ಬಿಡುಗಡೆಯಾದ ಚಿತ್ರಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು!


Team Udayavani, Mar 13, 2018, 11:06 AM IST

demand.jpg

ಯುಎಫ್ಓ ಮತ್ತು ಕ್ಯೂಬ್‌ ಸಂಸ್ಥೆಗಳ ವಿರುದ್ಧ ಸಿಡಿದೆದ್ದಿರುವ ದಕ್ಷಿಣ ಭಾರತದ ಚಲನಚಿತ್ರರಂಗ, ಚಿತ್ರಗಳನ್ನು ಬಿಡುಗಡೆ ಮಾಡದಿರುವುದಕ್ಕೆ ತೀರ್ಮಾನಿಸಿರುವುದು ಎಲ್ಲರಿಗೂ ಗೊತ್ತೇ ಇದೆ. ಈಗಾಗಲೇ ಬೇರೆ ರಾಜ್ಯಗಳಲ್ಲಿ ಮಾರ್ಚ್‌ 2ರಿಂದ ಹೊಸ ಚಿತ್ರಗಳ ಬಿಡುಗಡೆ ರದ್ದಾದರೆ, ಕರ್ನಾಟಕದಲ್ಲಿ ಕಳೆದ ಶುಕ್ರವಾರದಿಂದ (ಮಾರ್ಚ್‌ 9ರಿಂದ) ಯಾವುದೇ ಹೊಸ ಕನ್ನಡ ಚಿತ್ರವೂ ಬಿಡುಗಡೆಯಾಗಿಲ್ಲ.

ಅಷ್ಟೇ ಅಲ್ಲ, ಸಮಸ್ಯೆ ಬಗೆಹರಿಯುವವರೆಗೂ ಅನಿರ್ಧಿಷ್ಟ ಕಾಲ ಚಿತ್ರಗಳನ್ನು ಬಿಡುಗಡೆ ಮಾಡದಿರುವುದಕ್ಕೆ ತೀರ್ಮಾನಿಸಲಾಗಿದೆ. ಮುಂದಿನ ವಾರ ಹೇಗೋ ಗೊತ್ತಿಲ್ಲ. ಆದರೆ, ಈ ವಾರ ಯಾವುದೇ ಚಿತ್ರ ಬಿಡುಗಡೆಯಾಗುತ್ತಿಲ್ಲ. ಕೆಲವೇ ದಿನಗಳ ಹಿಂದಿನ ವಿಷಯವನ್ನು ತೆಗೆದುಕೊಂಡರೆ, ವಾರಕ್ಕೆ ಏಳೆಂಟು ಸಿನಿಮಾಗಳು ಬಿಡುಗಡೆಯಾದ ಉದಾಹರಣೆಗಳಿದ್ದವು. ಇದರಿಂದ ಚಿತ್ರಮಂದಿರಗಳಿಗೆ ಹಾಹಾಕಾರ ಎದ್ದಿತ್ತು ಎಂದರೂ ತಪ್ಪಿಲ್ಲ.

ಆದರೆ, ಈಗ ಹೊಸ ಬಿಡುಗಡೆ ಇಲ್ಲದಿರುವುದರಿಂದ, ಚಿತ್ರಮಂದಿರದವರು ಪರ್ಯಾಯವಾಗಿ ಬೇರೆಬೇರೆ ಚಿತ್ರಗಳಿಗಾಗಿ ಎದುರು ನೋಡುವಂತಾಗಿದೆ. ಹೊಸ ಚಿತ್ರಗಳು ಇಲ್ಲದ ಸಂದರ್ಭದಲ್ಲಿ ಹಿಂದೆ ಬಿಡುಗಡೆಯಾದ ಕೆಲವು ಜನಪ್ರಿಯ ಚಿತ್ರಗಳನ್ನೇ ಪುನಃ ಬಿಡುಗಡೆ ಮಾಡುವಂತಾಗಿದೆ. ಪುನೀತ್‌ ರಾಜಕುಮಾರ್‌ ಅಭಿನಯದ “ರಾಜಕುಮಾರ’, “ಅಂಜನಿಪುತ್ರ’, ಗಣೇಶ್‌ ಅಭಿನಯದ “ಚಮಕ್‌’, ಗುರುನಂದನ್‌ರ “ರಾಜು ಕನ್ನಡ ಮೀಡಿಯಂ’ ಮುಂತಾದ ಚಿತ್ರಗಳು ಮರುಪ್ರದರ್ಶನವಾಗುತ್ತಿವೆ.

