ಭಯಂಕರ ನಟ ಪ್ರಥಮ್‌ನ ಮತ್ತೊಂದು ಚಿತ್ರ


Team Udayavani, Apr 16, 2018, 11:51 AM IST

Nata-Bhayankara.jpg

ಬಿಗ್‌ಬಾಸ್‌ ಖ್ಯಾತಿಯ ಪ್ರಥಮ್‌ ಅಭಿನಯದ “ದೇವ್ರಂಥ ಮನುಷ್ಯ’ ಚಿತ್ರ ಬಿಡುಗಡೆಯಾಗಿದ್ದಷ್ಟೇ ಗೊತ್ತು. ಆಮೇಲೆ ಪ್ರಥಮ್‌ ಸುದ್ದಿಯೇ ಇರಲಿಲ್ಲ. ಅವರೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಮತ್ತೊಂದು ನಿರ್ದೇಶನಕ್ಕೆ ಅಣಿಯಾಗಿದ್ದಾರೆ ಪ್ರಥಮ್‌. ಅವರ ಚೊಚ್ಚಲ ನಿರ್ದೇಶನದ “ದೇವ್ರೌನೆ ಬುಡುಗುರು’ ಚಿತ್ರ ಇನ್ನೂ ಮುಗಿಯುವ ಲಕ್ಷಣವೇ ಕಾಣುತ್ತಿಲ್ಲ. ಅದರ ಬೆನ್ನ ಹಿಂದೆಯೇ ಅವರು “ಬಿಲ್ಡಪ್‌’ ಎಂಬ ಮತ್ತೊಂದು ಸಿನಿಮಾ ಅನೌನ್ಸ್‌ ಮಾಡಿದ್ದರು.

ಆ ಚಿತ್ರದ ಶೀರ್ಷಿಕೆಗೆ “ಇವನದು ಬರೀ ಇದೇ ಆಯ್ತು ಗುರು’ ಎಂಬ ಅಡಿಬರಹವೂ ಇತ್ತು. “ಬಿಲ್ಡಪ್‌’ ಚಿತ್ರದ ಕುರಿತು ಸಾಕಷ್ಟು ಬಿಲ್ಡಪ್‌ ಕೂಡ ಕೊಟ್ಟಿದ್ದರು. ಆದರೆ, ಅದರ “ಕಥೆ’ ಏನಾಯ್ತು ಅನ್ನೋದು ಅವರಿಗಷ್ಟೇ ಗೊತ್ತು. ಆಗಲೇ ಅವರು ಇನ್ನೊಂದು ಚಿತ್ರಕ್ಕೆ ಕೈ ಹಾಕಿದ್ದಾರೆ. ಅವರ ಹೊಸ ಚಿತ್ರಕ್ಕೆ “ನಟ ಭಯಂಕರ’ ಎಂದು ಹೆಸರಿಟ್ಟಿದ್ದಾರೆ. ಈ ಚಿತ್ರಕ್ಕೆ ಅವರೇ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವುದು ವಿಶೇಷ.

ಈಗಾಗಲೇ ಚಿತ್ರದ ಶೀರ್ಷಿಕೆವುಳ್ಳ ಪೋಸ್ಟರ್‌ವೊಂದು ಬಿಡುಗಡೆಯಾಗಿದೆ. ಚಿತ್ರದಲ್ಲಿ ಯಾರೆಲ್ಲಾ ಇರುತ್ತಾರೆ, ಕಥೆಯ ತಿರುಳು ಏನು ಇತ್ಯಾದಿ ಕುರಿತು ಗುಟ್ಟು ರಟ್ಟು ಮಾಡಿಲ್ಲ. ಈ ಚಿತ್ರವನ್ನು ಸ್ವಾರಸ್ಯ ಸಿನಿ ಕ್ರಿಯೇಷನ್ಸ್‌ ಬ್ಯಾನರ್‌ನಡಿ ನಿರ್ಮಾಣ ಮಾಡಲಾಗುತ್ತಿದೆ. ಪ್ರಥಮ್‌ ಈಗ ತಮ್ಮ ಹೆಸರ ಮುಂದೆ ಮತ್ತೊಂದು ಬಿರುದೂ ಸೇರಿಕೊಂಡಿದ್ದಾರೆ. ಇದುವರೆಗೆ “ಒಳ್ಳೇ ಹುಡುಗ ಪ್ರಥಮ್‌’ ಎಂದೇ ಕರೆದುಕೊಳ್ಳುತ್ತಿದ್ದರು.

“ನಟ ಭಯಂಕರ’ ಶೀರ್ಷಿಕೆಯ ಪೋಸ್ಟರ್‌ನಲ್ಲಿ “ಒಳ್ಳೇ ಹುಡುಗ ಪ್ರಥಮ್‌’ ಬದಲಾಗಿ, “ಒಳ್ಳೇ ಹುಡುಗ ಯರ್ರಾಬಿರ್ರಿ ಸ್ಟಾರ್‌ ಪ್ರಥಮ್‌’ ಎಂಬ ಪದವೂ ಸೇರಿಕೊಂಡಿದೆ. ಇದು ಅವರಾಗಿಯೇ ಇಟ್ಟುಕೊಂಡಿರುವ ಬಿರುದೋ, ಅಥವಾ ಅಭಿಮಾನಿಗಳು ಕೊಟ್ಟಿಧ್ದೋ ಎಂಬ ಬಗ್ಗೆ ಸದ್ಯಕ್ಕೆ ಮಾಹಿತಿ ಇಲ್ಲ. “ನಟ ಭಯಂಕರ’ ಎಂಬ ಶೀರ್ಷಿಕೆ ಹೇಳುವಂತೆ, ಇದೊಂದು ಪಕ್ಕಾ ಮನರಂಜನೆ ಸಿನಿಮಾ.

