ರಗಡ್‌ ಪಾತ್ರ ಮಾಡುತ್ತಿರೋದೇ ವಿಶೇಷ


Team Udayavani, May 9, 2018, 9:00 PM IST

Manoranjan.jpg

“ಸಾಹೇಬ’ ಆಯ್ತು, “ಬೃಹಸ್ಪತಿ’ ಆಗೋಯ್ತು. ಮುಂದೇನು ಎಂಬ ಪ್ರಶ್ನೆ ಎಲ್ಲರಲ್ಲೂ ಇತ್ತು. ಆ ಪ್ರಶ್ನೆಗಳಿಗೆ ಈಗ ಉತ್ತರ ಸಿಕ್ಕಿದ್ದು, ರವಿಚಂದ್ರನ್‌ ಅವರ ಮಗ ಮನೋರಂಜನ್‌ ಈಗ “ಚಿಲ್ಲಂ’ ಎಂಬ ಚಿತ್ರವನ್ನು ಒಪ್ಪಿಕೊಂಡಿದ್ದಾರೆ. ಇದವರ ಮೂರನೆಯ ಚಿತ್ರವಾಗಿದ್ದು, ಶೀರ್ಷಿಕೆಯೇ ಭಿನ್ನವಾಗಿದೆ. ಇನ್ನು ಕಥೆ ಅದಕ್ಕಿಂತಲೂ ವಿಭಿನ್ನವಂತೆ. ಹಾಗಾಗಿಯೇ ಮನೋರಂಜನ್‌ ಕಥೆ ಒಪ್ಪಿ ಚಿತ್ರ ಮಾಡೋಕೆ ಗ್ರೀನ್‌ಸಿಗ್ನಲ್‌ ಕೊಟ್ಟಿದ್ದಾರೆ. ಚಿತ್ರದ ಹೈಲೆಟ್‌ ಏನು, ಪಾತ್ರದ ತಯಾರಿ ಹೇಗಿದೆ, ಯಾವಾಗ ಶುರು ಇತ್ಯಾದಿ ವಿಷಯ ಕುರಿತು ಉದಯವಾಣಿ “ಚಿಟ್‌ಚಾಟ್‌’ನಲ್ಲಿ ಮಾತನಾಡಿದ್ದಾರೆ.

* “ಚಿಲಂ’ ನಿಮ್ಮ ಮೂರನೇ ಚಿತ್ರ, ತಯಾರಿ ಹೇಗಿದೆ?
ಯಾವ ಚಿತ್ರ ಮಾಡಿದರೂ, ಅದು ನನ್ನ ಮೊದಲ ಚಿತ್ರ ಅಂದುಕೊಳ್ಳುತ್ತೇನೆ. ಹಿಂದಿನ ಎರಡು ಚಿತ್ರಗಳಲ್ಲಿ ಸಣ್ಣ ಇದ್ದೆ. ಈ ಚಿತ್ರದ ಕಥೆ ಡಿಫ‌ರೆಂಟ್‌, ಪಾತ್ರವೂ ಸಖತ್‌ ಆಗಿದೆ. ಹಾಗಾಗಿ ನಾನು ಬಾಡಿ ಬಿಲ್ಡ್‌ ಮಾಡುತ್ತಿದ್ದೇನೆ. ದಪ್ಪನೆ ಗಡ್ಡ, ಕೂದಲು ಬಿಡುತ್ತಿದ್ದೇನೆ. ಶೂಟಿಂಗ್‌ ಶುರುವಾಗುವವರೆಗೂ ವಕೌìಟ್‌ ಮಾಡುತ್ತಿರುತ್ತೇನೆ. ಪಕ್ಕಾ ತಯಾರಿಯೊಂದಿಗೇ ಸೆಟ್‌ಗೆ ಹೋಗುತ್ತೇನೆ. 

* ಪಾತ್ರದ ಬಗ್ಗೆ ಹೇಳ್ಳೋದಾದರೆ?
“ಚಿಲಂ’ನಲ್ಲಿ ಡ್ರಗ್‌ ಡೀಲರ್‌ ಪಾತ್ರವಿದೆ. ಅದೊಂದು ರೀತಿಯ ರಗಡ್‌ ಪಾತ್ರ. ಮೊದಲ ಸಲ ಗಾಂಜಾ ಸ್ಮಗ್ಲರ್‌ ಆಗಿ ಕಾಣಿಸಿಕೊಳ್ಳುತ್ತಿದ್ದೇನೆ. ಮೆಚೂÂರ್‌x ಆಗಿರುವ ಖದರ್‌ ಲುಕ್‌ ಇರಲಿದೆ. ಆಟಿಟ್ಯೂಡ್‌ ಇರುವಂತಹ ವಿಭಿನ್ನ ಪಾತ್ರ. ಒಟ್ಟಾರೆ ಮನೋರಂಜನೆ ಚಿತ್ರದ ಉದ್ದೇಶ.

* ರಾಘವೇಂದ್ರ ರಾಜಕುಮಾರ್‌ ವಿಲನ್‌ ಅಂತೆ?
ಹೌದು, ಮೊದಲಿಗೆ ನಾನು ರಾಘಣ್ಣನ ಜೊತೆ ನಟಿಸುತ್ತಿರೋದು ಹೆಮ್ಮೆ ಎನಿಸುತ್ತಿದೆ. ರಾಘಣ್ಣ  ಹದಿಮೂರು ವರ್ಷಗಳ ಬಳಿಕ ಸ್ಕ್ರೀನ್‌ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ. ಅವರಿರುವುದು ಇನ್ನಷ್ಟು ತೂಕ ಹೆಚ್ಚಿಸಿದೆ.

