ಬಿಡುಗಡೆಯಾದ ಚಿತ್ರಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು!


Team Udayavani, Mar 13, 2018, 11:06 AM IST

demand.jpg

ಯುಎಫ್ಓ ಮತ್ತು ಕ್ಯೂಬ್‌ ಸಂಸ್ಥೆಗಳ ವಿರುದ್ಧ ಸಿಡಿದೆದ್ದಿರುವ ದಕ್ಷಿಣ ಭಾರತದ ಚಲನಚಿತ್ರರಂಗ, ಚಿತ್ರಗಳನ್ನು ಬಿಡುಗಡೆ ಮಾಡದಿರುವುದಕ್ಕೆ ತೀರ್ಮಾನಿಸಿರುವುದು ಎಲ್ಲರಿಗೂ ಗೊತ್ತೇ ಇದೆ. ಈಗಾಗಲೇ ಬೇರೆ ರಾಜ್ಯಗಳಲ್ಲಿ ಮಾರ್ಚ್‌ 2ರಿಂದ ಹೊಸ ಚಿತ್ರಗಳ ಬಿಡುಗಡೆ ರದ್ದಾದರೆ, ಕರ್ನಾಟಕದಲ್ಲಿ ಕಳೆದ ಶುಕ್ರವಾರದಿಂದ (ಮಾರ್ಚ್‌ 9ರಿಂದ) ಯಾವುದೇ ಹೊಸ ಕನ್ನಡ ಚಿತ್ರವೂ ಬಿಡುಗಡೆಯಾಗಿಲ್ಲ.

ಅಷ್ಟೇ ಅಲ್ಲ, ಸಮಸ್ಯೆ ಬಗೆಹರಿಯುವವರೆಗೂ ಅನಿರ್ಧಿಷ್ಟ ಕಾಲ ಚಿತ್ರಗಳನ್ನು ಬಿಡುಗಡೆ ಮಾಡದಿರುವುದಕ್ಕೆ ತೀರ್ಮಾನಿಸಲಾಗಿದೆ. ಮುಂದಿನ ವಾರ ಹೇಗೋ ಗೊತ್ತಿಲ್ಲ. ಆದರೆ, ಈ ವಾರ ಯಾವುದೇ ಚಿತ್ರ ಬಿಡುಗಡೆಯಾಗುತ್ತಿಲ್ಲ. ಕೆಲವೇ ದಿನಗಳ ಹಿಂದಿನ ವಿಷಯವನ್ನು ತೆಗೆದುಕೊಂಡರೆ, ವಾರಕ್ಕೆ ಏಳೆಂಟು ಸಿನಿಮಾಗಳು ಬಿಡುಗಡೆಯಾದ ಉದಾಹರಣೆಗಳಿದ್ದವು. ಇದರಿಂದ ಚಿತ್ರಮಂದಿರಗಳಿಗೆ ಹಾಹಾಕಾರ ಎದ್ದಿತ್ತು ಎಂದರೂ ತಪ್ಪಿಲ್ಲ.

ಆದರೆ, ಈಗ ಹೊಸ ಬಿಡುಗಡೆ ಇಲ್ಲದಿರುವುದರಿಂದ, ಚಿತ್ರಮಂದಿರದವರು ಪರ್ಯಾಯವಾಗಿ ಬೇರೆಬೇರೆ ಚಿತ್ರಗಳಿಗಾಗಿ ಎದುರು ನೋಡುವಂತಾಗಿದೆ. ಹೊಸ ಚಿತ್ರಗಳು ಇಲ್ಲದ ಸಂದರ್ಭದಲ್ಲಿ ಹಿಂದೆ ಬಿಡುಗಡೆಯಾದ ಕೆಲವು ಜನಪ್ರಿಯ ಚಿತ್ರಗಳನ್ನೇ ಪುನಃ ಬಿಡುಗಡೆ ಮಾಡುವಂತಾಗಿದೆ. ಪುನೀತ್‌ ರಾಜಕುಮಾರ್‌ ಅಭಿನಯದ “ರಾಜಕುಮಾರ’, “ಅಂಜನಿಪುತ್ರ’, ಗಣೇಶ್‌ ಅಭಿನಯದ “ಚಮಕ್‌’, ಗುರುನಂದನ್‌ರ “ರಾಜು ಕನ್ನಡ ಮೀಡಿಯಂ’ ಮುಂತಾದ ಚಿತ್ರಗಳು ಮರುಪ್ರದರ್ಶನವಾಗುತ್ತಿವೆ.

