ಅಧ್ಯಕ್ಷ ಇನ್ ಅಮೆರಿಕ


Team Udayavani, May 1, 2018, 10:58 AM IST

sharan.jpg

ಯೋಗಾನಂದ ಮುದ್ದಾನ್‌ ಇದೇ ಮೊದಲ ಸಲ ಸಿನಿಮಾವೊಂದನ್ನು ನಿರ್ದೇಶಿಸುತ್ತಿದ್ದಾರೆ. ಅವರ ಚೊಚ್ಚಲ ನಿರ್ದೇಶನದ ಚಿತ್ರಕ್ಕೆ ಶರಣ್‌ ಹೀರೋ ಎಂದು ಈ ಹಿಂದೆ ಇದೇ “ಬಾಲ್ಕನಿ’ಯಲ್ಲಿ ಹೇಳಲಾಗಿತ್ತು. ಆದರೆ, ಆ ಚಿತ್ರಕ್ಕೆ ಆಗ ನಾಮಕರಣ ಮಾಡಿರಲಿಲ್ಲ. ಈಗ ಅದಕ್ಕೊಂದು ಶೀರ್ಷಿಕೆ ಪಕ್ಕಾ ಮಾಡಿದ್ದಾರೆ ಯೋಗಾನಂದ್‌ ಮುದ್ದಾನ್‌. ಮಲಯಾಳಂನ “ಟೂ ಸ್ಟೇಟ್ಸ್‌’ ಚಿತ್ರದಿಂದ ಸ್ಫೂರ್ತಿ ಪಡೆದಿರುವ ಈ ಚಿತ್ರಕ್ಕೆ “ಅಧ್ಯಕ್ಷ ಇನ್‌ ಅಮೆರಿಕ’ ಎಂದು ನಾಮಕರಣ ಮಾಡಲಾಗಿದೆ.

ಈಗಾಗಲೇ ಶರಣ್‌, “ಅಧ್ಯಕ್ಷ’ ಎಂಬ ಚಿತ್ರದಲ್ಲಿ ನಟಿಸಿದ್ದರು. ಈಗ ಆ ಅಧ್ಯಕ್ಷ ಅಮೆರಿಕಕ್ಕೆ ಹೋಗಿ ಏನೆಲ್ಲಾ ಮಾಡುತ್ತಾರೆಂಬುದನ್ನು ನೋಡಬೆಕು. ಹಾಗಂತ, ಆ “ಅಧ್ಯಕ್ಷ’ ಚಿತ್ರಕ್ಕೂ ಈ “ಅಧ್ಯಕ್ಷ ಇನ್‌ ಅಮೆರಿಕ’ ಚಿತ್ರಕ್ಕೂ ಸಂಬಂಧವಿಲ್ಲ. ಇನ್ನು, ಶರಣ್‌ಗೆ ರಾಗಿಣಿ ನಾಯಕಿ ಎಂಬುದು ವಿಶೇಷ. ಈ ಹಿಂದೆ ರಾಗಿಣಿ ಅವರು ಶರಣ್‌ ಅಭಿನಯದ “ವಿಕ್ಟರಿ’ ಚಿತ್ರದಲ್ಲಿ ಹಾಡೊಂದಕ್ಕೆ ಹೆಜ್ಜೆ ಹಾಕಿದ್ದರು. ಈಗ ಶರಣ್‌ಗೆ ನಾಯಕಿಯಾಗಿದ್ದಾರೆ. ಇದು ಮಲಯಾಳಂನ “ಟು ಕಂಟ್ರೀಸ್‌’ ಚಿತ್ರದ ಸ್ಫೂರ್ತಿ ಎನ್ನಬಹುದು.