* “ಚಿಲಂ’ನಲ್ಲಿ ಹೈಲೆಟ್‌ ಏನು?
ಪಕ್ಕಾ ಸ್ವಮೇಕ್‌ ಕಥೆ. ತುಂಬಾ ಇಂಟ್ರೆಸ್ಟಿಂಗ್‌ ಆಗಿದೆ. ಒಳ್ಳೇ ಸ್ಕೋಪ್‌ ಇರುವಂತಹ ಪಾತ್ರ ಸಿಕ್ಕಿದೆ. ಕಥೆಯಲ್ಲಿ ಸಾಕಷ್ಟು ತಿರುವುಗಳಿವೆ. ಹಿಂದಿನ ಚಿತ್ರಗಳಿಗೆ ಹೋಲಿಸಿದರೆ, ಇಲ್ಲಿ ಎಲ್ಲವೂ ಹೊಸದಾಗಿದೆ. “ಸಾಹೇಬ’, “ಬೃಹಸ್ಪತಿ’ ಚಿತ್ರಗಳಲ್ಲಿ ನನ್ನ ಪಾತ್ರ ಸಾಫ್ಟ್ ಅಂತ ಎಲ್ಲರೂ ಹೇಳುತ್ತಿದ್ದರು. “ಚಿಲಂ’ನಲ್ಲಿ ಹೈಲೆಟ್‌ ಅಂದರೆ, ರಗಡ್‌ ಪಾತ್ರ ಮಾಡುತ್ತಿರೋದೇ ವಿಶೇಷ.

ಭರ್ಜರಿ ಫೈಟ್ಸ್‌, ಚೇಸಿಂಗ್‌ ಎಲ್ಲವೂ ಇದೆ. ಎಲ್ಲಕ್ಕಿಂತ ಮುಖ್ಯವಾಗಿ, ಚಿತ್ರದಲ್ಲಿ ದೊಡ್ಡ ತಾರಾಬಳಗವಿದೆ. ನಾನಾ ಪಾಟೇಕರ್‌, ದೇವರಾಜ್‌ ಇಲ್ಲಿ ಪೊಲೀಸ್‌ ಅಧಿಕಾರಿಗಳಾಗಿ ಕಾಣಿಸಿಕೊಂಡರೆ, ರಾಘಣ್ಣ ವಿಲನ್‌, ಸುಮನ್‌ ರಂಗನಾಥ್‌ ಕೂಡ ಸ್ಪೆಷಲ್‌ ರೋಲ್‌ ಮಾಡುತ್ತಿದ್ದಾರೆ. ಸರಿತಾ ಅವರು ಅಮ್ಮನ ಪಾತ್ರ ಮಾಡುತ್ತಿದ್ದಾರೆ. ನಾಯಕಿಯಾಗಿ ಪ್ರಿಯಾಂಕ ತಿಮ್ಮೇಶ್‌ ಇದ್ದಾರೆ. ಇದೊಂದು ದೊಡ್ಡ ಬಜೆಟ್‌ ಚಿತ್ರ ಎಂಬುದು ಹೈಲೆಟ್‌. 

* ಚಿತ್ರತಂಡ ಹೇಗನ್ನಿಸುತ್ತೆ?
ಒಳ್ಳೆಯ ತಂಡ ಇಲ್ಲಿದೆ. ನಿರ್ದೇಶಕಿ ಚಂದ್ರಕಲಾ ಕಥೆ ಹೇಳಿದಾಗ, ಎಲ್ಲೂ ಡೌಟ್‌ ಇರಲಿಲ್ಲ. ಅಲ್ಲಿ ಮೊದಲು ಅವರು ಗೆದ್ದರು. ಚರ್ಚೆ ಮಾಡಬೇಕು ಅಂದಾಗೆಲ್ಲ ಬರುತ್ತಿದ್ದರು. ಏನಾದರೂ ಬದಲಾವಣೆ ಬಯಸಿದಾಗ, ಒಪ್ಪಿದರು. ನನಗೆ ಎರಡು ತಿಂಗಳು ಮುಂಚೆಯೇ, ಸ್ಕ್ರಿಪ್ಟ್ ಕೊಟ್ಟಿದ್ದರು. ಮೊದಲೇ ಪ್ಲಾನಿಂಗ್‌ ಮಾಡಿಕೊಂಡಿದ್ದರಿಂದ ಯಾವುದೇ ಸಮಸ್ಯೆ ಇಲ್ಲದಂತೆ ಕೆಲಸ ಮಾಡುತ್ತಿದೆ.

* ಅಪ್ಪ ಕಥೆ ಕೇಳಿದ್ರಾ?
ಇಲ್ಲ. ನಾನೇ ಕೇಳಿ ಆಯ್ಕೆ ಮಾಡಿಕೊಂಡೆ. ನಿನಗೆ ಇಷ್ಟದ ಪಾತ್ರವನ್ನು ಮಾಡು ಅಂತ ಅಪ್ಪ ಹೇಳಿದ್ದಾರೆ. ಅದರಂತೆ ಪಾತ್ರ ಇಷ್ಟವಾಯ್ತು. ಒಪ್ಪಿಕೊಂಡೆ.

* ಸಹೋದರ ವಿಕ್ಕಿ ಏನ್ಮಾಡ್ತಾ ಇದ್ದಾರೆ?
ಸದ್ಯಕ್ಕೆ ಸಿನಿಮಾಗೆ ರೆಡಿಯಾಗುತ್ತಿದ್ದಾನೆ. ಒಳ್ಳೇ ಪ್ರಾಜೆಕ್ಟ್ ಬಂದರೆ, ಅವನೂ ಹೀರೋ ಆಗ್ತಾನೆ.

ಟಾಪ್ ನ್ಯೂಸ್

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.