ಕೆಲವರಿಗೆ ಪ್ಲಸ್‌; ಕೆಲವರಿಗೆ ಮೈನಸ್‌


Team Udayavani, Mar 13, 2018, 11:06 AM IST

plus-minus.jpg

ಯುಎಫ್ಓ ಮತ್ತು ಕ್ಯೂಬ್‌ ಸಂಸ್ಥೆಗಳ ವಿರುದ್ಧ ಸಿಡಿದೆದ್ದಿರುವ ದಕ್ಷಿಣ ಭಾರತದ ಚಲನಚಿತ್ರರಂಗ, ಚಿತ್ರಗಳನ್ನು ಬಿಡುಗಡೆ ಮಾಡದಿರುವುದಕ್ಕೆ ತೀರ್ಮಾನಿಸಿರುವುದು ಎಲ್ಲರಿಗೂ ಗೊತ್ತೇ ಇದೆ. ಈಗಾಗಲೇ ಬೇರೆ ರಾಜ್ಯಗಳಲ್ಲಿ ಮಾರ್ಚ್‌ 2ರಿಂದ ಹೊಸ ಚಿತ್ರಗಳ ಬಿಡುಗಡೆ ರದ್ದಾದರೆ, ಕರ್ನಾಟಕದಲ್ಲಿ ಕಳೆದ ಶುಕ್ರವಾರದಿಂದ (ಮಾರ್ಚ್‌ 9ರಿಂದ) ಯಾವುದೇ ಹೊಸ ಕನ್ನಡ ಚಿತ್ರವೂ ಬಿಡುಗಡೆಯಾಗಿಲ್ಲ.

ಅಷ್ಟೇ ಅಲ್ಲ, ಸಮಸ್ಯೆ ಬಗೆಹರಿಯುವವರೆಗೂ ಅನಿರ್ಧಿಷ್ಟ ಕಾಲ ಚಿತ್ರಗಳನ್ನು ಬಿಡುಗಡೆ ಮಾಡದಿರುವುದಕ್ಕೆ ತೀರ್ಮಾನಿಸಲಾಗಿದೆ. ಮುಂದಿನ ವಾರ ಹೇಗೋ ಗೊತ್ತಿಲ್ಲ. ಆದರೆ, ಈ ವಾರ ಯಾವುದೇ ಚಿತ್ರ ಬಿಡುಗಡೆಯಾಗುತ್ತಿಲ್ಲ. ಕಳೆದ ವಾರ ಯಾವುದೇ ಚಿತ್ರ ಬಿಡುಗಡೆಯಾಗದ ಕಾರಣ, ತಮ್ಮ ಚಿತ್ರಕ್ಕೆ ಪ್ಲಸ್‌ ಆಯಿತು ಎನ್ನುತ್ತಾರೆ “ಪ್ರೀತಿಯ ರಾಯಭಾರಿ’ ಚಿತ್ರದ ನಿರ್ದೇಶಕ ಮುತ್ತು.

“ನಮ್ಮ ಚಿತ್ರ ಸುಮಾರು 80 ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿತ್ತು. ಮೊದಲ ವಾರ ನಿಧಾನವಾಗಿಯೇ ಜನರ ಬರತೊಡಗಿದರು. ಎರಡನೇ ವಾರ ಯಾವ ಚಿತ್ರಗಳೂ ಬಿಡುಗಡೆಯಾಗದ ಕಾರಣ, ನಮ್ಮ ಚಿತ್ರದ ಬಗ್ಗೆ ಅದಾಗಲೇ ಒಂದಷ್ಟು ಉತ್ತುಮ ಪ್ರತಿಕ್ರಿಯೆ ಹರಿದಾಡಿತ್ತು. ಜನರಿಗೂ ಬೇರೆ ಸಿನಿಮಾ ನೋಡಲು ಬೇರೆ ಆಯ್ಕೆ ಇರಲಿಲ್ಲ. ಅನಿವಾರ್ಯ ಎಂಬಂತೆ “ಪ್ರೀತಿಯ ರಾಯಭಾರಿ’ ಚಿತ್ರ ವೀಕ್ಷಿಸಲು ಬಂದರು.

ಬಂದವರೆಲ್ಲರಿಂದಲೂ ಉತ್ತಮ ಪ್ರತಿಕ್ರಿಯೆ ಸಿಗುತ್ತಾ ಹೋಯ್ತು. ಜನರಿಗೂ ಕೂಡ ಚಿತ್ರ ತಲುಪಿತು. ಮೊದಲ ವಾರದಲ್ಲಿ ಹೇಳಿಕೊಳ್ಳುವಂತಹ ಗಳಿಕೆ ಇರಲಿಲ್ಲ. ಎರಡನೇ ವಾರದಿಂದ ಮೆಲ್ಲನೆ ಹೆಚ್ಚಳವಾಗಿದೆ. ಮುಂದಿನ ವಾರದಿಂದ 16 ಚಿತ್ರಮಂದಿರಗಳನ್ನು ಹೆಚ್ಚಿಸುವ ಯೋಚನೆ ಇದೆ. ಹೊಸ ಚಿತ್ರಗಳು ಬಿಡುಗಡೆಯಾಗದಿರುವುದರಿಂದ ನಮಗೆ ಸ್ವಲ್ಪ ಒಳ್ಳೆಯದಾಗಿದೆ.