ಆದರೆ, ಕನ್ನಡಕ್ಕೆ ಬಹಳಷ್ಟು ಬದಲಾವಣೆ ಮಾಡಿಕೊಂಡು ಮಾಡಿದ್ದಾರಂತೆ ಯೋಗಾನಂದ್‌. ಇದೊಂದು ಫ್ಯಾಮಿಲಿ ಡ್ರಾಮ ಎಂಬುದು ಯೋಗಾನಂದ್‌ ಮುದ್ದಾನ್‌ ಮಾತು. ಪೀಪಲ್‌ ಮೀಡಿಯ ಟೆಕ್‌ ಎಂಬ ಸಾಫ್ಟ್ವೇರ್‌ ಕಂಪೆನಿಯ ವಿಶ್ವ ಹಾಗೂ ವಿವೇಕ್‌ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಈಗಾಗಲೇ ತೆಲುಗಿನಲ್ಲಿ “ಅಲಾ ಮೊದಲಯಂದಿ’ ಮತ್ತು “ಕೇಶವ’ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಮೇ 15 ರಿಂದ ವಿದೇಶದಲ್ಲೇ ಸಂಪೂರ್ಣ ಚಿತ್ರೀಕರಣ ನಡೆಯಲಿದೆ.

ಸುಮಾರು 35 ದಿನಗಳ ಕಾಲ ಅಲ್ಲಿನ ಸುಂದರ ತಾಣಗಳಲ್ಲಿ ಚಿತ್ರೀಕರಣ ಮಾಡಲಾಗುವುದು ಎಂಬುದು ನಿರ್ದೇಶಕರ ಮಾತು. ಯೋಗಾನಂದ್‌ ಮುದ್ದಾನ್‌ “ಬಿರುಗಾಳಿ’ ಮೂಲಕ ಸಂಭಾಷಣೆಗಾರರಾಗಿ ಗುರುತಿಸಿಕೊಂಡವರು. ಅದಕ್ಕೂ ಮುನ್ನ “ಆಪ್ತಮಿತ್ರ’ ಚಿತ್ರದ ಕೆಲ ಸೀನ್‌ಗಳಿಗೂ ಸಂಭಾಷಣೆ ಬರೆದಿದ್ದರು. ಆ ಬಳಿಕ “ತುಘಲಕ್‌’, “ಚಾರುಲತ’, “ಚಿಂಗಾರಿ’, “ವಜ್ರಕಾಯ’, “ಭಜರಂಗಿ’, “ಮುಕುಂದ ಮುರಾರಿ’, “ಚೌಕ’, “ಕಲಾಕಾರ್‌’, “ಟೈಗರ್‌’. “ವಿಐಪಿ’ ಚಿತ್ರಕ್ಕೂ ಸಂಭಾಷಣೆ ಬರೆದಿದ್ದಾರೆ. ಯೋಗಾನಂದ್‌ಗೆ ಮೊದಲ ನಿರ್ದೇಶನ ಮಾಡಿದರೆ, ಅದು ಶರಣ್‌ಗೆ ಮಾಡಬೇಕು ಅಂತ ನಿರ್ಧರಿಸಿದ್ದರಂತೆ. ಅದರಂತೆ, “ಅಧ್ಯಕ್ಷ ಇನ್‌ ಅಮೆರಿಕ’ ಚಿತ್ರ ಮಾಡುತ್ತಿದ್ದಾರೆ.

ಟಾಪ್ ನ್ಯೂಸ್

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Lok Sabha Election; ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

marigold

Marigold; ನಿರ್ಮಾಪಕರ ಮೊಗದಲ್ಲಿ ಮಾರಿಗೋಲ್ಡ್‌ ನಗು

Sapthami Gowda

Sapthami Gowda: ‘ಕಾಂತಾರ-1’ ಚಿತ್ರದಲ್ಲಿ ನಟಿಸುತ್ತಾರಾ ಸಪ್ತಮಿ ; ನಟಿ ಹೇಳಿದ್ದೇನು?

Film Producer: ಸ್ಯಾಂಡಲ್‌ ವುಡ್‌ ನಿರ್ಮಾಪಕ ಸೌಂದರ್ಯ ಜಗದೀಶ್‌ ಆತ್ಮಹತ್ಯೆ

Film Producer: ಸ್ಯಾಂಡಲ್‌ ವುಡ್‌ ನಿರ್ಮಾಪಕ ಸೌಂದರ್ಯ ಜಗದೀಶ್‌ ಆತ್ಮಹತ್ಯೆ

eltu mutta kannada movie

Eltu Mutta Movie; ಸಾವಿನ ಮನೆಯಲ್ಲಿ ಡೋಲು ಬಡಿಯುವವರ ಕಥೆ

karimani malika kannada movie

Kannada Cinema; ‘ಕರಿಮಣಿ ಮಾಲೀಕ’ನ ನಂಬಿ ಬಂದವರು

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.