ಪೈಲ್ವಾನ್‌ ಜೊತೆ ಆಕಾಂಕ್ಷಾ ಸಿಂಗ್‌


Team Udayavani, May 15, 2018, 11:14 AM IST

pailwan.jpg

ಸುದೀಪ್‌ ನಾಯಕರಾಗಿರುವ “ಪೈಲ್ವಾನ್‌’ ಚಿತ್ರಕ್ಕೆ ನಾಯಕಿ ಯಾರಾಗುತ್ತಾರೆ? ಈ ಕುತೂಹಲ ಸುದೀಪ್‌ ಅವರ ಅಭಿಮಾನಿಗಳಿಂದ ಹಿಡಿದು ಸಿನಿಪ್ರೇಮಿಗಳವರೆಗೆ ಇತ್ತು. ಈ ನಡುವೆಯೇ ಅಲ್ಲಲ್ಲಿ ಕೆಲವು ನಾಯಕಿಯರ ಹೆಸರುಗಳು ಕೇಳಿಬಂದುವು. ಈಗ ಅಂತಿಮವಾಗಿ ಚಿತ್ರಕ್ಕೆ ನಾಯಕಿಯ ಆಯ್ಕೆಯಾಗಿದೆ. ಹಾಗಂತ ಕನ್ನಡದ ಹುಡುಗಿಯಲ್ಲ, ಮುಂಬೈ ಬೆಡಗಿ.

ಹೌದು, ಮುಂಬೈ ಮೂಲದ ಆಕಾಂಕ್ಷಾ ಸಿಂಗ್‌ “ಪೈಲ್ವಾನ್‌’ ಚಿತ್ರಕ್ಕೆ ನಾಯಕಿಯಾಗಿದ್ದಾರೆ. ಈ ಮೂಲಕ ಮುಂಬೈ ಮೂಲದ ಮತ್ತೂಬ್ಬ ನಾಯಕಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟಂತಾಗಿದೆ. ಎಲ್ಲಾ ಓಕೆ, ಈ ಆಕಾಂಕ್ಷಾ ಯಾರು, ಅವರ ಹಿನ್ನೆಲೆಯೇನು ಎಂದು ನೀವು ಕೇಳಿದರೆ, ಅವರ ಕಿರುತೆರೆ ಜರ್ನಿಯಿಂದಲೇ ಹೇಳಬೇಕಾಗುತ್ತದೆ. ಹಿಂದಿ ಕಿರುತೆರೆಯಲ್ಲಿ ಪ್ರಸಾರವಾದ “ನಾ ಬೋಲೇ ತುಮ್‌ ನ ಮೈನೇ ಕುಚ್‌ ಕಹಾ’ದ ಎರಡೂ ಸರಣಿಗಳಲ್ಲೂ ಆಕಾಂಕ್ಷಾ ಕಾಣಿಸಿಕೊಂಡಿದ್ದಾರೆ.

ಇದಲ್ಲದೇ, “ಸಾವ್‌ಧಾನ್‌ ಇಂಡಿಯಾ’, “ಗುಲ್‌ಮೋಹರ್‌ ಗ್ರ್ಯಾಂಡ್‌’ನಲ್ಲೂ ಆಕಾಂಕ್ಷಾ ಪ್ರಧಾನ ಪಾತ್ರ ಮಾಡಿದ್ದಾರೆ. ಆಕಾಂಕ್ಷಾ ಜರ್ನಿ ಕೇವಲ ಕಿರುತೆರೆಗೆ ಮುಗಿದು ಹೋಗಿಲ್ಲ. ಎಲ್ಲಾ ನಟಿಯರಂತೆ ಆಕಾಂಕ್ಷಾ ಕೂಡಾ ಕಿರುತೆರೆಯಿಂದ ಹಿರಿತೆರೆಗೆ ಜಂಪ್‌ ಮಾಡಿದ್ದಾರೆ. ಹಿಂದಿಯ “ಬದ್ರಿನಾಥ್‌ ಕೀ ದುಲ್ಹನಿಯಾ’ ಹಾಗೂ ತೆಲುಗಿನ “ಮಳ್ಳಿ ರಾವ’ ಸಿನಿಮಾದಲ್ಲಿ ಆಕಾಂಕ್ಷಾ ನಟಿಸಿದ್ದಾರೆ. ಸದ್ಯ ಆಕಾಂಕ್ಷಾ ನಾಗಾರ್ಜುನ ಹಾಗೂ ನಾನಿ ಕಾಂಬಿನೇಶನ್‌ನಲ್ಲಿ ಮೂಡಿಬರುತ್ತಿರುವ ಚಿತ್ರವೊಂದರಲ್ಲೂ ಆಕಾಂಕ್ಷಾ ಸಿಂಗ್‌ ನಟಿಸುತ್ತಿದ್ದಾರೆ.

