ರಗಡ್‌ ಪಾತ್ರ ಮಾಡುತ್ತಿರೋದೇ ವಿಶೇಷ


Team Udayavani, May 9, 2018, 9:00 PM IST

Manoranjan.jpg

“ಸಾಹೇಬ’ ಆಯ್ತು, “ಬೃಹಸ್ಪತಿ’ ಆಗೋಯ್ತು. ಮುಂದೇನು ಎಂಬ ಪ್ರಶ್ನೆ ಎಲ್ಲರಲ್ಲೂ ಇತ್ತು. ಆ ಪ್ರಶ್ನೆಗಳಿಗೆ ಈಗ ಉತ್ತರ ಸಿಕ್ಕಿದ್ದು, ರವಿಚಂದ್ರನ್‌ ಅವರ ಮಗ ಮನೋರಂಜನ್‌ ಈಗ “ಚಿಲ್ಲಂ’ ಎಂಬ ಚಿತ್ರವನ್ನು ಒಪ್ಪಿಕೊಂಡಿದ್ದಾರೆ. ಇದವರ ಮೂರನೆಯ ಚಿತ್ರವಾಗಿದ್ದು, ಶೀರ್ಷಿಕೆಯೇ ಭಿನ್ನವಾಗಿದೆ. ಇನ್ನು ಕಥೆ ಅದಕ್ಕಿಂತಲೂ ವಿಭಿನ್ನವಂತೆ. ಹಾಗಾಗಿಯೇ ಮನೋರಂಜನ್‌ ಕಥೆ ಒಪ್ಪಿ ಚಿತ್ರ ಮಾಡೋಕೆ ಗ್ರೀನ್‌ಸಿಗ್ನಲ್‌ ಕೊಟ್ಟಿದ್ದಾರೆ. ಚಿತ್ರದ ಹೈಲೆಟ್‌ ಏನು, ಪಾತ್ರದ ತಯಾರಿ ಹೇಗಿದೆ, ಯಾವಾಗ ಶುರು ಇತ್ಯಾದಿ ವಿಷಯ ಕುರಿತು ಉದಯವಾಣಿ “ಚಿಟ್‌ಚಾಟ್‌’ನಲ್ಲಿ ಮಾತನಾಡಿದ್ದಾರೆ.

* “ಚಿಲಂ’ ನಿಮ್ಮ ಮೂರನೇ ಚಿತ್ರ, ತಯಾರಿ ಹೇಗಿದೆ?
ಯಾವ ಚಿತ್ರ ಮಾಡಿದರೂ, ಅದು ನನ್ನ ಮೊದಲ ಚಿತ್ರ ಅಂದುಕೊಳ್ಳುತ್ತೇನೆ. ಹಿಂದಿನ ಎರಡು ಚಿತ್ರಗಳಲ್ಲಿ ಸಣ್ಣ ಇದ್ದೆ. ಈ ಚಿತ್ರದ ಕಥೆ ಡಿಫ‌ರೆಂಟ್‌, ಪಾತ್ರವೂ ಸಖತ್‌ ಆಗಿದೆ. ಹಾಗಾಗಿ ನಾನು ಬಾಡಿ ಬಿಲ್ಡ್‌ ಮಾಡುತ್ತಿದ್ದೇನೆ. ದಪ್ಪನೆ ಗಡ್ಡ, ಕೂದಲು ಬಿಡುತ್ತಿದ್ದೇನೆ. ಶೂಟಿಂಗ್‌ ಶುರುವಾಗುವವರೆಗೂ ವಕೌìಟ್‌ ಮಾಡುತ್ತಿರುತ್ತೇನೆ. ಪಕ್ಕಾ ತಯಾರಿಯೊಂದಿಗೇ ಸೆಟ್‌ಗೆ ಹೋಗುತ್ತೇನೆ. 

* ಪಾತ್ರದ ಬಗ್ಗೆ ಹೇಳ್ಳೋದಾದರೆ?
“ಚಿಲಂ’ನಲ್ಲಿ ಡ್ರಗ್‌ ಡೀಲರ್‌ ಪಾತ್ರವಿದೆ. ಅದೊಂದು ರೀತಿಯ ರಗಡ್‌ ಪಾತ್ರ. ಮೊದಲ ಸಲ ಗಾಂಜಾ ಸ್ಮಗ್ಲರ್‌ ಆಗಿ ಕಾಣಿಸಿಕೊಳ್ಳುತ್ತಿದ್ದೇನೆ. ಮೆಚೂÂರ್‌x ಆಗಿರುವ ಖದರ್‌ ಲುಕ್‌ ಇರಲಿದೆ. ಆಟಿಟ್ಯೂಡ್‌ ಇರುವಂತಹ ವಿಭಿನ್ನ ಪಾತ್ರ. ಒಟ್ಟಾರೆ ಮನೋರಂಜನೆ ಚಿತ್ರದ ಉದ್ದೇಶ.

* ರಾಘವೇಂದ್ರ ರಾಜಕುಮಾರ್‌ ವಿಲನ್‌ ಅಂತೆ?
ಹೌದು, ಮೊದಲಿಗೆ ನಾನು ರಾಘಣ್ಣನ ಜೊತೆ ನಟಿಸುತ್ತಿರೋದು ಹೆಮ್ಮೆ ಎನಿಸುತ್ತಿದೆ. ರಾಘಣ್ಣ  ಹದಿಮೂರು ವರ್ಷಗಳ ಬಳಿಕ ಸ್ಕ್ರೀನ್‌ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ. ಅವರಿರುವುದು ಇನ್ನಷ್ಟು ತೂಕ ಹೆಚ್ಚಿಸಿದೆ.

