ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ ತೆರೆಗೆ ಸಿದ್ಧ
Team Udayavani, Apr 15, 2018, 11:19 AM IST
ಶ್ರೀ ಕನಕ ದಾಸರ ರಚನೆಯ ಹಾಡಿನ ಸಾಲನ್ನು ಶೀರ್ಷಿಕೆ ಆಗಿ ಇಟ್ಟುಕೊಂಡಿರುವ “ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ’ ಕನ್ನಡ ಚಿತ್ರ ಸೆನ್ಸಾರ್ನಿಂದ ಯು ಅರ್ಹತಾ ಪತ್ರವನ್ನು ಪಡೆದುಕೊಂಡಿದೆ. ನಟ ಅನಂತ್ ನಾಗ್ ಹಾಗೂ ರಾಧಿಕಾ ಚೇತನ್ ಅಭಿನಯದ ಒಂದು ವಿಶಿಷ್ಟ ಕಥಾ ಹಂದರ ಹೊಂದಿರುವ ಚಿತ್ರದ ಟ್ರೇಲರ್ ದುಬೈ ದೇಶದ ಇಂಡಿಯನ್ ಸ್ಕೂಲ್ ಶೇಕ್ ರಾಶೀದ್ ಸಭಾಂಗಣದಲ್ಲಿ ಇತ್ತೀಚಿಗೆ ಬಿಡುಗಡೆ ಆಗಿದೆ.
ಈ ಚಿತ್ರದ ಕೆಲವು ಸನ್ನಿವೇಶಗಳು ಸಹ ಬುರ್ಜ್ ಖಲೀಫಾ ಕಟ್ಟಡದಲ್ಲಿ ಸೆರೆ ಹಿಡಿಯಲಾಗಿದ್ದು, ಅಲ್ಲಿ ಚಿತ್ರೀಕರಣಗೊಂಡ ಮೊದಲ ಕನ್ನಡ ಚಿತ್ರ ಎಂಬ ಹೆಮ್ಮೆ ಈ ಚಿತ್ರತಂಡದ್ದು. ಅನಂತ್ ನಾಗ್ ಅವರ ಪಾತ್ರ ಒಂದು ಪ್ರಶಾಂತ ಸಮುದ್ರ ಇದ್ದ ಹಾಗೆ. ಯುವ ಜನತೆಯನ್ನು ಪ್ರತಿನಿದಿಸುವವರು ನಾಯಕಿ ರಾಧಿಕಾ ಚೇತನ್ ಎಂಬುದು ನಿರ್ದೇಶಕರ ಮಾತು.
ಕಬಡ್ಡಿ ನಿರ್ದೇಶಕ ನರೇಂದ್ರ ಬಾಬು ಅವರ ಕಥೆ, ಚಿತ್ರಕಥೆ, ಸಂಭಾಷಣೆ, ಗೀತ ಸಾಹಿತ್ಯ ಇರುವ ಈ ಚಿತ್ರಕ್ಕೆ ಪಿ ಕೆ ಎಚ್ ದಾಸ್ ಛಾಯಾಗ್ರಹಣ, ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಹಿನ್ನಲೆ ಇರುವ ರಾಮಚಂದ್ರ ಹಡಪದ ಸಂಗೀತ ಒದಗಿಸಿದ್ದಾರೆ. “ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ’ ಎರಡು ಕಾಲ ಘಟ್ಟದಲ್ಲಿ ನಡೆಯುವ ಈ ಚಿತ್ರದ ನಿರ್ಮಾಪಕರುಗಳು ಸುದರ್ಶನ್, ರಾಮಮೂರ್ತಿ ಹಾಗೂ ದುಬೈ ಅಲ್ಲಿ ವ್ಯಾಪಾರಿ ಆಗಿರುವ ಹರೀಶ್ ಶೆರೀಗಾರ್ ನಿರ್ಮಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು
Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್ ಟೀಂ
ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು
MUST WATCH
ಹೊಸ ಸೇರ್ಪಡೆ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