ಯಾವುದೇ ಹೊಸಬರ ಚಿತ್ರವಿರಲಿ, ಒಂದು ವಾರದವರೆಗೆ ಬೇಗನೆ ಪಿಕಪ್‌ ಆಗೋದಿಲ್ಲ. ಈಗ ಎರಡನೇ ವಾರ ಚೆನ್ನಾಗಿ ಹೋಗುತ್ತಿದೆ. ಮೂರನೆ ವಾರ ಇನ್ನೂ ಚೆನ್ನಾಗಿ ಪ್ರದರ್ಶನ ಕಾಣುತ್ತೆ ಎಂಬ ನಂಬಿಕೆ ಇದೆ’ ಎನ್ನುತ್ತಾರೆ ಮುತ್ತು. ಹಾಗಂತ ಎಲ್ಲರಿಗೂ ಈ ಗ್ಯಾಪ್‌ ಅನುಕೂಲವಾಯಿತು ಎಂದು ಹೇಳುವುದು ಕಷ್ಟ. “ಪ್ರೀತಿಯ ರಾಯಭಾರಿ’ ಚಿತ್ರತಂಡದವರಿಗೆ ಇದು ಪ್ಲಸ್‌ ಆದರೆ, ಬೇರೆ ಚಿತ್ರತಂಡದವರಿಗೆ ಮೈನಸ್‌ ಆಗಿದೆ.

ಉದಾಹರಣೆಗೆ, “3000′ ಎಂಬ ಚಿತ್ರವು ರಾಜ್ಯಾದ್ಯಂತ ಸುಮಾರು 110 ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿತ್ತು. ಮೊದಲ ವಾರದ ಗಳಿಕೆ ಕಡಿಮೆಯಾಗಿತ್ತು. ಎರಡನೇ ವಾರ ಸರಿ ಹೋಗಬಹುದು ಎಂಬ ಚಿತ್ರತಂಡದವರ ಆಸೆ ನಿರಾಸೆಯಾಯಿತು. ಅದಕ್ಕೆ ಕಾರಣವೂ ಇದೆ. “ಕಳೆದ ವಾರ ಚಿತ್ರ ಬಿಡುಗಡೆಯಾಗದಿದ್ದ ಕಾರಣ, ನಮಗೆ ಯಾವ ಅನುಕೂಲವೂ ಆಗಲಿಲ್ಲ.

ಏಕೆಂದರೆ, ಕಲೆಕ್ಷನ್‌ ಕಡಿಮೆ ಇತ್ತು. ಕಲೆಕ್ಷನ್‌ ಕಡಿಮೆ ಇದ್ದುದರಿಂದ ಬಾಡಿಗೆ ಕಟ್ಟಲು ಆಗಲಿಲ್ಲ. ಹಾಗಾಗಿ ಒಂದೇ ವಾರಕ್ಕೆ ಚಿತ್ರವನ್ನು ತೆಗೆಯಬೇಕಾಯಿತು. ಚಿತ್ರಮಂದಿರದ ಬಾಡಿಗೆ ಹಣವೂ ಬಂದಿಲ್ಲ’ ಎನ್ನುತ್ತಾರೆ “3000′ ಚಿತ್ರದ ತಂಡದವರು. ಇನ್ನು “ಚಿನ್ನದ ಗೊಂಬೆ’ ತಂಡದವರೂ ಇದೇ ಸಮಸ್ಯೆಯನ್ನು ಎದುರಿಸಿದ್ದಾರೆ. “ಇದು ನಮಗೆ ಪ್ಲಸ್‌ ಆಗುತ್ತೆ ಅಂದುಕೊಂಡರೆ, ಅದು ಮೈನಸ್‌ ಆಯ್ತು.

ಸ್ವಪ್ನ ಚಿತ್ರಮಂದಿರಕ್ಕೆ ಚಿತ್ರವನ್ನು ಶಿಫ್ಟ್ ಮಾಡಿದರೂ ಪ್ರಯೋಜನವಾಗಿಲ್ಲ. ಒಂದು ಕೋಟಿ ಖರ್ಚು ಮಾಡಿದ್ದೇವೆ. ಯುಎಫ್ಓ, ಕ್ಯೂಬ್‌ಗ ಹಾಕಿರುವ ಸುಮಾರು 8 ಲಕ್ಷ ರೂ ಕೂಡ ಹಿಂದಿರುವುದಿಲ್ಲ. ಆಗಿರುವ ಗಳಿಕೆಯಲ್ಲಿ ಥಿಯೇಟರ್‌ಗೆ ಪರ್ಸಂಟೇಜ್‌ ಕೊಟ್ಟರೆ, ಉಳಿಯೋ ಹಣವೂ ಕೈಗೆ ಸಿಗೋದಿಲ್ಲ’ ಎಂದು ಬೇಸರದಿಂದಲೇ ಹೇಳಿಕೊಳ್ಳುತ್ತಾರೆ ನಿರ್ಮಾಪಕ ಕೃಷ್ಣಪ್ಪ.

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.