ಹಳೆ ಟೈಟಲ್‌ ಹೊಸ ಸಿನಿಮಾ: ಎಡಕಲ್ಲು ಮೇಲೊಂದು ಸಂದೇಶ


Team Udayavani, Apr 16, 2018, 11:51 AM IST

Edakallu-Guddada-Mele.jpg

“ಎಡಕಲ್ಲು ಗುಡ್ಡದ ಮೇಲೆ’ – ಈ ಸಿನಿಮಾ ಹೆಸರು ಕೇಳಿದಾಗ ನಿಮಗೆ ಪುಟ್ಟಣ್ಣ ಕಣಗಾಣಲ್‌ ಅವರ ಹೆಸರು ನೆನಪಿಗೆ ಬರುತ್ತದೆ. ಏಕೆಂದರೆ “ಎಡಕಲ್ಲು ಗುಡ್ಡದ ಮೇಲೆ’ ಚಿತ್ರವನ್ನು ನಿರ್ದೇಶಿಸಿದವರು ಪುಟ್ಟಣ್ಣ. ಚಂದ್ರಶೇಖರ್‌, ಜಯಂತಿ, ಆರತಿ ಮುಖ್ಯಯಲ್ಲಿ ನಟಿಸಿದ್ದ ಈ ಚಿತ್ರ ಅಂದು ದೊಡ್ಡ ಯಶಸ್ಸು ಕಂಡಿತ್ತು. ಈಗ ಮತ್ತೆ “ಎಡಕಲ್ಲು ಗುಡ್ಡದ ಮೇಲೆ’ ಚಿತ್ರ ಸುದ್ದಿ ಮಾಡುತ್ತಿದೆ.

ಆದರೆ, ಇದು ಪುಟ್ಟಣ್ಣ ಕಣಗಾಲ್‌ ನಿರ್ದೇಶನದ “ಎಡಕಲ್ಲು ಗುಡ್ಡದ ಮೇಲೆ’ ಚಿತ್ರವಲ್ಲ, ಸಂಪೂರ್ಣ ಹೊಸಬರೇ ಸೇರಿಕೊಂಡು ಮಾಡಿರುವ ಚಿತ್ರ. ಹೌದು, ಹಳೆಯ ಯಶಸ್ವಿ ಸಿನಿಮಾಗಳ ಶೀರ್ಷಿಕೆಗಳನ್ನಿಟ್ಟುಕೊಂಡು ಸಿನಿಮಾ ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದೆ. ಆ ಸಾಲಿಗೆ “ಎಡಕಲ್ಲು ಗುಡ್ಡದ ಮೇಲೆ’ ತಂಡ ಕೂಡಾ ಸೇರುತ್ತದೆ. ವಿವಿನ್‌ ಸೂರ್ಯ ಎನ್ನುವವರು ಹೊಸ “ಎಡಕಲ್ಲು ಗುಡ್ಡದ ಮೇಲೆ’ ಚಿತ್ರದ ನಿರ್ದೇಶಕರು.

ಈಗಾಗಲೇ ಚಿತ್ರೀಕರಣ ಮುಗಿದಿದ್ದು, ಇತ್ತೀಚೆಗೆ ಚಿತ್ರದ ಆಡಿಯೋ ಬಿಡುಗಡೆಯಾಗಿದೆ. ನಿರ್ದೇಶಕ ವಿವಿನ್‌ ಹೇಳುವಂತೆ, ಪುಟ್ಟಣ್ಣ ಅವರ “ಎಡಕಲ್ಲು ಗುಡ್ಡದ ಮೇಲೆ’ ಚಿತ್ರಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲವಂತೆ. “ನನಗೆ ಪುಟ್ಟಣ್ಣ ಅವರ ಚಿತ್ರದ ಟೈಟಲ್‌ ಮರುಬಳಕೆ ಮಾಡಿದರ ಕುರಿತು ಹೆಮ್ಮೆಯೂ ಇದೆ ಜೊತೆಗೆ ಎಚ್ಚರಿಕೆಯೂ ಇದೆ. ಆ ಟೈಟಲ್‌ನಡಿ ಸಿನಿಮಾದಲ್ಲಿ ಒಳ್ಳೆಯ ಅಂಶಗಳನ್ನೇ ಹೇಳಿದ್ದೇನೆ’ ಎನ್ನುವುದು ವಿವಿನ್‌ ಮಾತು.

