ ಸಿದ್ಧರಾಜು ಮಾತನಾಡಿ, “ಮಾರ್ಚ್‌ 2ರಿಂದ ಐದು ರಾಜ್ಯಗಳು ಯಾವುದೇ ಚಿತ್ರಗಳನ್ನು ಬಿಡುಗಡೆ ಮಾಡಿಲ್ಲ. ನಮ್ಮಲ್ಲೂ ಕೂಡ ಮಾ.9 ರಿಂದ ಯಾವ ಚಿತ್ರಗಳನ್ನೂ ಬಿಡುಗಡೆ ಮಾಡಬಾರದು ಎಂಬ ಮಂಡಳಿಯ ತೀರ್ಮಾನಕ್ಕೆ ನಾವು ಬದ್ಧರಾಗಿದ್ದೇವೆ. ಈಗಾಗಲೇ ಚಿತ್ರ ಬಿಡುಗಡೆಗೆ ತಯಾರಿ ಮಾಡಿಕೊಂಡಿದ್ದೆವು. ಅದಕ್ಕಾಗಿ ಲಕ್ಷಾಂತರ ರುಪಾಯಿಗಳನ್ನೂ ವೆಚ್ಚ ಮಾಡಿದ್ದೆವು. ಭವಿಷ್ಯದಲ್ಲಿ ಎಲ್ಲಾ ನಿರ್ಮಾಪಕರಿಗೂ ಒಳಿತಾಗಲಿದೆ ಎಂಬ ಕಾರಣಕ್ಕೆ ನಾವು ಮಂಡಳಿಯ ಮಾತಿಗೆ ಒಪ್ಪಿ, ಸಹಿ ಮಾಡಿದ್ದೇವೆ. ಯುಎಫ್ಓ, ಕ್ಯೂಬ್‌ ಸಂಬಂಧಿಸಿದವರು ಒಬ್ಬೊಬ್ಬರಿಗೆ ಒಂದೊಂದು ದರ ನಿಗದಿಪಡಿಸಿದ್ದಾರೆ. ನಮ್ಮ ಚಿತ್ರಗಳಿಗೆ ಶೇ.25 ರಷ್ಟು ಕಡಿಮೆ ಮಾಡುವವರೆಗೂ ನಾವು ಚಿತ್ರ ಬಿಡುಗಡೆ ಮಾಡುವುದಿಲ್ಲ ಎಂದರು ಸಿದ್ಧರಾಜು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.