ಇನ್ನು ಈ ಹಿಂದೆ ಬಿಡುಗಡೆಯಾಗಿ, ಕಾರಣಾಂತರಗಳಿಂದ ಚಿತ್ರಮಂದಿರಗಳಿಂದ ಬೇಗ ಎತ್ತಂಗಡಿಯಾದ ಚಿತ್ರಗಳು ಸಹ ಮತ್ತೂಮ್ಮೆ ಬಿಡುಗಡೆಯಾಗುತ್ತಿವೆ. ಈಗ ಚಿತ್ರಗಳ ಅಭಾವದಿಂದಾಗಿ ಅಂತಹ ಚಿತ್ರಗಳಿಗೂ ಬೇಡಿಕೆ ಹೆಚ್ಚುತ್ತಿರುವುದು ವಿಶೇಷ. ಇನ್ನು ಈಗಾಗಲೇ ಬಿಡುಗಡೆಯಾದ ಚಿತ್ರಗಳಿಗೆ ಈ ಕಾಲ ಬಹಳ ಅನುಕೂಲಕರ ಎಂದರೆ ತಪ್ಪಿಲ್ಲ. ಇತ್ತೀಚಿನ ದಿನಗಳಲ್ಲಿ ದೊಡ್ಡ ಮಟ್ಟದಲ್ಲಿ ಬಿಡುಗಡೆಯಾಗಿದ್ದು “ಟಗರು’. ಕನ್ನಡವಷ್ಟೇ ಅಲ್ಲದೆ, ಪರಭಾಷೆಯ ಚಿತ್ರಗಳಿಂದಲೂ ಯಾವುದೇ ಸ್ಪರ್ಧೆ ಇರದ ಕಾರಣದ, ಚಿತ್ರದ ಪ್ರದರ್ಶನ ಚೆನ್ನಾಗಿದೆ.

ಅರ್ಜುನ್‌ ಸರ್ಜಾ ಅವರ “ಪ್ರೇಮ ಬರಹ’ ಚಿತ್ರವು ಎರಡ್ಮೂರು ವಾರಗಳ ನಂತರ ಬೇರೆ ಚಿತ್ರಗಳಿಗೆ ಚಿತ್ರಮಂದಿರವನ್ನು ಬಿಟ್ಟುಕೊಡಬಹುದು ಎಂಬ ನಂಬಿಕೆ ಚಿತ್ರರಂಗದ ವಲಯದಲ್ಲಿತ್ತು. ಆದರೆ, ಯಾವುದೇ ಸ್ಪರ್ಧೆ ಇಲ್ಲದ ಕಾರಣ ಚಿತ್ರವು ಯಶಸ್ವಿಯಾಗಿ ಐದನೇ ವಾರಕ್ಕೆ ಕಾಲಿಟ್ಟು ಪ್ರದರ್ಶನವಾಗುತ್ತಿದೆ. ಇನ್ನು ಮಾರ್ಚ್‌ 2ರಂದು ನಾಲ್ಕು ಚಿತ್ರಗಳು ಬಿಡುಗಡೆಯಾಗಿದ್ದವು. ಈ ಪೈಕಿ, ಸ್ವಲ್ಪ ಸುಧಾರಣೆ ಕಂಡಿರುವುದು “ಪ್ರೀತಿಯ ರಾಯಭಾರಿ’ ಮಾತ್ರ. ಮಿಕ್ಕಂತೆ ಮೂರು ಚಿತ್ರಗಳು ಬದಲಾಗಿವೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.