ಚಿತ್ರದಲ್ಲಿ ತಂದೆ-ತಾಯಿಯ, ಸಂಬಂಧಗಳ ಮೇಲೆ ಪ್ರೀತಿ ತೋರಿಸದೇ, ಹಣ, ಆಸ್ತಿ ಹಿಂದೆ ಬಿದ್ದಾಗ ಏನೇನಾಗುತ್ತದೆ ಎಂಬ ಅಂಶವನ್ನಿಟ್ಟುಕೊಂಡು ಈ ಸಿನಿಮಾ ಮಾಡಿದ್ದಾರಂತೆ. ನಿರ್ದೇಶಕರಿಗೆ “ಎಡಕಲ್ಲು ಗುಡªದ ಮೇಲೆ’ ಚಿತ್ರದಲ್ಲಿ ನಟಿಸಿದ ಹಿರಿಯ ಕಲಾವಿದರಾದ ಚಂದ್ರಶೇಖರ್‌, ಜಯಂತಿ ಹಾಗೂ ಆರತಿಯವರನ್ನು ಈ ಚಿತ್ರದಲ್ಲೂ ಬಳಸಿಕೊಳ್ಳಬೇಕೆಂಬ ಆಸೆ ಇತ್ತಂತೆ. ಆದರೆ, ಜಯಂತಿ ಅವರ ಅನಾರೋಗ್ಯ ಹಾಗೂ ಆರತಿಯವರು ಸಂಪರ್ಕಕ್ಕೆ ಸಿಗದ ಕಾರಣ ಅವರಿಬ್ಬರನ್ನು ಬಳಸಿಕೊಳ್ಳಲಾಗಲಿಲ್ಲವಂತೆ.

ಚಂದ್ರಶೇಖರ್‌ ಅವರು ಇಲ್ಲಿ ನಾಯಕನ ಪಾತ್ರ ಮಾಡಿದ್ದಾಗಿ ಹೇಳಿಕೊಂಡರು ವಿವಿನ್‌. ಚಿತ್ರದಲ್ಲಿ ನಕುಲ್‌ ನಾಯಕರಾಗಿ ನಟಿಸಿದ್ದಾರೆ. ಸ್ವಾತಿ ಶರ್ಮಾ ನಾಯಕಿ. “ಇದೊಂದು ಮಹಿಳಾ ಪ್ರಧಾನ ಚಿತ್ರವಾಗಿದ್ದು, ಮೊದಲ ಚಿತ್ರದಲ್ಲೇ ನಟನೆಗೆ ಅವಕಾಶವಿರುವ ಪಾತ್ರ ಸಿಕ್ಕಿದ್ದು ನನ್ನ ಅದೃಷ್ಟ’ ಎನ್ನುವುದು ಸ್ವಾತಿ ಮಾತು. ಚಿತ್ರದಲ್ಲಿ ಹಿರಿಯ ನಟರಾದ ದತ್ತಣ್ಣ, ಮನ್‌ದೀಪ್‌ರಾಯ್‌, ರವಿಭಟ್‌, ಮೂಗು ಸುರೇಶ್‌ ಸೇರಿದಂತೆ ಅನೇಕರು ನಟಿಸಿದ್ದಾರೆ. ಆಶಿಕ್‌ ಕಿರಣ್‌ ಸಂಗೀತ ಚಿತ್ರಕ್ಕಿದೆ. ಚಿತ್ರವನ್ನು ಜಿ.ಪಿ.ಪ್ರಕಾಶ್‌ ನಿರ್ಮಿಸಿದ್ದಾರೆ. 

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.