ಇಲ್ಲಿ ಪ್ರಥಮ್‌ ನಿರ್ದೇಶನವನ್ನಷ್ಟೇ ಮಾಡುತ್ತಾರೋ, ಕ್ಯಾಮೆರಾ ಮುಂದೆ ನಿಂತು ನಟನೆಯನ್ನೂ ಮಾಡುತ್ತಾರೋ ಎಂಬುದಕ್ಕೆ ಉತ್ತರವಿಲ್ಲ. ಚಿತ್ರದ ಪೋಸ್ಟರ್‌ನಲ್ಲೊಂದು ಹಳೆಯ ಕಾರೊಂದು ಬಿಟ್ಟರೆ, ತಂತ್ರಜ್ಞರ ಹೆಸರುಗಳಿವೆಯಷ್ಟೇ. ಎಲ್ಲವನ್ನೂ ಗೌಪ್ಯವಾಗಿರುವ ಪ್ರಥಮ್‌, ಚಿತ್ರವನ್ನು ಯಾವಾಗ ಶುರು ಮಾಡುತ್ತಾರೆ ಎಂಬುದೂ ಸಹ ಸಸ್ಪೆನ್ಸ್‌. ಈ ಚಿತ್ರಕ್ಕೆ ಪ್ರದ್ಯೋತನ್‌ ಸಂಗೀತ ನೀಡುತ್ತಿದ್ದಾರೆ.

ರವಿವರ್ಮ ಮತ್ತು ಡಿಫ‌ರೆಂಟ್‌ ಡ್ಯಾನಿ ಅವರ ಸಾಹಸ ನಿರ್ದೇಶನವಿದೆ. ನಾಗತಿಹಳ್ಳಿ ಚಂದ್ರಶೇಖರ್‌, ನಾಗೇಂದ್ರಪ್ರಸಾದ್‌, ಬಹದ್ದೂರ್‌ ಚೇತನ್‌, ಅರಸು ಅಂತಾರೆ ಅವರ ಸಾಹಿತ್ಯವಿದೆ. “ಬಿಲ್ಡಪ್‌’ ಚಿತ್ರ ಸೂಪರ್‌ಸ್ಟಾರ್‌ ಮತ್ತು ಕುರುಡು ದೆವ್ವದ ಕಥೆ ಹೊಂದಿದ್ದು, ಆ ಚಿತ್ರದಲ್ಲಿ ವಿಶೇಷ ವ್ಯಕ್ತಿಗಳು ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಿದ್ದರು. ಅಷ್ಟೇ ಅಲ್ಲ, ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ತಯಾರಾಗಲಿದೆ ಎಂಬುದಾಗಿಯೂ ಹೇಳಿದ್ದರು. ಚಿತ್ರಕ್ಕೆ “ಬಿಲ್ಡಪ್‌’ ಶೀರ್ಷಿಕೆ ಹೊರತಾಗಿ ಬೇರೇನೂ ಪಕ್ಕಾ ಆಗಿಲ್ಲ.

ಚಿತ್ರದ ನಾಯಕಿ ಯಾರು, ತಂತ್ರಜ್ಞರು ಯಾರು, ಯಾರೆಲ್ಲ ಇರುತ್ತಾರೆ, ಯಾವಾಗ ಚಿತ್ರೀಕರಣ ಶುರು ಇತ್ಯಾದಿ ಪ್ರಶ್ನೆಗಳಿಗೆ ಈಗ ಉತ್ತರವಿಲ್ಲ ಎಂದಿದ್ದರು ಪ್ರಥಮ್‌. ಈ ಮಧ್ಯೆ ಅವರು “ಎಂಎಲ್‌ಎ’ ಎಂಬ ಚಿತ್ರದಲ್ಲೂ ನಟಿಸುತ್ತಿದ್ದಾರೆ. ಅದು ಮುಗಿಯುವ ಹಂತದಲ್ಲಿದೆ. ಮೊದಲ ನಿರ್ದೇಶನದ ಚಿತ್ರ ತಡವಾಗಿದ್ದು ಯಾಕೆ ಎಂಬ ಪ್ರಶ್ನೆಗೆ “ನನ್ನ ಡೇಟ್ಸೆ ಇಲ್ಲ’ ಎಂದಿದ್ದರು ಪ್ರಥಮ್‌. ಆದರೆ, ಅಷ್ಟೊಂದು ಬಿಜಿ ನಡುವೆ “ಬಿಲ್ಡಪ್‌’ ಚಿತ್ರ ನಿರ್ದೇಶನಕ್ಕೆ ಅಣಿಯಾಗಿ, ಈಗ “ನಟ ಭಯಂಕರ’ ನಿರ್ದೇಶನಕ್ಕೂ ರೆಡಿಯಾಗಿದ್ದಾರೆ.

ಟಾಪ್ ನ್ಯೂಸ್

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.