ಇನ್ನು ಈ ಹಿಂದೆ ಬಿಡುಗಡೆಯಾಗಿ, ಕಾರಣಾಂತರಗಳಿಂದ ಚಿತ್ರಮಂದಿರಗಳಿಂದ ಬೇಗ ಎತ್ತಂಗಡಿಯಾದ ಚಿತ್ರಗಳು ಸಹ ಮತ್ತೂಮ್ಮೆ ಬಿಡುಗಡೆಯಾಗುತ್ತಿವೆ. ಈಗ ಚಿತ್ರಗಳ ಅಭಾವದಿಂದಾಗಿ ಅಂತಹ ಚಿತ್ರಗಳಿಗೂ ಬೇಡಿಕೆ ಹೆಚ್ಚುತ್ತಿರುವುದು ವಿಶೇಷ. ಇನ್ನು ಈಗಾಗಲೇ ಬಿಡುಗಡೆಯಾದ ಚಿತ್ರಗಳಿಗೆ ಈ ಕಾಲ ಬಹಳ ಅನುಕೂಲಕರ ಎಂದರೆ ತಪ್ಪಿಲ್ಲ. ಇತ್ತೀಚಿನ ದಿನಗಳಲ್ಲಿ ದೊಡ್ಡ ಮಟ್ಟದಲ್ಲಿ ಬಿಡುಗಡೆಯಾಗಿದ್ದು “ಟಗರು’. ಕನ್ನಡವಷ್ಟೇ ಅಲ್ಲದೆ, ಪರಭಾಷೆಯ ಚಿತ್ರಗಳಿಂದಲೂ ಯಾವುದೇ ಸ್ಪರ್ಧೆ ಇರದ ಕಾರಣದ, ಚಿತ್ರದ ಪ್ರದರ್ಶನ ಚೆನ್ನಾಗಿದೆ.

ಅರ್ಜುನ್‌ ಸರ್ಜಾ ಅವರ “ಪ್ರೇಮ ಬರಹ’ ಚಿತ್ರವು ಎರಡ್ಮೂರು ವಾರಗಳ ನಂತರ ಬೇರೆ ಚಿತ್ರಗಳಿಗೆ ಚಿತ್ರಮಂದಿರವನ್ನು ಬಿಟ್ಟುಕೊಡಬಹುದು ಎಂಬ ನಂಬಿಕೆ ಚಿತ್ರರಂಗದ ವಲಯದಲ್ಲಿತ್ತು. ಆದರೆ, ಯಾವುದೇ ಸ್ಪರ್ಧೆ ಇಲ್ಲದ ಕಾರಣ ಚಿತ್ರವು ಯಶಸ್ವಿಯಾಗಿ ಐದನೇ ವಾರಕ್ಕೆ ಕಾಲಿಟ್ಟು ಪ್ರದರ್ಶನವಾಗುತ್ತಿದೆ. ಇನ್ನು ಮಾರ್ಚ್‌ 2ರಂದು ನಾಲ್ಕು ಚಿತ್ರಗಳು ಬಿಡುಗಡೆಯಾಗಿದ್ದವು. ಈ ಪೈಕಿ, ಸ್ವಲ್ಪ ಸುಧಾರಣೆ ಕಂಡಿರುವುದು “ಪ್ರೀತಿಯ ರಾಯಭಾರಿ’ ಮಾತ್ರ. ಮಿಕ್ಕಂತೆ ಮೂರು ಚಿತ್ರಗಳು ಬದಲಾಗಿವೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.