ಸೆಕೆಂಡ್‌ ಹಾಫ್ ಹಾಡುಗಳು


Team Udayavani, May 3, 2018, 1:30 PM IST

2nd-Half-_(149).jpg

ಮೇ 1 ಕಾರ್ಮಿಕರ ದಿನ. ಕಾರ್ಮಿಕರು ಹಾಗೂ ರೈತರೊಬ್ಬರಿಂದ ಚಿತ್ರದ ಆಡಿಯೋ ಸಿಡಿ ಬಿಡುಗಡೆ ಮಾಡಿಸಬೇಕೆಂಬುದು “ಸೆಕೆಂಡ್‌ ಹಾಫ್’ ಚಿತ್ರದ ನಿರ್ಮಾಪಕ ನಾಗೇಶ್‌ ಅವರ ಆಸೆಯಾಗಿತ್ತಂತೆ. ಹಾಗಾಗಿ, ಕಲಾವಿದರ ಸಂಘದ ಸೆಕ್ಯುರಿಟಿ ವಿಭಾಗದವರು ಹಾಗೂ ರೈತರೊಬ್ಬರಿಂದ ಚಿತ್ರದ ಆಡಿಯೋ ಸಿಡಿ ಬಿಡುಗಡೆ ಮಾಡುವ ಮೂಲಕ ಪ್ರಚಾರ ಕೆಲಸಕ್ಕೆ ಚಾಲನೆ ಕೊಟ್ಟಿತು “ಸೆಕೆಂಡ್‌ ಹಾಫ್’ ಚಿತ್ರತಂಡ. ಇದೇ ಮೊದಲ ಸಲ ಹಾಡುಗಳನ್ನು ಬಿಡುಗಡೆ ಮಾಡಿದ ಖುಷಿ ಆ ಕಾರ್ಮಿಕರದ್ದು.
 
ಪ್ರಿಯಾಂಕ ಉಪೇಂದ್ರ ಅಭಿನಯಿಸಿರುವ ಈ ಚಿತ್ರ ಈಗ ಬಿಡುಗಡೆಗೆ ಸಿದ್ಧವಾಗಿದೆ. ಇದೇ ಮೊದಲ ಸಲ ಪ್ರಿಯಾಂಕ ಉಪೇಂದ್ರ ಅವರು ಪೊಲೀಸ್‌ ಪೇದೆಯಾಗಿ ನಟಿಸಿದ್ದಾರೆ. ಈ ಚಿತ್ರದ ಇನ್ನೂ ಒಂದು ವಿಶೇಷವೆಂದರೆ, ಉಪೇಂದ್ರ ಅವರ ಅಣ್ಣನ ಮಗ ನಿರಂಜನ್‌ ಚಿತ್ರದಲ್ಲಿ ನಟಿಸಿದ್ದಾರೆ. ಅಲ್ಲಿಗೆ ಚಿಕ್ಕಮ್ಮನೊಂದಿಗೆ ನಟಿಸಿದ ಖುಷಿ ನಿರಂಜನ್‌ ಅವರದು. ಇದಷ್ಟೇ ಅಲ್ಲ, ಉಪ್ಪಿ ಅವರು ನಿರಂಜನ್‌ ಹೆಜ್ಜೆ ಹಾಕಿರುವ ಹಾಡಿಗೆ ಧ್ವನಿಯಾಗಿದ್ದಾರೆ ಕೂಡ. ಅಲ್ಲಿಗೆ, ಉಪೇಂದ್ರ ಕುಟುಂಬದ ಮೂವರು “ಸೆಕೆಂಡ್‌ ಹಾಫ್’ ಚಿತ್ರದಲ್ಲಿ ತೊಡಗಿಸಿಕೊಂಡಂತಾಗಿದೆ.

ಅಂದಹಾಗೆ, ಇದೊಂದು ಕ್ರೈಮ್‌ ಥ್ರಿಲ್ಲರ್‌ ಚಿತ್ರ. ಯೋಗಿ ದೇವಗಂಗೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿರುವ ಮೂರು ಗೀತೆಗಳಿಗೆ ಯೋಗರಾಜ್‌ ಭಟ್‌ ಮತ್ತು ನಿರ್ದೇಶಕರ ಸಾಹಿತ್ಯವಿದೆ. ಉಪೇಂದ್ರ ಹಾಡೊಂದನ್ನು ಹಾಡಿದರೆ, ಪ್ರಿಯಾಂಕ ಉಪೇಂದ್ರ ಅವರ ಪರಿಚಯದ ಗೀತೆಗೆ ವಾರಿಜಾಶ್ರೀ ಹಾಡಿದ್ದಾರೆ. ಬಹುತೇಕ ನೈಜ ಘಟನೆಗಳು ಚಿತ್ರದ ಹೈಲೆಟ್‌ ಎಂಬುದು ನಿರ್ದೇಶಕರ ಮಾತು. ಇಲ್ಲಿ ಒಂದು ಅಪಘಾತ ಅಥವಾ ಅಪರಾಧಗಳು ನಡೆದಾಗ, ಅಲ್ಲಿ ಪೊಲೀಸ್‌ ಪಾತ್ರ ಮಹತ್ವ ವಹಿಸುತ್ತದೆ. ಅದೇ ನಿಟ್ಟಿನಲ್ಲಿ ಇಲ್ಲಿ ಕಥೆ ಸಾಗಲಿದೆ. ಪೊಲೀಸ್‌ ಪೇದೆಯೊಬ್ಬರ ಚಿತ್ರಣವನ್ನು ಇಲ್ಲಿ ಬಿಡಿಸಿಡಲಾಗುತ್ತದೆ ಎಂಬುದು ಚಿತ್ರತಂಡದ ಮಾತು.

ಹಲವಾರು ಚಿತ್ರಗಳಲ್ಲಿ ನಟಿಸಿದ ಪ್ರಿಯಾಂಕ ಉಪೇಂದ್ರ ಅವರಿಗೆ ಇಲ್ಲಿ ಮೊದಲ ಸಲ ಪೊಲೀಸ್‌ ಪೇದೆ ಪಾತ್ರ ನಿರ್ವಹಿಸಿರುವುದು ಖುಷಿ ಕೊಟ್ಟಿದೆಯಂತೆ. ಆ ಪಾತ್ರಕ್ಕೊಂದು ಗೌರವ ಇದೆ. ಸಾಕಷ್ಟು ಪೇದೆಗಳ ಹಾವ-ಭಾವ ನೋಡಿಕೊಂಡು ಆ ಪಾತ್ರ ಮಾಡಿದ್ದಾಗಿ ಹೇಳುತ್ತಾರೆ ಪ್ರಿಯಾಂಕ.

ನಾಯಕ ನಿರಂಜನ್‌ ಹಾಗು ನಾಯಕಿ ಸುರಭಿ ತಮ್ಮ ಪಾತ್ರ ಮತ್ತು ಚಿತ್ರ ಮೂಡಿಬಂದಿರುವ ಕುರಿತು ಮಾತು ಹಂಚಿಕೊಂಡರು.  ಗಾಯಕ ಕಮ್‌ ಸಂಗೀತ ನಿರ್ದೇಶಕ ಚೇತನ್‌ ಸೋಸ್ಕ ಹಾಡುಗಳ ಬಗ್ಗೆ ಹೇಳಿಕೊಂಡರು. ಅಂದು ಪ್ರಥಮ್‌ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು.

ಟಾಪ್ ನ್ಯೂಸ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.