ಬಿಡುಗಡೆಯಾದ ಚಿತ್ರಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು!


Team Udayavani, Mar 13, 2018, 11:06 AM IST

demand.jpg

ಯುಎಫ್ಓ ಮತ್ತು ಕ್ಯೂಬ್‌ ಸಂಸ್ಥೆಗಳ ವಿರುದ್ಧ ಸಿಡಿದೆದ್ದಿರುವ ದಕ್ಷಿಣ ಭಾರತದ ಚಲನಚಿತ್ರರಂಗ, ಚಿತ್ರಗಳನ್ನು ಬಿಡುಗಡೆ ಮಾಡದಿರುವುದಕ್ಕೆ ತೀರ್ಮಾನಿಸಿರುವುದು ಎಲ್ಲರಿಗೂ ಗೊತ್ತೇ ಇದೆ. ಈಗಾಗಲೇ ಬೇರೆ ರಾಜ್ಯಗಳಲ್ಲಿ ಮಾರ್ಚ್‌ 2ರಿಂದ ಹೊಸ ಚಿತ್ರಗಳ ಬಿಡುಗಡೆ ರದ್ದಾದರೆ, ಕರ್ನಾಟಕದಲ್ಲಿ ಕಳೆದ ಶುಕ್ರವಾರದಿಂದ (ಮಾರ್ಚ್‌ 9ರಿಂದ) ಯಾವುದೇ ಹೊಸ ಕನ್ನಡ ಚಿತ್ರವೂ ಬಿಡುಗಡೆಯಾಗಿಲ್ಲ.

ಅಷ್ಟೇ ಅಲ್ಲ, ಸಮಸ್ಯೆ ಬಗೆಹರಿಯುವವರೆಗೂ ಅನಿರ್ಧಿಷ್ಟ ಕಾಲ ಚಿತ್ರಗಳನ್ನು ಬಿಡುಗಡೆ ಮಾಡದಿರುವುದಕ್ಕೆ ತೀರ್ಮಾನಿಸಲಾಗಿದೆ. ಮುಂದಿನ ವಾರ ಹೇಗೋ ಗೊತ್ತಿಲ್ಲ. ಆದರೆ, ಈ ವಾರ ಯಾವುದೇ ಚಿತ್ರ ಬಿಡುಗಡೆಯಾಗುತ್ತಿಲ್ಲ. ಕೆಲವೇ ದಿನಗಳ ಹಿಂದಿನ ವಿಷಯವನ್ನು ತೆಗೆದುಕೊಂಡರೆ, ವಾರಕ್ಕೆ ಏಳೆಂಟು ಸಿನಿಮಾಗಳು ಬಿಡುಗಡೆಯಾದ ಉದಾಹರಣೆಗಳಿದ್ದವು. ಇದರಿಂದ ಚಿತ್ರಮಂದಿರಗಳಿಗೆ ಹಾಹಾಕಾರ ಎದ್ದಿತ್ತು ಎಂದರೂ ತಪ್ಪಿಲ್ಲ.

ಆದರೆ, ಈಗ ಹೊಸ ಬಿಡುಗಡೆ ಇಲ್ಲದಿರುವುದರಿಂದ, ಚಿತ್ರಮಂದಿರದವರು ಪರ್ಯಾಯವಾಗಿ ಬೇರೆಬೇರೆ ಚಿತ್ರಗಳಿಗಾಗಿ ಎದುರು ನೋಡುವಂತಾಗಿದೆ. ಹೊಸ ಚಿತ್ರಗಳು ಇಲ್ಲದ ಸಂದರ್ಭದಲ್ಲಿ ಹಿಂದೆ ಬಿಡುಗಡೆಯಾದ ಕೆಲವು ಜನಪ್ರಿಯ ಚಿತ್ರಗಳನ್ನೇ ಪುನಃ ಬಿಡುಗಡೆ ಮಾಡುವಂತಾಗಿದೆ. ಪುನೀತ್‌ ರಾಜಕುಮಾರ್‌ ಅಭಿನಯದ “ರಾಜಕುಮಾರ’, “ಅಂಜನಿಪುತ್ರ’, ಗಣೇಶ್‌ ಅಭಿನಯದ “ಚಮಕ್‌’, ಗುರುನಂದನ್‌ರ “ರಾಜು ಕನ್ನಡ ಮೀಡಿಯಂ’ ಮುಂತಾದ ಚಿತ್ರಗಳು ಮರುಪ್ರದರ್ಶನವಾಗುತ್ತಿವೆ.

