ಉಪ್ಪಿ ಮತ್ತೆ ಬರ್ತಾರೆ


Team Udayavani, Apr 17, 2018, 11:04 AM IST

upendra_17-4-18.jpg

ಎಲ್ಲಾ ಅಂದುಕೊಂಡಂತೆ ಆಗಿದ್ದರೆ, ಉಪೇಂದ್ರ ಇಷ್ಟರಲ್ಲಿ ಪ್ರಜಾಕೀಯ ಮತ್ತು ಚುನಾವಣೆಗಳಲ್ಲಿ ಬಿಝಿಯಾಗಿರಬೇಕಿತ್ತು. ಆದರೆ, ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷದಿಂದ ಹೊರಬಂದ ಕಾರಣ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಕಷ್ಟವಾಗಿದೆ. ಸದ್ಯಕ್ಕೆ ತಮ್ಮ ಹೊಸ ಪಕ್ಷವನ್ನು ಚುನಾವಣಾ ಆಯೋಗದಲ್ಲಿ ದಾಖಲಿಸುವ ಪ್ರಯತ್ನದಲ್ಲಿರುವ ಉಪೇಂದ್ರ, ಮುಂದಿನ ತಿಂಗಳು ಮತ್ತೆ ಚಿತ್ರೀಕರಣದಲ್ಲಿ ಭಾಗವಹಿಸುತ್ತಾರೆ ಎಂಬ ಸುದ್ದಿ ಇದೆ.

ಹೌದು, ರಾಜಕೀಯಕ್ಕೆ ಧುಮುಕುವುದಕ್ಕೆ ಮುನ್ನ ಉಪೇಂದ್ರ, “ಹೋಮ್‌ ಮಿನಿಸ್ಟರ್‌’ ಎಂಬ ಚಿತ್ರವನ್ನು ಒಪ್ಪಿಕೊಂಡಿದ್ದರು. ಆ ಚಿತ್ರದ ಚಿತ್ರೀಕರಣ ಬಹುತೇಕ ಮುಗಿದಿತ್ತು. ಸಾಧ್ಯವಾದರೆ, ಅದೊಂದು ಚಿತ್ರ ಮುಗಿಸಿ ಚುನಾವಣೆಗೆ ಸ್ಪರ್ಧಿಸಬೇಕು ಎಂಬ ಯೋಚನೆಯಲ್ಲಿದ್ದ ಅವರು, ಈಗ ಚುನಾವಣೆಗಳು ಮುಗಿದ ನಂತರ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.

ಅದರಂತೆ ಅವರು ಮುಂದಿನ ತಿಂಗಳು, ಚುನಾವಣೆಗಳು ಮುಗಿದ ನಂತರ, “ಹೋಮ್‌ ಮಿನಿಸ್ಟರ್‌’ನ ಚಿತ್ರೀಕರಣದಲ್ಲಿ ತೊಡಗಿಸಿಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅದಾದ ನಂತರ ಅವರು ಮತ್ತೆ ಚಿತ್ರರಂಗದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲಿದ್ದಾರೆ, ಒಂದಿಷ್ಟು ಹೊಸ ಚಿತ್ರಗಳಲ್ಲಿ ನಟಿಸುತ್ತಾರೆ ಎಂಬ ಸುದ್ದಿಯೂ ಇದೆ.

ಇದಕ್ಕೆ ಪೂರಕವಾಗಿ ಉಪೇಂದ್ರ, ಈ ಹಿಂದೆಯೇ, “ರಾಜಕೀಯದಲ್ಲಿ ಗೆಲ್ಲುತ್ತೀನಿ ಎಂಬ ನಂಬಿಕೆ ಇದೆ. ಗೆದ್ದರೆ ಸಂತೋಷ. ಇಲ್ಲ ಸಾಯೋವರೆಗೂ ಪ್ರಯತ್ನ ಮಾಡುತ್ತಲೇ ಇರುತ್ತೀನಿ. ಪ್ರತಿ ಚುನಾವಣೆಯ ಆರು ತಿಂಗಳ ಮುಂಚೆ ಬಂದು ಪ್ರಯತ್ನ ಮಾಡುತ್ತಲೇ ಇರುತ್ತೀನಿ’ ಎಂದು ಹೇಳಿಕೊಂಡಿದ್ದರು. “ಹೋಮ್‌ ಮಿನಿಸ್ಟರ್‌’ ಜೊತೆಗೆ ಉಪೇಂದ್ರ ಇನ್ನೊಂದಿಷ್ಟು ಚಿತ್ರಗಳಲ್ಲಿ ನಟಿಸುವ ಸಾಧ್ಯತೆ ಇದೆ.

ರಾಜಕೀಯಕ್ಕೆ ಎಂಟ್ರಿ ಕೊಡುವ ಮುನ್ನ ಅವರು ಗುರುದತ್‌ ನಿರ್ದೇಶನದ “ನಾಗಾರ್ಜುನ’ ಚಿತ್ರವನ್ನು ಒಪ್ಪಿಕೊಂಡಿದ್ದರು. ಮೈಸೂರಿನಲ್ಲಿ ಈ ಚಿತ್ರದ ಮುಹೂರ್ತವೂ ಆಗಿತ್ತು. ಇದಲ್ಲದೆ ಉಪೇಂದ್ರ ಅವರು ಮತ್ತೆ ಚಿತ್ರ ನಿರ್ದೇಶನ ಮಾಡುವ ಸಾಧ್ಯತೆ ಇದೆ ಮತ್ತು ಅವರ ನಿರ್ದೇಶನದ ಹೊಸ ಚಿತ್ರ ಅವರ ಹುಟ್ಟುಹಬ್ಬದಂದು ಪ್ರಾರಂಭವಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಟಾಪ್ ನ್ಯೂಸ್

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.