ಕನ್ನಡಕ್ಕೆ ಮತ್ತೆ ನಾನಾ


Team Udayavani, May 8, 2018, 11:14 AM IST

Manoranjan-(2)-copy.jpg

ಬಾಲಿವುಡ್‌ ನಟ ನಾನಾ ಪಟೇಕರ್‌, ಮನೋರಂಜನ್‌ ಅಭಿನಯದ “ಚಿಲ್ಲಂ’ ಚಿತ್ರದಲ್ಲಿ ನಟಿಸುವ ಸಾಧ್ಯತೆ ಇದೆ ಎಂಬ ಮಾತು ಕಳೆದ ಕೆಲವು ದಿನಗಳಿಂದ ಕೇಳಿ ಬರುತ್ತಲೇ ಇತ್ತು. ಅದೀಗ ನಿಜವಾಗಿದೆ. “ಚಿಲ್ಲಂ’ ಚಿತ್ರದಲ್ಲಿ ನಾನಾ ಪಟೇಕರ್‌ ನಟಿಸುವುದಕ್ಕೆ ಗ್ರೀನ್‌ ಸಿಗ್ನಲ್‌ ಕೊಟ್ಟಿದ್ದು, ಜೂನ್‌ನಿಂದ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲಿದ್ದಾರೆ.

ಸುಮಾರು ಎರಡೂವರೆ ತಿಂಗಳ ಹಿಂದೆಯೇ ನಾನಾ ಪಟೇಕರ್‌ ಮತ್ತು ಸಂಜಯ್‌ ದತ್‌ ಅವರನ್ನು ಸಂಪರ್ಕಿಸಲಾಗಿತ್ತು ಎನ್ನುತ್ತಾರೆ ಚಿತ್ರದ ನಿರ್ದೇಶಕಿ ಚಂದ್ರಕಲಾ. “ಇದೊಂದು ವಿಭಿನ್ನ ಪಾತ್ರ. ದೊಡ್ಡ ನಟರೇ ಬೇಕಿತ್ತು. ಅದೇ ಕಾರಣಕ್ಕೆ ಸಂಜಯ್‌ ದತ್‌ ಮತ್ತು ನಾನಾ ಪಟೇಕರ್‌ ಅವರನ್ನು ಸಂಪರ್ಕಿಸಿದ್ದೆವು. ನಾನಾ ಪಟೇಕರ್‌ ಕಥೆ ಕೇಳಿ ಒಪ್ಪಿಕೊಂಡಿದ್ದರು. ಈಗ ಡೇಟ್ಸ್‌ ಕೊಟ್ಟಿದ್ದಾರೆ.

ಜೂನ್‌ನಲ್ಲಿ ಅವರ ಭಾಗದ ಚಿತ್ರೀಕರಣ ನಡೆಯಲಿದೆ. ಇನ್ನು ನಾಯಕನ ಅಮ್ಮನ ಪಾತ್ರದಲ್ಲಿ ಸರಿತಾ ನಟಿಸುವುದಕ್ಕೆ ಒಪ್ಪಿಕೊಂಡಿದ್ದಾರೆ. ಜುಲೈನಲ್ಲಿ ಅವರ ಡೇಟ್ಸ್‌ ಸಿಗಲಿದ್ದು, ಆಗ ಚಿತ್ರೀಕರಣ ಮಾಡುತ್ತೇವೆ’ ಎನ್ನುತ್ತಾರೆ ಚಂದ್ರಕಲಾ. “ಚಿಲ್ಲಂ’ ಚಿತ್ರದಲ್ಲಿ ಮನೋರಂಜನ್‌ ಮೊದಲ ಬಾರಿಗೆ ಡ್ರಗ್‌ ಡೀಲರ್‌ ಪಾತ್ರ ಮಾಡುತ್ತಿದ್ದಾರಂತೆ. “ಚಿತ್ರದಲ್ಲಿ ಮನು ಅವರದ್ದು ಗಾಂಜ ಡೀಲರ್‌ ಪಾತ್ರ.

