ಗಾಯಕ ಹೇಮಂತ್‌ ಈಗ ಸಂಗೀತ ನಿರ್ದೇಶಕ


Team Udayavani, May 15, 2018, 11:14 AM IST

gayaaka.jpg

ಸಂಗೀತ ನಿರ್ದೇಶಕರು ಗಾಯಕರಾಗಿದ್ದಾರೆ. ಗಾಯಕರು ಸಂಗೀತ ನಿರ್ದೇಶಕರೂ ಆಗಿದ್ದಾರೆ. ಈಗ ಆ ಸಾಲಿಗೆ ಗಾಯಕ ಹೇಮಂತ್‌ ಹೊಸ ಸೇರ್ಪಡೆ. ಹೌದು, ಹೇಮಂತ್‌ ಇದುವರೆಗೆ ನೂರಾರು  ಹಾಡುಗಳನ್ನು ಹಾಡಿರುವ ಹೇಮಂತ್‌ ಅಂದಾಕ್ಷಣ ಥಟ್ಟನೆ ನೆನಪಾಗೋದೇ “ಪ್ರೀತ್ಸೆ ಪ್ರೀತ್ಸೆ..’ ಹಾಡು. ಆ ಹಾಡು ಸೂಪರ್‌ ಹಿಟ್‌ ಆಗುತ್ತಿದ್ದಂತೆಯೇ, ಹೇಮಂತ್‌ ಅವರನ್ನು ಹುಡುಕಿ ಬಂದ ಹಾಡುಗಳಿಗೆ ಲೆಕ್ಕವಿಲ್ಲ.

ಆ ಬಳಿಕೆ ಹೇಮಂತ್‌ ಅದೆಷ್ಟೋ ಜನಪ್ರಿಯ ಹಾಡುಗಳಿಗೆ ಧ್ವನಿಯಾದರು. “ಕುರಿಗಳು ಸಾರ್‌ ಕುರಿಗಳು’ ಚಿತ್ರದಲ್ಲಿ “ನಿದಿರೆ ಬರದಿರೆ ಏನಂತೀ…’, “ಕುಟುಂಬ’ ಚಿತ್ರದ “ನೀ ನನ್‌ ಅಪ್ಪಿಕೊಳ್ಳಲ್ವಾ..’, “ದುನಿಯಾ’ ಚಿತ್ರದ “ಪ್ರೀತಿ ಮಾಯೆ ಹುಷಾರು…’ , “ಇಂತಿ ನಿನ್ನ ಪ್ರೀತಿಯ’ ಚಿತ್ರದ “ಓ ಕನಸ ಜೋಕಾಲಿ …’ ಹಾಡುಗಳು ಇಂದಿಗೂ ಗುನುಗುವಂತಿವೆ. ಅದಲ್ಲದೆ ಸಾಕಷ್ಟು ಸ್ಟಾರ್‌ ನಟರ ಚಿತ್ರಗಳಿಗೆ ಹೇಮಂತ್‌ ಹಾಡಿದ್ದಾರೆ.

ಹಿನ್ನೆಲೆ ಗಾಯನಕ್ಕೆ ಎರಡು ಬಾರಿ ರಾಜ್ಯ ಪ್ರಶಸ್ತಿ ಪಡೆದ ಅವರೀಗ, ಇದೇ ಮೊದಲ ಬಾರಿಗೆ ಸಂಗೀತ ನಿರ್ದೇಶಕರಾಗಿದ್ದಾರೆ. “ಕರ್ಷಣಂ’ ಚಿತ್ರಕ್ಕೆ ನಾಲ್ಕು ಹಾಡುಗಳನ್ನು ಕಟ್ಟಿಕೊಟ್ಟಿದ್ದಾರೆ ಹೇಮಂತ್‌. ಈ ಚಿತ್ರಕ್ಕೆ ನಾಗೇಂದ್ರ ಪ್ರಸಾದ್‌ ಅವರು ಗೀತೆಗಳನ್ನು ರಚಿಸಿದ್ದಾರೆ. ಅಂದಹಾಗೆ, ಈ ಚಿತ್ರವನ್ನು “ಮಹಾಭಾರತ’ ಧಾರಾವಾಹಿ ಖ್ಯಾತಿಯ ಶರವಣ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿದ್ದಾರೆ.

ಧನಂಜಯ ಅತ್ರೆ ಈ ಚಿತ್ರದ ನಿರ್ಮಾಣದ ಜೊತೆಗೆ ನಾಯಕರಾಗಿಯೂ ನಟಿಸಿದ್ದಾರೆ. ನಾಯಕರಾಗಿ ಇದು ಇವರ ಮೊದಲ ಚಿತ್ರ. ಕಿರುತೆರೆಯಲ್ಲಿ ನಟರಾಗಿ ಗುರುತಿಸಿಕೊಂಡಿರುವ ಧನಂಜಯ್‌ ಅತ್ರೆ, “ಚಿತ್ರಲೇಖ’ ಧಾರಾವಾಹಿಯಲ್ಲಿ ನಟಿಸಿದ್ದಾರೆ. ಹಲವು ಚಿತ್ರಗಳಲ್ಲಿ ಪಾತ್ರ ನಿರ್ವಹಿಸಿದ್ದ ಧನಂಜಯ್‌ ಅತ್ರೆಗೆ “ಕರ್ಷಣಂ’ ಮೊದಲ ಚಿತ್ರ.

ಈಗಾಗಲೇ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ. ಇತ್ತೀಚೆಗೆ, ಸ್ಲಂ ಒಂದರಲ್ಲಿ “ಹೊಂಬಾಳೆ ಕಟ್ಟು ಗುರು, ಚಪ್ಪಾಳೆ ತಟ್ಟು ಗುರು…’ ಎಂಬ ನಾಯಕನ ಪರಿಚಯಿಸುವ ಹಾಡಿನೊಂದಿಗೆ ಚಿತ್ರಕ್ಕೆ ಕುಂಬಳಕಾಯಿ ಒಡೆಯಲಾಗಿದೆ. ಅಂದಹಾಗೆ, ಇದೊಂದು ಸಸ್ಪೆನ್ಸ್‌ ಥ್ರಿಲ್ಲರ್‌ ಕಥೆ. 

ಚಿತ್ರಕ್ಕೆ ಮೋಹನ್‌ ಎಂ.ಮುಗುಡೇಶ್ವರ ಛಾಯಾಗ್ರಹಣ, ಹೇಮಂತ್‌ ಸಂಗೀತ ನಿರ್ದೇಶನ, ನಾಗೇಂದ್ರ ಪ್ರಸಾದ್‌ ಸಾಹಿತ್ಯ, ಗೌರಿ ಅತ್ರೆ ಕಥೆ, ವೆಂಕಟೇಶ್‌ ಸಂಕಲನ, ಗಿರೀಶ್‌ ನೃತ್ಯ ನಿರ್ದೇಶನ, ಅಶೋಕ್‌ ಸಾಹಸ, ವಸಂತರಾವ್‌ ಕುಲಕರ್ಣಿ ಕಲಾನಿರ್ದೇಶನವಿದೆ. ಧನಂಜಯ ಅತ್ರೆ, ಅನೂಷಾರೈ, ಶ್ರೀನಿವಾಸ ಮೂರ್ತಿ, ಮನಮೋಹನ್‌ ರೈ, ವಿಜಯ ಚಂಡೂರು, ಗೌತಮ್‌ ರಾಜ್‌, ಯಮುನಾ ಶ್ರೀನಿಧಿ ಇನ್ನು ಮುಂತಾದವರ ತಾರಾಬಳಗವಿದೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.