ಇನ್ನು ಈ ಹಿಂದೆ ಬಿಡುಗಡೆಯಾಗಿ, ಕಾರಣಾಂತರಗಳಿಂದ ಚಿತ್ರಮಂದಿರಗಳಿಂದ ಬೇಗ ಎತ್ತಂಗಡಿಯಾದ ಚಿತ್ರಗಳು ಸಹ ಮತ್ತೂಮ್ಮೆ ಬಿಡುಗಡೆಯಾಗುತ್ತಿವೆ. ಈಗ ಚಿತ್ರಗಳ ಅಭಾವದಿಂದಾಗಿ ಅಂತಹ ಚಿತ್ರಗಳಿಗೂ ಬೇಡಿಕೆ ಹೆಚ್ಚುತ್ತಿರುವುದು ವಿಶೇಷ. ಇನ್ನು ಈಗಾಗಲೇ ಬಿಡುಗಡೆಯಾದ ಚಿತ್ರಗಳಿಗೆ ಈ ಕಾಲ ಬಹಳ ಅನುಕೂಲಕರ ಎಂದರೆ ತಪ್ಪಿಲ್ಲ. ಇತ್ತೀಚಿನ ದಿನಗಳಲ್ಲಿ ದೊಡ್ಡ ಮಟ್ಟದಲ್ಲಿ ಬಿಡುಗಡೆಯಾಗಿದ್ದು “ಟಗರು’. ಕನ್ನಡವಷ್ಟೇ ಅಲ್ಲದೆ, ಪರಭಾಷೆಯ ಚಿತ್ರಗಳಿಂದಲೂ ಯಾವುದೇ ಸ್ಪರ್ಧೆ ಇರದ ಕಾರಣದ, ಚಿತ್ರದ ಪ್ರದರ್ಶನ ಚೆನ್ನಾಗಿದೆ.

ಅರ್ಜುನ್‌ ಸರ್ಜಾ ಅವರ “ಪ್ರೇಮ ಬರಹ’ ಚಿತ್ರವು ಎರಡ್ಮೂರು ವಾರಗಳ ನಂತರ ಬೇರೆ ಚಿತ್ರಗಳಿಗೆ ಚಿತ್ರಮಂದಿರವನ್ನು ಬಿಟ್ಟುಕೊಡಬಹುದು ಎಂಬ ನಂಬಿಕೆ ಚಿತ್ರರಂಗದ ವಲಯದಲ್ಲಿತ್ತು. ಆದರೆ, ಯಾವುದೇ ಸ್ಪರ್ಧೆ ಇಲ್ಲದ ಕಾರಣ ಚಿತ್ರವು ಯಶಸ್ವಿಯಾಗಿ ಐದನೇ ವಾರಕ್ಕೆ ಕಾಲಿಟ್ಟು ಪ್ರದರ್ಶನವಾಗುತ್ತಿದೆ. ಇನ್ನು ಮಾರ್ಚ್‌ 2ರಂದು ನಾಲ್ಕು ಚಿತ್ರಗಳು ಬಿಡುಗಡೆಯಾಗಿದ್ದವು. ಈ ಪೈಕಿ, ಸ್ವಲ್ಪ ಸುಧಾರಣೆ ಕಂಡಿರುವುದು “ಪ್ರೀತಿಯ ರಾಯಭಾರಿ’ ಮಾತ್ರ. ಮಿಕ್ಕಂತೆ ಮೂರು ಚಿತ್ರಗಳು ಬದಲಾಗಿವೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.