ಬೇರೆ ಚಿತ್ರಗಳ ಶೂಟಿಂಗ್‌ನಲ್ಲಿದ್ದಾಗ ಪ್ರಮೋಶನ್‌ಗೆ ಹೇಗೆ ಬರಲಿ?


Team Udayavani, Apr 8, 2018, 11:25 AM IST

Nikki-Galrani.jpg

ನಿಕ್ಕಿ ಗಾಲ್ರಾನಿ ಸಿನಿಮಾ ಪ್ರಮೋಶನ್‌ಗೆ ಬರುತ್ತಿಲ್ಲ, ಆಕೆಗೆ ಕನ್ನಡ ಸಿನಿಮಾಗಳ ಮೇಲೆ ಆಸಕ್ತಿಯಿಲ್ಲ, ಚಿತ್ರತಂಡದವರು ಎಷ್ಟೇ ಗೋಳಾಡಿದರೂ ಬೇರೆ ಭಾಷೆಗೆ ಹೆಚ್ಚು ಪ್ರಾಮುಖ್ಯತೆ ಕೊಡುತ್ತಾರೆ … ಹೀಗೆ ನಿಕ್ಕಿ ಗಾಲ್ರಾನಿ ಮೇಲೆ ಇತ್ತೀಚೆಗೆ ಈ ತರಹದ ಸಾಕಷ್ಟು ಆರೋಪಗಳು ಕೇಳಿಬರುತ್ತಲೇ ಇತ್ತು.

ಅದರಲ್ಲೂ ಕಳೆದ ತಿಂಗಳು ಬಿಡುಗಡೆಯಾದ “ಓ ಪ್ರೇಮವೇ’ ಚಿತ್ರದ ಪ್ರಮೋಶನ್‌ನಿಂದ ದೂರ ಉಳಿದ ನಿಕ್ಕಿ ಮೇಲೆ ಆ ಚಿತ್ರತಂಡ ಗರಂ ಆಗಿತ್ತು. ಸದ್ಯ ನಿಕ್ಕಿ ಕನ್ನಡ ಸಿನಿಮಾಗಳಿಂತ ಬೇರೆ ಭಾಷೆಯ ಸಿನಿಮಾಗಳಲ್ಲಿ ಬಿಝಿಯಾಗಿದ್ದಾರೆ. ಬಿಝಿಯ ನಡುವೆಯೇ ತಮ್ಮ ಮೇಲಿನ ಆರೋಪಗಳಿಗೆ ನಿಕ್ಕಿ “ಚಿಟ್‌ಚಾಟ್‌’ನಲ್ಲಿ ಉತ್ತರಿಸಿದ್ದಾರೆ …. 

1. ಹೇಗಿದೆ ನಿಮ್ಮ ಸಿನಿಪಯಣ?
ಖುಷಿಯಾಗಿದ್ದೇನೆ. ಒಳ್ಳೆಯ ಅವಕಾಶಗಳು ಸಿಗುತ್ತಿವೆ. ಬೇರೆ ಬೇರೆ ಭಾಷೆಗಳಿಂದ ಆಫ‌ರ್‌ಗಳು ಸಿಗುತ್ತಿವೆ. ಇಲ್ಲಿವರೆಗೆ 28 ಸಿನಿಮಾ ಮಾಡಿದ್ದೇನೆ. ಪ್ರತಿ ಸಿನಿಮಾದಲ್ಲೂ ನನ್ನ ಪಾತ್ರ ವಿಭಿನ್ನವಾಗಿದೆ. ನನಗೆ ಬರುತ್ತಿರುವ ಅವಕಾಶಗಳ ಬಗ್ಗೆ ಖುಷಿ ಇದೆ.

2. ಸದ್ಯ ಎಷ್ಟು ಸಿನಿಮಾಗಳು ನಿಮ್ಮ ಕೈಯಲ್ಲಿವೆ?
ತಮಿಳಿನ ಮೂರು ಸಿನಿಮಾಗಳಲ್ಲಿ ನಟಿಸುತ್ತಿದ್ದೇನೆ. ಪ್ರಭುದೇವ ಅವರ ಜೊತೆ “ಚಾರ್ಲಿ ಚಾಪ್ಲಿನ್‌-2′, ಜೀವ ನಾಯಕರಾಗಿರುವ “ಕಿ’ ಹಾಗೂ ವಿಕ್ರಮ್‌ ಪ್ರಭು ಜೊತೆ “ಪಕ್ಕಾ’ ಸಿನಿಮಾಗಳಲ್ಲಿ ನಟಿಸುತ್ತಿದ್ದೇನೆ. ಮೂರು ಸಿನಿಮಾಗಳು ಸದ್ಯ ಚಿತ್ರೀಕರಣದಲ್ಲಿವೆ. 

3. ಕನ್ನಡ ಸಿನಿಮಾಗಳನ್ನು ನೀವು ಒಪ್ಪಿಕೊಳ್ಳುತ್ತಿಲ್ಲ ಎಂಬ ಮಾತಿದೆಯಲ್ಲ?
ಆ ತರಹ ಏನಿಲ್ಲ. ಸಾಕಷ್ಟು ಅವಕಾಶಗಳು ಕನ್ನಡದಿಂದ ನನಗೆ ಬರುತ್ತಿವೆ. ಆದರೆ, ಬೇರೆ ಸಿನಿಮಾಗಳಲ್ಲಿ ಬಿಝಿ ಇರುವಾಗ ನಾನು ಹೇಗೆ ಒಪ್ಪೋಕಾಗುತ್ತೆ ಹೇಳಿ. ಒಪ್ಪಿದ ಮೇಲೆ ಆ ಸಿನಿಮಾಕ್ಕೆ ಡೇಟ್ಸ್‌ ಹೊಂದಿಸಬೇಕು. ಇಲ್ಲವಾದರೆ ಆ ಚಿತ್ರತಂಡಕ್ಕೆ ಸಮಸ್ಯೆಯಾಗುತ್ತದೆ. ಆ ಕಾರಣದಿಂದ ನಾನು ಮೊದಲು ಒಪ್ಪಿಕೊಂಡ ಸಿನಿಮಾಗಳನ್ನು ಮುಗಿಸುತ್ತಿದ್ದೇನೆ.

