ಹಿಂದಿಗೆ ರೀಮೇಕ್‌ ಆಗಲಿದೆ ರಕ್ಷಿತ್‌ ಚಿತ್ರ


Team Udayavani, Apr 16, 2018, 9:00 PM IST

godhi.jpg

ರಕ್ಷಿತ್‌ ಶೆಟ್ಟಿ ಅಭಿನಯದ “ಕಿರಿಕ್‌ ಪಾರ್ಟಿ’ ಚಿತ್ರವು ಹಿಂದಿಗೆ ರೀಮೇಕ್‌ ಆಗುತ್ತಿದೆ ಮತ್ತು ಆ ರೀಮೇಕ್‌ನಲ್ಲಿ ಸಿದ್ಧಾರ್ಥ್ ಮಲ್ಹೋತ್ರಾ ನಟಿಸುತ್ತಿದ್ದಾರೆ ಎಂದು ಹೇಳಲಾಗಿತ್ತು. ಆ ಚಿತ್ರ ರೀಮೇಕ್‌ ಶುರುವಾಗುವುದಕ್ಕಿಂತ ಮುನ್ನವೇ ರಕ್ಷಿತ್‌ ಅಭಿನಯದ ಇನ್ನೊಂದು ಚಿತ್ರ ಹಿಂದಿಗೆ ರೀಮೇಕ್‌ ಆಗುತ್ತಿರುವ ಸುದ್ದಿ ಬಂದಿದೆ. ಅದೇ “ಗೋಧಿ ಬಣ್ಣ ಸಾಧಾರಣ ಮೈಕಟ್ಟು’. ಈ ಚಿತ್ರದ ಹಿಂದಿ ರೀಮೇಕ್‌ ಹಕ್ಕುಗಳನ್ನು ವಿಎಲ್‌ ಪ್ರೊಡಕ್ಷನ್ಸ್‌ ಎಂಬ ಸಂಸ್ಥೆ ಖರೀದಿಸಿದ್ದು, ಆ ಚಿತ್ರದ ಇನ್ನಷ್ಟು ವಿವರಗಳು ಸದ್ಯದಲ್ಲೇ ಲಭ್ಯವಾಗಲಿವೆ.

“ಗೋಧಿ ಬಣ್ಣ ಸಾಧಾರಣ ಮೈಕಟ್ಟು’ ಚಿತ್ರವು ಹಿಂದಿಗೆ ರೀಮೇಕ್‌ ಆಗುತ್ತಿದೆ ಎಂಬ ಸುದ್ದಿ ಒಂದೂ-ಮುಕ್ಕಾಲು ವರ್ಷದ ಹಿಂದೆಯೇ ಬಂದಿತ್ತು. ರೀಮೇಕ್‌ ಹಕ್ಕುಗಳನ್ನು ನಟ-ನಿರ್ದೇಶಕ ಪ್ರಕಾಶ್‌ ರೈ ಪಡೆದಿದ್ದಾರೆ ಮತ್ತು ಅವರು ಅಮಿತಾಭ್‌ ಬಚ್ಚನ್‌ ಅಭಿನಯದಲ್ಲಿ ಚಿತ್ರ ಮಾಡುತ್ತಾರೆ ಎಂದೆಲ್ಲಾ ಸುದ್ದಿ ಹಬ್ಬಿತ್ತು. ಪ್ರಕಾಶ್‌ ರೈ ರೀಮೇಕ್‌ ಹಕ್ಕುಗಳನ್ನು ಪಡೆದಿರುವುದು ಹೌದಾದರೂ, ಅದು ಬರೀ ತೆಲುಗು-ತಮಿಳಿನದ್ದು.

ಹಿಂದಿ ರೀಮೇಕ್‌ ಹಕ್ಕುಗಳು ನಿರ್ಮಾಪಕ ಪುಷ್ಕರ್‌ ಮಲ್ಲಿಕಾರ್ಜುನಯ್ಯ ಅವರ ಬಳಿಯೇ ಇದ್ದು, ಇದೀಗ ಕಳೆದ ವಾರ ಒಳ್ಳೆಯ ರೇಟಿಗೆ ಮಾರಾಟವಾಗಿದೆಯಂತೆ. ಚಿತ್ರದ ಹಕ್ಕುಗಳನ್ನು ಪಡೆದಿರುವ ವಿಎಲ್‌ ಪ್ರೊಡಕ್ಷನ್‌ನವರು ಸದ್ಯದಲ್ಲೇ ದೊಡ್ಡ ತಾರಾಗಣದೊಂದಿಗೆ ಈ ಚಿತ್ರ ನಿರ್ಮಿಸಲಿದ್ದಾರೆ ಮತ್ತು ಈ ವರ್ಷದ ಕೊನೆಯ ಹೊತ್ತಿಗೆ ಚಿತ್ರ ಬಿಡುಗಡೆಯಾಗುವ ಸಾಧ್ಯತೆ ಇದೆ ಎನ್ನುತ್ತಾರೆ ಪುಷ್ಕರ್‌ ಮಲ್ಲಿಕಾರ್ಜುನಯ್ಯ.

ಅಲ್ಲಿಗೆ ರಕ್ಷಿತ್‌ ಮತ್ತು ಪುಷ್ಕರ್‌ ಜೊತೆಯಾಟದ ಎರಡು ಚಿತ್ರಗಳು ಹಿಂದೆ ರೀಮೇಕ್‌ ಆಗುತ್ತಿವೆ ಎನ್ನುವುದು ವಿಶೇಷ. ಅಂದಹಾಗೆ, “ಅವನೇ ಶ್ರೀಮನ್ನಾರಾಯಣ’ ಚಿತ್ರದ ಎರಡನೆಯ ಹಂತದ ಚಿತ್ರೀಕರಣ ಇಂದಿನಿಂದ ಪ್ರಾರಂಭವಾಗಲಿದ್ದು, ಅದಕ್ಕಾಗಿಯೇ ಕಂಠೀರವ ಸ್ಟುಡಿಯೋದಲ್ಲಿ 1980ರ ದಶಕದ ಒಂದು ಪಬ್‌ ಸೆಟ್‌ ನಿರ್ಮಿಸಲಾಗಿದೆ. ಈ ಸೆಟ್‌ನಲ್ಲಿ ಒಂದು ಹಾಡು ಮತ್ತು ಫೈಟ್‌ ಚಿತ್ರೀಕರಣ ನಡೆಯಲಿದೆಯಂತೆ.

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.