ಕುಸ್ತಿ ಆಡೋಕೆ ಅಪ್ಪ-ಮಗ ರೆಡಿ!


Team Udayavani, May 9, 2018, 9:00 PM IST

Samrat-Duniya-vijay.jpg

ಚುನಾವಣೆ ಅಖಾಡದಲ್ಲಿ ಅಪ್ಪ-ಮಕ್ಕಳ ಕಾರುಬಾರು ಜೋರಿರುವಾಗಲೇ, ಇನ್ನೊಂದು ಕಡೆ ಚಿತ್ರರಂಗದ ಅಖಾಡದಲ್ಲಿ ಅಪ್ಪ-ಮಗನ ಕಾರುಬಾರು ಶುರುವಾಗಿದೆ. “ದುನಿಯಾ’ ವಿಜಯ್‌ ಮತ್ತು ಅವರ ಪುತ್ರ ಸಾಮ್ರಾಟ್‌ “ಕುಸ್ತಿ’ ಚಿತ್ರದಲ್ಲಿ ನಟಿಸುತ್ತಿದ್ದಾರೆ ಎಂಬ ಸುದ್ದಿಯನ್ನು ಈ ಹಿಂದೆ ಇದೇ “ಬಾಲ್ಕನಿ’ಯಲ್ಲಿ ಹೇಳಲಾಗಿತ್ತು. ಈಗಾಗಲೇ ಸಾಮ್ರಾಟ್‌, ಕುಸ್ತಿ ಪಟುವಾಗಿ ತಯಾರಿ ಪಡೆಯುತ್ತಿರುವ ಫೋಟೋವೊಂದನ್ನೂ ಕೂಡ ಪ್ರಕಟಿಸಲಾಗಿತ್ತು.

ಈಗ ಹೊಸ ಸುದ್ದಿಯೆಂದರೆ, “ಕುಸ್ತಿ’ಗಾಗಿ ಅಪ್ಪ-ಮಗ ಇಬ್ಬರೂ ಸಜ್ಜಾಗಿದ್ದಾರೆ. ದಿನವೊಂದಕ್ಕೆ ಇಬ್ಬರೂ ನಾಲ್ಕೈದು ಗಂಟೆಗಳ ಕಾಲ ಕಸರತ್ತು ನಡೆಸುತ್ತಿದ್ದಾರೆ. “ದುನಿಯಾ’ ವಿಜಯ್‌, ದೇಹವನ್ನು ಹುರಿಗೊಳಿಸುವಲ್ಲಿ ಯಾವತ್ತೂ ಹಿಂದೆ ಬಿದ್ದಿಲ್ಲ. ಅವರಂತೆ ಅವರ ಪುತ್ರ ಸಾಮ್ರಾಟ್‌ ಕೂಡ ಸಿಕ್ಕಾಪಟ್ಟೆ ವರ್ಕೌಟ್‌ ಮಾಡುತ್ತಿದ್ದಾನೆ. “ಕುಸ್ತಿ’ ಚಿತ್ರ ನೋಡಿದವರಿಗೆ, ಅಪ್ಪ-ಮಗನ ಸಾಮರ್ಥ್ಯ ಎಂಥದ್ದು ಎಂಬುದು ಗೊತ್ತಾಗಬೇಕಾದರೆ,

ಸಿಕ್ಕಾಪಟ್ಟೆ ಕಸರತ್ತು ನಡೆಸಬೇಕು ಎಂಬ ಕಾರಣಕ್ಕೆ, ವಿಜಯ್‌ ದಿನವೊಂದಕ್ಕೆ ಐದು ತಾಸು ವರ್ಕೌಟ್‌ ಮಾಡಿದರೆ, ಸಾಮ್ರಾಟ್‌ ಕೂಡ ಅಪ್ಪನಿಗಿಂತ ನಾನೇನು ಕಮ್ಮಿ ಎಂಬಂತೆ ದಿನಕ್ಕೆ ನಾಲ್ಕು ತಾಸು ವರ್ಕೌಟ್‌ ಮಾಡುತ್ತಿದ್ದಾನೆ. “ಕುಸ್ತಿ’ಗೋಸ್ಕರ ಪಕ್ಕಾ ಪೈಲ್ವಾನ್‌ಗಳಂತೆ ರೆಡಿಯಾಗಬೇಕೆಂಬುದು ವಿಜಯ್‌ ಆಸೆ. ಅದಕ್ಕಾಗಿಯೇ, ಯಾವ ಚಿತ್ರವನ್ನೂ ಒಪ್ಪಿಕೊಳ್ಳದೆ, ಬರೀ “ಕುಸ್ತಿ’ಗಾಗಿಯೇ ಬೆಳಗ್ಗೆ, ಸಂಜೆ ತಯಾರಿ ನಡೆಸುತ್ತಿದ್ದಾರೆ.

ಚಿತ್ರದಲ್ಲಿ ರಿಯಲ್‌ “ಕುಸ್ತಿ’ ಇರತ್ತದೆ. ಅದಕ್ಕೆ ಪಕ್ಕಾ ಕುಸ್ತಿಪಟುವಿನಂತೆಯೇ ಅಣಿಯಾಗಬೇಕು. ಹಾಗಾಗಿ, ಸಾಮ್ರಾಟ್‌ಗೆ ಈಗಾಗಲೇ ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಕುಸ್ತಿಪಟುಗಳು ತರಬೇತಿ ಕೊಡುತ್ತಿದ್ದಾರಂತೆ. ವಿಜಯ್‌ ಅವರೂ ಕೂಡ “ಕುಸ್ತಿ’ಪಟ್ಟುಗಳನ್ನು ಹೇಗೆಲ್ಲಾ ಹಿಡಿಯಬೇಕೆಂಬ ಬಗ್ಗೆಯೂ ಗಂಭೀರವಾಗಿ ಅಭ್ಯಾಸ ಮಾಡುತ್ತಿದ್ದಾರಂತೆ. ಒಟ್ಟು ಮೂವರು ಪ್ರಸಿದ್ಧ ಕುಸ್ತಿಪಟುಗಳಿಂದ ಅಪ್ಪ-ಮಗ ತರಬೇತಿ ಪಡೆಯುತ್ತಿದ್ದಾರೆ.