ಹಣಕ್ಕಾಗಿ ಕೆಟ್ಟ ದಾರಿ ಹಿಡಿಯುವ ಆ ಪಾತ್ರಕ್ಕೆ, ಒಂದು ಹಂತದಲ್ಲಿ ತನ್ನ ತಪ್ಪಿನ ಅರಿವಾಗುತ್ತದೆ. ಆ ನಂತರ ಏನಾಗುತ್ತದೆ ಎಂಬುದು ಕಥೆ. ಇಲ್ಲಿ ಮನು ಅವರ ಲುಕ್‌ ಸಹ ಬದಲಾಗುತ್ತದೆ. ಮನು ಅವರ ಫ‌ಸ್ಟ್‌ ಲುಕ್‌, ರವಿಚಂದ್ರನ್‌ ಅವರ ಹುಟ್ಟುಹಬ್ಬದಂದು ಬಿಡುಗಡೆ ಮಾಡುವುದಕ್ಕೆ ಯೋಚಿಸುತ್ತಿದ್ದೇವೆ. ಅದರಂತೆ ಮೇ 30ರಂದು ಮನು ಅವರ ಫ‌ಸ್ಟ್‌ ಲುಕ್‌ ಬಿಡುಗಡೆಯಾಗಲಿದೆ.

ಇನ್ನು ಚಿತ್ರದಲ್ಲಿ ರಾಘವೇಂದ್ರ ರಾಜಕುಮಾರ್‌ ಸಹ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೇ ಮೊದಲ ಬಾರಿಗೆ ಅವರು ನೆಗೆಟಿವ್‌ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ವಿಲನ್‌ ಎಂದರೆ ಹೊಡೆದಾಟ, ಬಡಿದಾಟ ಯಾವುದೂ ಇರುವುದಿಲ್ಲ. ಮನಸ್ಸಿನಲ್ಲೇ ಸ್ಕೆಚ್‌ ಹಾಕುವ ವಿಭಿನ್ನ ಪಾತ್ರ ಅವರದ್ದು. ಅವರ ಫೋಟೋ ಶೂಟ್‌ ಸದ್ಯದಲ್ಲೇ ನಡೆಯಲಿದೆ’ ಎನ್ನುತ್ತಾರೆ ಚಂದ್ರಕಲಾ.

“ಚಿಲ್ಲಂ’ನಲ್ಲಿ ಮನುಗೆ ನಾಯಕಿಯಾಗಿ “ಗಣಪ’ ಖ್ಯಾತಿಯ ಪ್ರಿಯಾಂಕಾ ತಿಮ್ಮೇಶ್‌ ನಟಿಸುತ್ತಿದ್ದು, ಮನು ಸ್ನೇಹಿತರಾಗಿ “ಬಿಗ್‌ ಬಾಸ್‌’ ದಿವಾಕರ್‌, ರಾಘವ್‌ ನಾಗ್‌, ಭರತ್‌ (ನಿರ್ದೇಶಕಿ ಚಂದ್ರಕಲಾ ಅವರ ಮಗ) ಮತ್ತು ಸಂದೀಪ್‌ ನಟಿಸುತ್ತಿದ್ದಾರೆ.

“ಮಫ್ತಿ’ ಚಿತ್ರಕ್ಕೆ ಛಾಯಾಗ್ರಹಣ ಮಾಡಿರುವ ನವೀನ್‌ ಕುಮಾರ್‌ ಇಲ್ಲಿ ಛಾಯಾಗ್ರಹಣ ಮಾಡಿದರೆ, ನೊಬಿನ್‌ ಪೌಲ್‌ ಸಂಗೀತ ಮತ್ತು ಹಿನ್ನೆಲೆ ಸಂಗೀತ ಸಂಯೋಜಿಸುತ್ತಿದ್ದಾರೆ. ಬೆಂಗಳೂರು ಅಲ್ಲದೆ ಗೋವಾ, ಕೊಲ್ಕತ್ತಾ, ಬಿಜಾಪುರ ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ. ಗೋಪಾಲ್‌ ಅವರು ನಿರ್ಮಿಸುತ್ತಿರುವ ಈ ಚಿತ್ರದ ಮುಹೂರ್ತ ಮೇ 16ರಂದು ಬೆಂಗಳೂರಿನಲ್ಲೇ ಸರಳವಾಗಿ ನಡೆಯಲಿದೆ.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.