ಪ್ರೀಮಿಯರ್‌ ಪದ್ಮಿನಿಯಲ್ಲಿ ಜಗ್ಗೇಶ್‌


Team Udayavani, Apr 15, 2018, 11:21 AM IST

premier.jpg

ನಟ ಜಗ್ಗೇಶ್‌ ಅವರೀಗ ಪ್ರೀಮಿಯರ್‌ ಪದ್ಮಿನಿ ಕಾರು ಏರಿದ್ದಾರೆ! ಅರೇ, ಇದೇನಪ್ಪಾ ಜಗ್ಗೇಶ್‌ ಹಳೇ ಕಾರಲ್ಲಿ ಕೂತುಕೊಂಡ್ರಾ ಎಂಬ ಪ್ರಶ್ನೆ ಎದುರಾದರೆ, ಅಚ್ಚರಿಯೇನಿಲ್ಲ. “ಪ್ರೀಮಿಯರ್‌ ಪದ್ಮಿನಿ’ ಎಂಬುದು ಅವರು ಅಭಿನಯಿಸುತ್ತಿರುವ ಹೊಸ ಚಿತ್ರದ ಹೆಸರು. ಜಗ್ಗೇಶ್‌ ನಟಿಸಿರುವ “8 ಎಂಎಂ’ ಬಿಡುಗಡೆಗೆ ರೆಡಿಯಾಗಿದೆ. ಆದರ ಬೆನ್ನಲ್ಲೇ ಜಗ್ಗೇಶ್‌ “ಪ್ರೀಮಿಯರ್‌ ಪದ್ಮಿನಿ’ ಚಿತ್ರ ಒಪ್ಪಿಕೊಂಡಿದ್ದಾರೆ.

ಈ ಚಿತ್ರಕ್ಕೆ ಶ್ರುತಿನಾಯ್ಡು ನಿರ್ಮಾಪಕಿ. ಇದುವರೆಗೆ ಕಿರುತೆರೆಯಲ್ಲಿ ಹಲವು ಧಾರಾವಾಹಿಗಳನ್ನು ನಿರ್ದೇಶಿಸಿ,ನಿರ್ಮಿಸಿದ್ದ ಶ್ರುತಿನಾಯ್ಡು ಅವರೀಗ ಇದೇ ಮೊದಲ ಬಾರಿಗೆ ಸಿನಿಮಾ ರಂಗಕ್ಕೂ ನಿರ್ಮಾಪಕರಾಗಿ ಎಂಟ್ರಿಕೊಟ್ಟಿದ್ದಾರೆ. ಅಂದಹಾಗೆ, ಅವರ ಪತಿ ರಮೇಶ್‌ ಇಂದ್ರ ಅವರೇ ಈ ಚಿತ್ರದ ನಿರ್ದೇಶಕರು. ಇದು ಅವರ ಚೊಚ್ಚಲ ನಿರ್ದೇಶನದ ಚಿತ್ರ. ಕಥೆ, ಚಿತ್ರಕಥೆ ಮತ್ತು ಸಂಭಾಷಣೆಯ ಜವಾಬ್ದಾರಿಯನ್ನೂ ರಮೇಶ್‌ ಇಂದ್ರ ಅವರೇ ವಹಿಸಿಕೊಂಡಿದ್ದಾರೆ.

ಇದೊಂದು ಫ್ಯಾಮಿಲಿ ಡ್ರಾಮ ಹೊಂದಿರುವ ಚಿತ್ರ. ಲವ್‌ಸ್ಟೋರಿ ಇದೆ. ಎಮೋಷನಲ್‌ ಇದೆ. ದೃಶ್ಯಗಳಿಗೆ ಪೂರಕವಾದಂತಹ ಹಾಸ್ಯವೂ ಇದೆ. ಎಲ್ಲದ್ದಕ್ಕಿಂತಲೂ ಹೆಚ್ಚಾಗಿ ಈಗಿನ ವಾಸ್ತವತೆಯ ಅಂಶಗಳು ಇರಲಿವೆ. ಯೂಥ್‌ಗೊಂದು ಹೊಸ ಜಮಾನದ ಸಿನಿಮಾ ಇದಾಗಲಿದೆ ಎಂಬುದು ನಿರ್ದೇಶಕರ ಮಾತು. ಜಗ್ಗೇಶ್‌ ಇದ್ದಾರೆಂದಮೇಲೆ ಹಾಸ್ಯಕ್ಕೇನೂ ಕೊರತೆ ಇಲ್ಲ. ಹಾಗಂತ ಇಡೀ ಸಿನಿಮಾ ಅದರ ಸುತ್ತವೇ ಸುತ್ತುವುದಿಲ್ಲ.

ಇಲ್ಲಿ ಅನೇಕ ಸಂಗತಿಗಳು ತೇಲಿಬರಲಿವೆ. ಅಪ್ಪಟ ಮನರಂಜನೆಯ ಜೊತೆಗೊಂದು ಸಂದೇಶವೂ ಇರಲಿದೆ. ಶೀರ್ಷಿಕೆಯಲ್ಲೇ ಒಂದು ಸೆಳೆತವಿದೆ. ಹಾಗಾಗಿ, ಸಿನಿಮಾದಲ್ಲೂ ಅಂತಹ ಅಂಶಗಳು ಸೆಳೆಯುತ್ತವೆ ಎನ್ನುತ್ತಾರೆ ನಿರ್ದೇಶಕ ರಮೇಶ್‌ ಇಂದ್ರ. ಚಿತ್ರದಲ್ಲಿ ಜಗ್ಗೇಶ್‌ ಜೊತೆ ಮಧುಬಾಲ ಕಾಣಿಸಿಕೊಳ್ಳುತ್ತಿದ್ದಾರೆ. “ರನ್ನ’ ಬಳಿಕ “ಸೀತಾರಾಮ ಕಲ್ಯಾಣ’ ಚಿತ್ರದಲ್ಲೂ ನಟಿಸುತ್ತಿರುವ ಮಧುಬಾಲ ಈಗ “ಪ್ರೀಮಿಯರ್‌ ಪದ್ಮಿನಿ’ ಚಿತ್ರದ ಮೂಲಕ ಪುನಃ ಬರುತ್ತಿದ್ದಾರೆ.

ಉಳಿದಂತೆ ಚಿತ್ರದಲ್ಲಿ ಸುಧಾರಾಣಿ, ಸಿಹಿಕಹಿ ಗೀತಾ, “ಗೀತಾ ಬ್ಯಾಂಗಲ್‌ ಸ್ಟೋರ್’ ಹೀರೋ ಪ್ರಮೋದ್‌ ಇತರರು ನಟಿಸುತ್ತಿದ್ದಾರೆ. ಮೈಸೂರು ಮತ್ತು ಬೆಂಗಳೂರು ಸುತ್ತಮುತ್ತ ಸುಮಾರು 40 ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ. ಚಿತ್ರಕ್ಕೆ ಅರ್ಜುನ್‌ ಜನ್ಯಾ ನಾಲ್ಕು ಹಾಡುಗಳಿಗೆ ಸಂಗೀತ ನೀಡುತ್ತಿದ್ದಾರೆ. ಅದ್ವೆ„ತ ಛಾಯಾಗ್ರಹಣವಿದೆ. ಏ. 18 ರಂದು ಚಿತ್ರಕ್ಕೆ ಮುಹೂರ್ತ ನಡೆಯಲಿದೆ. ಚುನಾವಣೆ ನಂತರ ಚಿತ್ರೀಕರಣ ಶುರುವಾಗಲಿದೆ.

ಟಾಪ್ ನ್ಯೂಸ್

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.