“ದಿ ವಿಲನ್‌’ ನಿರ್ದೇಶಕರ ಪರ ನಿಂತ ಸುದೀಪ್‌


Team Udayavani, Mar 9, 2018, 9:00 PM IST

Sudeep-(2).jpg

ಪ್ರೇಮ್‌ ನಿರ್ದೇಶನದ “ದಿ ವಿಲನ್‌’ ಚಿತ್ರೀಕರಣ ಇನ್ನೂ ನಡೆಯುತ್ತಲಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಇಷ್ಟೊತ್ತಿಗೆ ಚಿತ್ರೀಕರಣ ಮುಗಿಯಬೇಕಿತ್ತು. “ವಿಲನ್‌’ ಚಿತ್ರೀಕರಣ ಮುಗಿಯದೇ ಸುದೀಪ್‌ ಮತ್ತೂಂದು ಸಿನಿಮಾಕ್ಕೆ ಹೋಗುವಂತಿಲ್ಲ. ಜೊತೆಗೆ ಶಿವಣ್ಣ ಒಪ್ಪಿಕೊಂಡಿರುವ ಸಿನಿಮಾ ತಂಡದವರು ಕೂಡಾ “ವಿಲನ್‌’ ಮುಗಿಯುವುದಕ್ಕೆ ಕಾಯುತ್ತಿದ್ದಾರೆ. ಈ ಕಾರಣದಿಂದಲೇ ಗಾಂಧಿನಗರದಲ್ಲಿ ಒಂದಷ್ಟು ಮಂದಿ ಪ್ರೇಮ್‌ ಅವರ ಪ್ಲ್ಯಾನಿಂಗ್‌ ಸಮಸ್ಯೆಯಿಂದಾಗಿ “ವಿಲನ್‌’ ತಡವಾಗುತ್ತಿದೆ,

ಪ್ರೇಮ್‌ ಸರಿಯಾಗಿ ಪ್ಲ್ಯಾನ್‌ ಮಾಡಿ ಮಾಡಿದ್ದರೆ ಇಷ್ಟೊತ್ತಿಗೆ ಚಿತ್ರೀಕರಣ ಮುಗಿಸಬಹುದಿತ್ತು … ಹೀಗೆ ಪ್ರೇಮ್‌ ಮೇಲೆ ಆರೋಪ ಮಾಡುತ್ತಿದ್ದಾರೆ. ಆದರೆ, ನಟ ಸುದೀಪ್‌ ಪ್ರೇಮ್‌ ಪರ ನಿಂತಿದ್ದಾರೆ. “ದಿ ವಿಲನ್‌’ ತಡವಾಗಲು ಪ್ರೇಮ್‌ ಕಾರಣರಲ್ಲ, ಪ್ರೇಮ್‌ ಒಬ್ಬರನ್ನು ದೂರುವುದರಲ್ಲಿ ಅರ್ಥವಿಲ್ಲ ಎಂದಿದ್ದಾರೆ. “ದಿ ವಿಲನ್‌’ ತಡವಾಗುತ್ತಿರುವ ವಿಷಯದ ಕುರಿತು ಟ್ವೀಟ್‌ ಮಾಡಿರುವ ಸುದೀಪ್‌, “ಪ್ರೇಮ್‌ ಯಾವತ್ತೂ ಪ್ಲ್ಯಾನಿಂಗ್‌ ಇಲ್ಲದೇ ಚಿತ್ರೀಕರಣ ಮಾಡುವವರಲ್ಲ.

ಅವರು ಸಿನಿಮಾವನ್ನು ತುಂಬಾನೇ ಪ್ರೀತಿಸುವ ನಿರ್ದೇಶಕ. ಸಿನಿಮಾ ತಡವಾಗುತ್ತಿದೆ ಎಂದರೆ ಅದಕ್ಕೆ ಕಾರಣ ಕೇವಲ ಪ್ರೇಮ್‌ ಒಬ್ಬರಲ್ಲ. ಕೆಲವು ವ್ಯಕ್ತಿಗಳಿಂದ ಹಾಗೂ ಸನ್ನಿವೇಶಗಳಿಂದಾಗಿ ಸಿನಿಮಾ ತಡವಾಗಿದೆ’ ಎಂದು ಟ್ವೀಟ್‌ ಮಾಡುವ ಮೂಲಕ ಪ್ರೇಮ್‌ ಅವರ ವಿರುದ್ಧ ಆರೋಪ ಮಾಡುವವರಿಗೆ ಸ್ಪಷ್ಟನೆ ನೀಡಿದ್ದಾರೆ. ಇನ್ನು, ತಮ್ಮಿಂದಾಗಿ ಸಿನಿಮಾ ತಡವಾಗುತ್ತಿದೆ ಎಂಬ ಆರೋಪದ ಕುರಿತು ಈ ಹಿಂದೆಯೇ ಪ್ರೇಮ್‌ ಸ್ಪಷ್ಟನೆ ಕೊಟ್ಟಿದ್ದರು.

“ಸಿನಿಮಾ ತಡವಾಗುತ್ತಿದೆ ಎಂದರೆ ಅದಕ್ಕೆ ಸಾಕಷ್ಟು ಕಾರಣಗಳಿವೆ. ಮುಖ್ಯವಾಗಿ ಇದು ಇಬ್ಬರು ಬಿಗ್‌ ಸ್ಟಾರ್‌ಗಳ ಸಿನಿಮಾ. ಇಬ್ಬರು ಸ್ಟಾರ್‌ಗಳ ಡೇಟ್ಸ್‌ ಅನ್ನು ಹೊಂದಿಸಬೇಕು. ಅದಕ್ಕಿಂತ ಹೆಚ್ಚಾಗಿ ತಡ ಅನ್ನುತ್ತಾರಲ್ಲ, ನನ್ನ ಯಾವುದೇ ಸಿನಿಮಾವಾದರೂ ಅದು ಒಂದು ವರ್ಷ ಆಗಿಯೇ ಆಗುತ್ತದೆ. ನನಗೆ ಮೂರು ತಿಂಗಳಿಗೆ ಸಿನಿಮಾ ಮಾಡಿ ಮುಗಿಸಿ ಗೊತ್ತಿಲ್ಲ.

ನಾನು ಆ ತರಹ ಮಾಡಿಲ್ಲ, ಮಾಡೋದು ಇಲ್ಲ. ಆ ತರಹ ಮೂರು ತಿಂಗಳಿಗೆ ಸಿನಿಮಾ ಮಾಡೋದಿದ್ದರೆ ಇಷ್ಟೊತಿಗೆ 50 ಸಿನಿಮಾ ಮಾಡಿ, ದುಡ್ಡು ಮಾಡಿಕೊಂಡು ಆರಾಮವಾಗಿ ಮನೆಯಲ್ಲಿರಬಹುದಿತ್ತು. ನಾನು ಪ್ಯಾಶನೇಟ್‌ ಆಗಿ ಸಿನಿಮಾ ಮಾಡುತ್ತೇನೆ. ಯಾವುದೋ ಒಂದು ಮನೆಯಲ್ಲಿ ಚಿತ್ರೀಕರಣ ಮುಗಿಸಿಬಿಡಲು ನನ್ನದು ಫ್ಯಾಮಿಲಿ ಸೆಂಟಿಮೆಂಟ್‌ ಸಿನಿಮಾವಲ್ಲ’ ಎಂದಿದ್ದರು ಪ್ರೇಮ್‌. 

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.