ಮಗನ ಶಿಸ್ತು, ಶ್ರದ್ಧೆ ಬಗ್ಗೆ ಮಾತನಾಡುವ ದುನಿಯಾ ವಿಜಯ್‌, “ಅವನಲ್ಲಿ ಕಲೆ ತುಂಬಿಕೊಂಡಿದೆ. ಹೇಳಿದ್ದನ್ನು ಶ್ರದ್ಧೆಯಿಂದ ಮಾಡುತ್ತಾನೆ. ಹುಮ್ಮಸ್ಸಿದೆ, ಉತ್ಸಾಹವೂ ಇದೆ. ಅವನ ಶ್ರದ್ಧೆ ಗಮನಿಸುತ್ತಿದ್ದರೆ, ಮುಂದೊಂದು ದಿನ, ನನಗೇ ಕಾಂಪಿಟೇಷನ್‌ ಕೊಡ್ತಾನೇನೋ ಎನಿಸುತ್ತದೆ. ಅಷ್ಟರಮಟ್ಟಿಗೆ ಶ್ರದ್ಧೆಯಿಂದ ಪಾತ್ರಕ್ಕೆ ತಯಾರಿ ಮಾಡಿಕೊಳ್ಳುತ್ತಿದ್ದಾನೆ’ ಎನ್ನುತ್ತಾರೆ ಅವರು.

ಬೇಸಿಗೆ ರಜೆಯಲ್ಲಿ ಸಾಮ್ರಾಟ್‌ಗೆ ಎಲ್ಲಿಗೂ ಕಳುಹಿಸಿಲ್ಲವಂತೆ. “ರಜೆಯ ಮಜ ಅನುಭವಿಸಲು ಬಿಟ್ಟಿಲ್ಲ. “ಕುಸ್ತಿ’ ಪಾತ್ರಕ್ಕೆ ಏನೆಲ್ಲಾ ಬೇಕೋ ಅದರ ತಯಾರಿ ಮಾಡಿಕೋ ಅಂತ, ದಿನ ನಿತ್ಯ ವರ್ಕೌಟ್‌ ಬಿಟ್ಟರೆ, ಕುಸ್ತಿ ಪಟ್ಟುಗಳ ಬಗ್ಗೆ ತಿಳಿದುಕೊಳ್ಳುವುದನ್ನು ಬಿಟ್ಟರೆ, ಬೇರೆ ಕಡೆ ಗಮನಹರಿಸಲು ಬಿಟ್ಟಿಲ್ಲ. ಏಕೆಂದರೆ, “ಕುಸ್ತಿ’ ನನ್ನ ಬಹುನಿರೀಕ್ಷೆಯ ಚಿತ್ರ. ನಾನೇ ಬರೆದ ಕಥೆ.

ಒಂದು ತಂಡದ ಜೊತೆಗೆ ಕುಳಿತು ಚಿತ್ರಕಥೆಯನ್ನೂ ಮಾಡಲಾಗುತ್ತಿದೆ. ಹೀಗಾಗಿ ಸಾಮ್ರಾಟ್‌ ನನ್ನ ಆಸೆಗೆ ಒತ್ತಾಸೆಯಾಗಿ ಕೆಲಸ ಮಾಡುತ್ತಿದ್ದಾನೆ’ ಎನ್ನುತ್ತಾರೆ ದುನಿಯಾ ವಿಜಯ್‌. ಸದ್ಯಕ್ಕೆ ವಿಜಯ್‌ ಅವರ “ಕುಸ್ತಿ’ಗೆ ನಿರ್ದೇಶಕರು ಯಾರೆಂಬುದು ಗೌಪ್ಯ. ಈಗ ಸ್ಕ್ರಿಪ್ಟ್ ಬಗ್ಗೆಯಷ್ಟೇ ಹೆಚ್ಚು ಗಮನಹರಿಸಿರುವ ಅವರು, ಇಷ್ಟರಲ್ಲೇ ನಿರ್ದೇಶಕರ್ಯಾರು,

ತಂತ್ರಜ್ಞರು ಯಾರೆಲ್ಲಾ ಇರುತ್ತಾರೆ ಎಂಬ ಕುರಿತು ವಿವರ ಕೊಡುತ್ತಾರಂತೆ. ಬಹುತೇಕ ಕರ್ನಾಟಕದಲ್ಲೇ “ಕುಸ್ತಿ’ ನಡೆಯಲಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ “ಕುಸ್ತಿ’ಯ ಆಟ ನಡೆಯಲಿದೆ. ಚಿತ್ರದಲ್ಲಿ ರಿಯಲ್‌ ಕುಸ್ತಿ ಪಟುಗಳು ತುಂಬಿಕೊಳ್ಳುತ್ತಾರೆ ಎನ್ನುವ ವಿಜಯ್‌, ಇಷ್ಟರಲ್ಲೇ ಯಾರೆಲ್ಲಾ ಕುಸ್ತಿ ಅಖಾಡಕ್ಕೆ ಬರುತ್ತಾರೆ ಎಂಬುದನ್ನು ಹೇಳಲಿದ್ದಾರೆ.

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.