ಡಾ. ವೀರೇಂದ್ರ ಹೆಗ್ಗಡೆ ಅವರಿಗೆ “ಪಡ್ಡೆಹುಲಿ’ಯ ಆಹ್ವಾನ ಪತ್ರಿಕೆ
Team Udayavani, Mar 8, 2018, 9:00 PM IST
ಕೆ. ಮಂಜು ಮಗ ಶ್ರೇಯಸ್ ಹೀರೋ ಆಗಿ ನಟಿಸುತ್ತಿರುವ ಮೊದಲ ಚಿತ್ರ “ಪಡ್ಡೆ ಹುಲಿ’ ಇದೇ ತಿಂಗಳ 11ಕ್ಕೆ ಪ್ರಾರಂಭವಾಗುವುದಕ್ಕೆ ಸಜ್ಜಾಗಿದೆ. ಈ ಮಧ್ಯೆ ಚಿತ್ರತಂಡದವರು ಧರ್ಮಸ್ಥಳಕ್ಕೆ ಹೋಗಿ, ಮಂಜುನಾಥನ ದರ್ಶನ ಮಾಡುವುದರ ಜೊತೆಗೆ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ, ಅವರಿಗೆ ಚಿತ್ರದ ಮುಹೂರ್ತದ ಆಹ್ವಾನ ಪತ್ರಿಕೆ ಕೊಡುವುದರ ಜೊತೆಗೆ ಅವರ ಆಶೀರ್ವಾದ ಪಡೆದು ಬಂದಿದ್ದಾರೆ.
ಬುಧವಾರ ನಟ ಶ್ರೇಯಸ್, ನಿರ್ದೇಶಕ ಗುರು ದೇಶಪಾಂಡೆ, ಛಾಯಾಗ್ರಾಹಕ ಕೆ.ಎಸ್. ಚಂದ್ರಶೇಖರ್ ಮುಂತಾದವರು ಧರ್ಮಸ್ಥಳಕ್ಕೆ ಹೋಗಿ ಮಂಜುನಾಥನ ಪಡೆಯುವುದರ ಜೊತೆಗೆ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ, ಅವರಿಗೆ ಚಿತ್ರದ ಮುಹೂರ್ತದ ಆಹ್ವಾನ ಪತ್ರಿಕೆ ಕೊಡುವುದರ ಜೊತೆಗೆ ಅವರ ಆಶೀರ್ವಾದ ಪಡೆದು ಬಂದಿದ್ದಾರೆ.
ಆ ನಂತರ ಬೆಂಗಳೂರಿಗೆ ವಾಪಸ್ಸಾಗಿರುವ ಚಿತ್ರತಂಡದವರು, ಗುರುವಾರ ಶಿವರಾಜಕುಮಾರ್, ಸುದೀಪ್, ಪುನೀತ್ ರಾಜಕುಮಾರ್ ಮುಂತಾದವರನ್ನು ಭೇಟಿ ಮಾಡಿ, ಮುಹೂರ್ತಕ್ಕೆ ಆಹ್ವಾನಿಸಿದ್ದಾರೆ. “ಪಡ್ಡೆ ಹುಲಿ’ ಚಿತ್ರದ ಮುಹೂರ್ತಕ್ಕೆ ಕನ್ನಡದ ಬಹುತೇಕ ಸ್ಟಾರ್ಗಳು ಬರುವ ಸಾಧ್ಯತೆ ಇದೆ. “ಪಡ್ಡೆ ಹುಲಿ’ ಚಿತ್ರವನ್ನು ಗುರು ದೇಶಪಾಂಡೆ ನಿರ್ದೇಶಿಸುತ್ತಿದ್ದು, ಚಿತ್ರಕ್ಕೆ ಅಜನೀಶ್ ಲೋಕನಾಥ್ ಅವರ ಸಂಗೀತವಿದೆ
ಕೆ.ಎಸ್. ಚಂದ್ರಶೇಖರ್ ಅವರ ಛಾಯಾಗ್ರಹಣ ಇರಲಿದೆ. ಈ ಹಿಂದೆ “ಉಪ್ಪು ಹುಳಿ ಖಾರ’ ಚಿತ್ರವನ್ನು ನಿರ್ಮಿಸಿದ್ದ ರಮೇಶ್ ರೆಡ್ಡಿ, ಈ ಚಿತ್ರವನ್ನು ತಮ್ಮ ತೇಜಸ್ವಿನಿ ಎಂಟರ್ಪ್ರೈಸಸ್ ಬ್ಯಾನರ್ನ ಮೂಲಕ ನಿರ್ಮಿಸುತ್ತಿದ್ದಾರೆ. ಈ ಮಧ್ಯೆ ಚಿತ್ರಕ್ಕೆ ನಾಯಕಿಯ ಆಯ್ಕೆಯಾಗಿದ್ದು, ಶ್ರೇಯಸ್ ಎದುರು ನಾಯಕಿಯಾಗಿ ನಿಶ್ವಿಕಾ ನಾಯ್ಡು ನಟಿಸುತ್ತಿದ್ದಾರೆ.