* “ಚಿಲಂ’ನಲ್ಲಿ ಹೈಲೆಟ್‌ ಏನು?
ಪಕ್ಕಾ ಸ್ವಮೇಕ್‌ ಕಥೆ. ತುಂಬಾ ಇಂಟ್ರೆಸ್ಟಿಂಗ್‌ ಆಗಿದೆ. ಒಳ್ಳೇ ಸ್ಕೋಪ್‌ ಇರುವಂತಹ ಪಾತ್ರ ಸಿಕ್ಕಿದೆ. ಕಥೆಯಲ್ಲಿ ಸಾಕಷ್ಟು ತಿರುವುಗಳಿವೆ. ಹಿಂದಿನ ಚಿತ್ರಗಳಿಗೆ ಹೋಲಿಸಿದರೆ, ಇಲ್ಲಿ ಎಲ್ಲವೂ ಹೊಸದಾಗಿದೆ. “ಸಾಹೇಬ’, “ಬೃಹಸ್ಪತಿ’ ಚಿತ್ರಗಳಲ್ಲಿ ನನ್ನ ಪಾತ್ರ ಸಾಫ್ಟ್ ಅಂತ ಎಲ್ಲರೂ ಹೇಳುತ್ತಿದ್ದರು. “ಚಿಲಂ’ನಲ್ಲಿ ಹೈಲೆಟ್‌ ಅಂದರೆ, ರಗಡ್‌ ಪಾತ್ರ ಮಾಡುತ್ತಿರೋದೇ ವಿಶೇಷ.

ಭರ್ಜರಿ ಫೈಟ್ಸ್‌, ಚೇಸಿಂಗ್‌ ಎಲ್ಲವೂ ಇದೆ. ಎಲ್ಲಕ್ಕಿಂತ ಮುಖ್ಯವಾಗಿ, ಚಿತ್ರದಲ್ಲಿ ದೊಡ್ಡ ತಾರಾಬಳಗವಿದೆ. ನಾನಾ ಪಾಟೇಕರ್‌, ದೇವರಾಜ್‌ ಇಲ್ಲಿ ಪೊಲೀಸ್‌ ಅಧಿಕಾರಿಗಳಾಗಿ ಕಾಣಿಸಿಕೊಂಡರೆ, ರಾಘಣ್ಣ ವಿಲನ್‌, ಸುಮನ್‌ ರಂಗನಾಥ್‌ ಕೂಡ ಸ್ಪೆಷಲ್‌ ರೋಲ್‌ ಮಾಡುತ್ತಿದ್ದಾರೆ. ಸರಿತಾ ಅವರು ಅಮ್ಮನ ಪಾತ್ರ ಮಾಡುತ್ತಿದ್ದಾರೆ. ನಾಯಕಿಯಾಗಿ ಪ್ರಿಯಾಂಕ ತಿಮ್ಮೇಶ್‌ ಇದ್ದಾರೆ. ಇದೊಂದು ದೊಡ್ಡ ಬಜೆಟ್‌ ಚಿತ್ರ ಎಂಬುದು ಹೈಲೆಟ್‌. 

* ಚಿತ್ರತಂಡ ಹೇಗನ್ನಿಸುತ್ತೆ?
ಒಳ್ಳೆಯ ತಂಡ ಇಲ್ಲಿದೆ. ನಿರ್ದೇಶಕಿ ಚಂದ್ರಕಲಾ ಕಥೆ ಹೇಳಿದಾಗ, ಎಲ್ಲೂ ಡೌಟ್‌ ಇರಲಿಲ್ಲ. ಅಲ್ಲಿ ಮೊದಲು ಅವರು ಗೆದ್ದರು. ಚರ್ಚೆ ಮಾಡಬೇಕು ಅಂದಾಗೆಲ್ಲ ಬರುತ್ತಿದ್ದರು. ಏನಾದರೂ ಬದಲಾವಣೆ ಬಯಸಿದಾಗ, ಒಪ್ಪಿದರು. ನನಗೆ ಎರಡು ತಿಂಗಳು ಮುಂಚೆಯೇ, ಸ್ಕ್ರಿಪ್ಟ್ ಕೊಟ್ಟಿದ್ದರು. ಮೊದಲೇ ಪ್ಲಾನಿಂಗ್‌ ಮಾಡಿಕೊಂಡಿದ್ದರಿಂದ ಯಾವುದೇ ಸಮಸ್ಯೆ ಇಲ್ಲದಂತೆ ಕೆಲಸ ಮಾಡುತ್ತಿದೆ.

* ಅಪ್ಪ ಕಥೆ ಕೇಳಿದ್ರಾ?
ಇಲ್ಲ. ನಾನೇ ಕೇಳಿ ಆಯ್ಕೆ ಮಾಡಿಕೊಂಡೆ. ನಿನಗೆ ಇಷ್ಟದ ಪಾತ್ರವನ್ನು ಮಾಡು ಅಂತ ಅಪ್ಪ ಹೇಳಿದ್ದಾರೆ. ಅದರಂತೆ ಪಾತ್ರ ಇಷ್ಟವಾಯ್ತು. ಒಪ್ಪಿಕೊಂಡೆ.

* ಸಹೋದರ ವಿಕ್ಕಿ ಏನ್ಮಾಡ್ತಾ ಇದ್ದಾರೆ?
ಸದ್ಯಕ್ಕೆ ಸಿನಿಮಾಗೆ ರೆಡಿಯಾಗುತ್ತಿದ್ದಾನೆ. ಒಳ್ಳೇ ಪ್ರಾಜೆಕ್ಟ್ ಬಂದರೆ, ಅವನೂ ಹೀರೋ ಆಗ್ತಾನೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.