ಪ್ರೀಮಿಯರ್‌ ಪದ್ಮಿನಿಯಲ್ಲಿ ಜಗ್ಗೇಶ್‌


Team Udayavani, Apr 15, 2018, 11:21 AM IST

premier.jpg

ನಟ ಜಗ್ಗೇಶ್‌ ಅವರೀಗ ಪ್ರೀಮಿಯರ್‌ ಪದ್ಮಿನಿ ಕಾರು ಏರಿದ್ದಾರೆ! ಅರೇ, ಇದೇನಪ್ಪಾ ಜಗ್ಗೇಶ್‌ ಹಳೇ ಕಾರಲ್ಲಿ ಕೂತುಕೊಂಡ್ರಾ ಎಂಬ ಪ್ರಶ್ನೆ ಎದುರಾದರೆ, ಅಚ್ಚರಿಯೇನಿಲ್ಲ. “ಪ್ರೀಮಿಯರ್‌ ಪದ್ಮಿನಿ’ ಎಂಬುದು ಅವರು ಅಭಿನಯಿಸುತ್ತಿರುವ ಹೊಸ ಚಿತ್ರದ ಹೆಸರು. ಜಗ್ಗೇಶ್‌ ನಟಿಸಿರುವ “8 ಎಂಎಂ’ ಬಿಡುಗಡೆಗೆ ರೆಡಿಯಾಗಿದೆ. ಆದರ ಬೆನ್ನಲ್ಲೇ ಜಗ್ಗೇಶ್‌ “ಪ್ರೀಮಿಯರ್‌ ಪದ್ಮಿನಿ’ ಚಿತ್ರ ಒಪ್ಪಿಕೊಂಡಿದ್ದಾರೆ.

ಈ ಚಿತ್ರಕ್ಕೆ ಶ್ರುತಿನಾಯ್ಡು ನಿರ್ಮಾಪಕಿ. ಇದುವರೆಗೆ ಕಿರುತೆರೆಯಲ್ಲಿ ಹಲವು ಧಾರಾವಾಹಿಗಳನ್ನು ನಿರ್ದೇಶಿಸಿ,ನಿರ್ಮಿಸಿದ್ದ ಶ್ರುತಿನಾಯ್ಡು ಅವರೀಗ ಇದೇ ಮೊದಲ ಬಾರಿಗೆ ಸಿನಿಮಾ ರಂಗಕ್ಕೂ ನಿರ್ಮಾಪಕರಾಗಿ ಎಂಟ್ರಿಕೊಟ್ಟಿದ್ದಾರೆ. ಅಂದಹಾಗೆ, ಅವರ ಪತಿ ರಮೇಶ್‌ ಇಂದ್ರ ಅವರೇ ಈ ಚಿತ್ರದ ನಿರ್ದೇಶಕರು. ಇದು ಅವರ ಚೊಚ್ಚಲ ನಿರ್ದೇಶನದ ಚಿತ್ರ. ಕಥೆ, ಚಿತ್ರಕಥೆ ಮತ್ತು ಸಂಭಾಷಣೆಯ ಜವಾಬ್ದಾರಿಯನ್ನೂ ರಮೇಶ್‌ ಇಂದ್ರ ಅವರೇ ವಹಿಸಿಕೊಂಡಿದ್ದಾರೆ.

ಇದೊಂದು ಫ್ಯಾಮಿಲಿ ಡ್ರಾಮ ಹೊಂದಿರುವ ಚಿತ್ರ. ಲವ್‌ಸ್ಟೋರಿ ಇದೆ. ಎಮೋಷನಲ್‌ ಇದೆ. ದೃಶ್ಯಗಳಿಗೆ ಪೂರಕವಾದಂತಹ ಹಾಸ್ಯವೂ ಇದೆ. ಎಲ್ಲದ್ದಕ್ಕಿಂತಲೂ ಹೆಚ್ಚಾಗಿ ಈಗಿನ ವಾಸ್ತವತೆಯ ಅಂಶಗಳು ಇರಲಿವೆ. ಯೂಥ್‌ಗೊಂದು ಹೊಸ ಜಮಾನದ ಸಿನಿಮಾ ಇದಾಗಲಿದೆ ಎಂಬುದು ನಿರ್ದೇಶಕರ ಮಾತು. ಜಗ್ಗೇಶ್‌ ಇದ್ದಾರೆಂದಮೇಲೆ ಹಾಸ್ಯಕ್ಕೇನೂ ಕೊರತೆ ಇಲ್ಲ. ಹಾಗಂತ ಇಡೀ ಸಿನಿಮಾ ಅದರ ಸುತ್ತವೇ ಸುತ್ತುವುದಿಲ್ಲ.

ಇಲ್ಲಿ ಅನೇಕ ಸಂಗತಿಗಳು ತೇಲಿಬರಲಿವೆ. ಅಪ್ಪಟ ಮನರಂಜನೆಯ ಜೊತೆಗೊಂದು ಸಂದೇಶವೂ ಇರಲಿದೆ. ಶೀರ್ಷಿಕೆಯಲ್ಲೇ ಒಂದು ಸೆಳೆತವಿದೆ. ಹಾಗಾಗಿ, ಸಿನಿಮಾದಲ್ಲೂ ಅಂತಹ ಅಂಶಗಳು ಸೆಳೆಯುತ್ತವೆ ಎನ್ನುತ್ತಾರೆ ನಿರ್ದೇಶಕ ರಮೇಶ್‌ ಇಂದ್ರ. ಚಿತ್ರದಲ್ಲಿ ಜಗ್ಗೇಶ್‌ ಜೊತೆ ಮಧುಬಾಲ ಕಾಣಿಸಿಕೊಳ್ಳುತ್ತಿದ್ದಾರೆ. “ರನ್ನ’ ಬಳಿಕ “ಸೀತಾರಾಮ ಕಲ್ಯಾಣ’ ಚಿತ್ರದಲ್ಲೂ ನಟಿಸುತ್ತಿರುವ ಮಧುಬಾಲ ಈಗ “ಪ್ರೀಮಿಯರ್‌ ಪದ್ಮಿನಿ’ ಚಿತ್ರದ ಮೂಲಕ ಪುನಃ ಬರುತ್ತಿದ್ದಾರೆ.

ಉಳಿದಂತೆ ಚಿತ್ರದಲ್ಲಿ ಸುಧಾರಾಣಿ, ಸಿಹಿಕಹಿ ಗೀತಾ, “ಗೀತಾ ಬ್ಯಾಂಗಲ್‌ ಸ್ಟೋರ್’ ಹೀರೋ ಪ್ರಮೋದ್‌ ಇತರರು ನಟಿಸುತ್ತಿದ್ದಾರೆ. ಮೈಸೂರು ಮತ್ತು ಬೆಂಗಳೂರು ಸುತ್ತಮುತ್ತ ಸುಮಾರು 40 ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ. ಚಿತ್ರಕ್ಕೆ ಅರ್ಜುನ್‌ ಜನ್ಯಾ ನಾಲ್ಕು ಹಾಡುಗಳಿಗೆ ಸಂಗೀತ ನೀಡುತ್ತಿದ್ದಾರೆ. ಅದ್ವೆ„ತ ಛಾಯಾಗ್ರಹಣವಿದೆ. ಏ. 18 ರಂದು ಚಿತ್ರಕ್ಕೆ ಮುಹೂರ್ತ ನಡೆಯಲಿದೆ. ಚುನಾವಣೆ ನಂತರ ಚಿತ್ರೀಕರಣ ಶುರುವಾಗಲಿದೆ.

ಟಾಪ್ ನ್ಯೂಸ್

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.