4. ನೀವು ಕನ್ನಡ ಸಿನಿಮಾಗಳ ಪ್ರಮೋಶನ್‌ ಬಗ್ಗೆ ಆಸಕ್ತಿ ವಹಿಸುತ್ತಿಲ್ಲ ಎಂಬ ಮಾತಿದೆಯಲ್ಲಾ?
ಅದು ಸುಳ್ಳು. ನಾನು ಒಪ್ಪಿಕೊಂಡ ಸಿನಿಮಾಗಳನ್ನು ನಾನು ಪ್ರಮೋಶನ್‌ ಮಾಡುತ್ತೇನೆ. ಹಾಗಂತ ನಾನು ಬೇರೆ ಯಾವುದೋ ಸಿನಿಮಾದ ಚಿತ್ರೀಕರಣದಲ್ಲಿದ್ದಾಗ ಪ್ರಮೋಶನ್‌ಗೆ ಬನ್ನಿ ಎಂದು ಕರೆದರೆ ಹೇಗೆ ಬರೋಕ್ಕಾಗುತ್ತೆ ಹೇಳಿ.

5. “ಓ ಪ್ರೇಮವೇ’ ಸಿನಿಮಾದ ಪ್ರಮೋಶನ್‌ಗೆ ಕರೆದರೂ ನೀವು ಬರಲಿಲ್ಲವಂತೆ?
ಎರಡು ವರ್ಷದಿಂದ ಆ ಸಿನಿಮಾವನ್ನು ರಿಲೀಸ್‌ ಮಾಡುತ್ತೇನೆ ಎಂದು ಹೇಳಿಕೊಂಡೆ ಬಂದಿದ್ದರು. ಸಾಕಷ್ಟು ಬಾರಿ ಪ್ರಮೋಶನ್‌ಗೆ ನಾನು ಡೇಟ್‌ ಕೊಟ್ಟರೂ ಅದನ್ನು ಬಳಸಿಕೊಳ್ಳಲಿಲ್ಲ. ಈ ಸಿನಿಮಾದ ಪ್ರಮೋಶನ್‌ಗಾಗಿ ನಾನು ಬೇರೆ ಸಿನಿಮಾಗಳ ಚಿತ್ರೀಕರಣ ಕೂಡಾ ಮುಂದೆ ಹಾಕಿದೆ. ಆದರೆ, ಸಿನಿಮಾ ರಿಲೀಸ್‌ ಮಾಡಲೇ ಇಲ್ಲ. ಕೊನೆಗೆ ನಾನು ಬೇರೆ ಸಿನಿಮಾಗಳ ಚಿತ್ರೀಕರಣದಲ್ಲಿದ್ದಾಗ ಪ್ರಮೋಶನ್‌ಗೆ ಬನ್ನಿ ಎಂದರೆ ಹೇಗೆ ಬರೋಕ್ಕಾಗುತ್ತೆ ಹೇಳಿ?

6. ನೀವು ಕನ್ನಡ ಸಿನಿಮಾಗಳಿಗೆ ಮೊದಲ ಆದ್ಯತೆ ಕೊಡುತ್ತಿಲ್ಲ, ಅಸಡ್ಡೆ ತೋರಿಸುತ್ತೀರಿ ಎಂಬ ಮಾತೂ ಇದೆಯಲ್ಲ?
ಆ ತರಹ ಸುದ್ದಿ ಹಬ್ಬಿಸುವವರಿಗೆ ನಾನೇನು ಮಾಡೋಕ್ಕಾಗುತ್ತೆ ಹೇಳಿ. ಕನ್ನಡ ಸಿನಿಮಾಗಳ ಬಗ್ಗೆ ಎಷ್ಟು ಪ್ರೀತಿ ಇದೆ ಎಂಬುದು ನನಗೆ ಗೊತ್ತು. ಕನ್ನಡ ನನ್ನ ಮನೆ. ನನ್ನ ಕೆರಿಯರ್‌ ಆರಂಭವಾಗಿದ್ದು ಇಲ್ಲಿಂದಲೇ. ಕನ್ನಡದವನ್ನು ಕಡೆಗಣಿಸುವ ಮಾತೇ ಇಲ್ಲ. ನಟಿಯಾಗಿ ನಾನು ಯಾವ ಭಾಷೆಯಲ್ಲಾದರೂ ಕೆಲಸ ಮಾಡಬಹುದು. ಸಿನಿಮಾಕ್ಕೆ ಭಾಷೆಯ ಹಂಗಿಲ್ಲ ಅಂದುಕೊಂಡಿದ್ದೇನೆ. 

7. ನೀವು ಅಕ್ಕ-ತಂಗಿ ಜೊತೆಯಾಗಿ ನಟಿಸುವ ಸಾಧ್ಯತೆ ಇದೆಯಾ?
ಗೊತ್ತಿಲ್ಲ, ಆದರೆ ಆ ಆಸೆಯಂತೂ ಇದೆ. ಮುಂದೆ ಅವಕಾಶ ಒದಗಿ ಬರುತ್ತಾ ನೋಡಬೇಕು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.