ರಶ್ಮಿಕಾ ಈಗ ಕ್ರಿಕೆಟರ್‌


Team Udayavani, May 14, 2018, 11:03 AM IST

Rashmika.1jpg.jpg

ಕನ್ನಡ ಚಿತ್ರರಂಗದ ಮೂಲಕ ಸಿನಿಪಯಣ ಆರಂಭಿಸಿ, ಆ ನಂತರ ಬೇರೆ ಬೇರೆ ಭಾಷೆಯಲ್ಲಿ ಸಾಕಷ್ಟು ನಟಿಯರು ಬಿಝಿಯಾಗಿದ್ದಾರೆ. ಈಗ ಆ ಸಾಲಿಗೆ ಸೇರುವ ಮತ್ತೂಬ್ಬ ನಟಿ ಎಂದರೆ ಅದು ರಶ್ಮಿಕಾ ಮಂದಣ್ಣ. “ಕಿರಿಕ್‌ ಪಾರ್ಟಿ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ರಶ್ಮಿಕಾ ಈಗ ತೆಲುಗಿನಲ್ಲಿ ಬಹುಬೇಡಿಕೆಯ ನಟಿ. ಈಗಾಗಲೇ ರಶ್ಮಿಕಾ ನಟಿಸಿರುವ ತೆಲುಗಿನ “ಚಲೋ’ ಚಿತ್ರ ಬಿಡುಗಡೆಯಾಗಿದ್ದು, ಈ ಮೂಲಕ ರಶ್ಮಿಕಾಗೆ ತೆಲುಗಿನಲ್ಲಿ ಮತ್ತಷ್ಟು ಅವಕಾಶಗಳು ಸಿಗುತ್ತಿವೆ.

ಸದ್ಯ ರಶ್ಮಿಕಾ ಕೈಯಲ್ಲಿ ಎರಡು ತೆಲುಗು ಸಿನಿಮಾಗಳಿವೆ. ನಾಗಾರ್ಜುನ ಹಾಗೂ ನಾನಿ ಕಾಂಬಿನೇಶನ್‌ನಲ್ಲಿ ಬರುತ್ತಿರುವ ಸಿನಿಮಾದಲ್ಲೂ ರಶ್ಮಿಕಾ ನಾಯಕಿಯಾಗಿ ನಟಿಸುತ್ತಿದ್ದು, ಇಲ್ಲಿ ನಾನಿ ಜೋಡಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇದಲ್ಲದೇ “ಅರ್ಜುನ್‌ ರೆಡ್ಡಿ’ ಖ್ಯಾತಿಯ ವಿಜಯ್‌ ದೇವರಕೊಂಡ ಅಭಿನಯದ “ಡಿಯರ್‌ ಕಾಮ್ರೆಡ್‌’ ಸಿನಿಮಾದಲ್ಲೂ ರಶ್ಮಿಕಾ ನಾಯಕಿಯಾಗಿ ನಟಿಸುತ್ತಿದ್ದಾರೆ.

ಇತ್ತೀಚೆಗೆ ವಿಜಯ್‌ ದೇವರಕೊಂಡ ಅವರ ಹುಟ್ಟುಹಬ್ಬದ ದಿನ ಚಿತ್ರದ ಫ‌ಸ್ಟ್‌ಲುಕ್‌ ಬಿಡುಗಡೆಯಾಗಿದೆ. ಈ ಚಿತ್ರದಲ್ಲಿ ರಶ್ಮಿಕಾ ಕ್ರಿಕೆಟರ್‌ ಆಗಿ ಕಾಣಿಸಿಕೊಳ್ಳಲಿದ್ದಾರಂತೆ. ತೆಲಂಗಾಣ ಪರ ಆಡುವ ಕ್ರಿಕೆಟ್‌ ಆಟಗಾರ್ತಿಯಾಗಿ ಕಾಣಿಸಿಕೊಳ್ಳಲಿರುವ ರಶ್ಮಿಕಾ, ಇದಕ್ಕಾಗಿ ಈಗಾಗಲೇ ಕ್ರಿಕೆಟ್‌ ತರಬೇತಿಯನ್ನೂ ಪಡೆಯುತ್ತಿದ್ದಾರಂತೆ.

ಫೀಲ್ಡಿಂಗ್‌, ಬ್ಯಾಟಿಂಗ್‌ ಸೇರಿದಂತೆ ಕ್ರಿಕೆಟ್‌ನ ವಿವಿಧ ಪಟ್ಟುಗಳನ್ನು ರಶ್ಮಿಕಾ ಅಭ್ಯಾಸಿಸುತ್ತಿದ್ದಾರೆನ್ನಲಾಗಿದೆ. ಇನ್ನು, ರಾಜ್‌ಮೌಳಿ ನಿರ್ದೇಶಿಸುತ್ತಿರುವ ರಾಮ್‌ಚರಣ್‌ ತೇಜಾ ಹಾಗೂ ಜೂ.ಎನ್‌ಟಿಆರ್‌ ಕಾಂಬಿನೇಶನ್‌ನಲ್ಲಿ ತಯಾರಾಗಲಿರುವ ಚಿತ್ರದಲ್ಲೂ ರಶ್ಮಿಕಾಗೆ ಅವಕಾಶ ಸಿಕ್ಕಿದೆ ಎಂಬ ಸುದ್ದಿ ಓಡಾಡುತ್ತಿದೆ. ಆದರೆ, ಈ ಬಗ್ಗೆ ರಶ್ಮಿಕಾ ಆಗಲೀ, ಚಿತ್ರತಂಡವಾಗಲೀ ಯಾವುದೇ ಹೇಳಿಕೆ ನೀಡಿಲ್ಲ.

ತೆಲುಗಿನಲ್ಲಿ ಹೆಚ್ಚು ಬಿಝಿಯಾಗುತ್ತಾ ಹೋಗುತ್ತಿರುವ ರಶ್ಮಿಕಾ ಕನ್ನಡದಿಂದ ದೂರವಾಗುತ್ತಿದ್ದಾರಾ ಎಂಬ ಪ್ರಶ್ನೆ ಸಹಜವಾಗಿಯೇ ನಿಮ್ಮನ್ನು ಕಾಡಬಹುದು. ಸದ್ಯ ರಶ್ಮಿಕಾ ಕನ್ನಡದಲ್ಲಿ ದರ್ಶನ್‌ ಜೊತೆ “ಯಜಮಾನ’ ಸಿನಿಮಾ ಬಿಟ್ಟರೆ ಬೇರೆ ಯಾವುದೇ ಸಿನಿಮಾಗಳಲ್ಲೂ ನಟಿಸುತ್ತಿಲ್ಲ. ಸಾಕಷ್ಟು ಅವಕಾಶಗಳು ಬಂದರೂ ರಶ್ಮಿಕಾ ಮಾತ್ರ ತೆಲುಗಿನಲ್ಲಿ ಬಿಝಿ ಇರುವುದರಿಂದ ಬೇರೆ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿಲ್ಲ ಎಂಬ ಮಾತಿದೆ. 

ಟಾಪ್ ನ್ಯೂಸ್

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqewqewq

Doping: ಶಾಲು ಚೌಧರಿ ದೋಷಮುಕ್ತ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.