ಈ ಚಿತ್ರದಲ್ಲಿ ಕನ್ನಡದ ಹುಡುಗಿ ರಶ್ಮಿಕಾ ಕೂಡಾ ನಟಿಸುತ್ತಿದ್ದು, ಆಕಾಂಕ್ಷಾ, ನಾಗಾರ್ಜುನ ಜೋಡಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗ ಮೊದಲ ಬಾರಿಗೆ ಕನ್ನಡ ಸಿನಿಮಾದಲ್ಲಿ ಆಕಾಂಕ್ಷಾಗೆ ಅವಕಾಶ ಸಿಕ್ಕಿದೆ. ಮೊದಲ ಸಿನಿಮಾವೇ ಕನ್ನಡದ ಸ್ಟಾರ್‌ ನಟನ ಜೊತೆ ಸಿಕ್ಕಿರುವುದರಿಂದ ಆಕಾಂಕ್ಷಾ ಕೂಡಾ ಎಕ್ಸೆ„ಟ್‌ ಆಗಿದ್ದಾರೆ. “ನನ್ನ ಮೊದಲ ಕನ್ನಡ ಸಿನಿಮಾವನ್ನು ಒಪ್ಪಿಕೊಂಡಿದ್ದೇನೆ. ಈ ಸಿನಿಮಾ ಬಗ್ಗೆ ಎಕ್ಸೆ„ಟ್‌ ಆಗಿದ್ದೇನೆ’ ಎಂದ ಟ್ವೀಟ್‌ ಮಾಡಿದ್ದಾರೆ. 

ಅಂದಹಾಗೆ, “ಪೈಲ್ವಾನ್‌’ ಚಿತ್ರವನ್ನು ಕೃಷ್ಣ ಅವರು ನಿರ್ಮಿಸಿ, ನಿರ್ದೇಶಿಸುತ್ತಿದ್ದಾರೆ. ಈ ಹಿಂದೆ “ಹೆಬ್ಬುಲಿ’ ಚಿತ್ರ ಮಾಡಿದ ಕೃಷ್ಣ ಈಗ ಸುದೀಪ್‌ ಅವರೊಂದಿಗೆ ಎರಡನೇ ಸಿನಿಮಾ ಮಾಡುತ್ತಿದ್ದಾರೆ. ಚಿತ್ರದಲ್ಲಿ ಕಬೀರ್‌ ಸಿಂಗ್‌ ದುಹಾನ್‌ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಅವರು ಕೂಡಾ ತಮ್ಮ ಪಾತ್ರಕ್ಕಾಗಿ ಸಾಕಷ್ಟು ತಯಾರಿ ನಡೆಸುತ್ತಿದ್ದಾರೆ. ಉಳಿದಂತೆ ಶರತ್‌ ಲೋಹಿತಾಶ್ವ, ಸಾಧುಕೋಕಿಲ, ಚಿಕ್ಕಣ್ಣ ಸೇರಿದಂತೆ ಅನೇಕರು ನಟಿಸುತ್ತಿದ್ದಾರೆ. ಇದರ ಜೊತೆಗೆ ಮತ್ತೂಬ್ಬ ದೊಡ್ಡ ಕಲಾವಿದ ಈ ಸಿನಿಮಾದಲ್ಲಿ ನಟಿಸಲಿದ್ದಾರೆ. ಮೇ 17 ರಿಂದ ಚಿತ್ರೀಕರಣ ಚೆನ್ನೈನಲ್ಲಿ ಆರಂಭವಾಗಲಿದೆ. 

ಟಾಪ್ ನ್ಯೂಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

sanju weds geetha 2 song shooting

Sanju Weds Geetha 2; ಕಲರ್’ಫುಟ್ ಸೆಟ್ ನಲ್ಲಿ ಸಂಜು ಹಾಡು

arjun kapikad kaljiga movie

Arjun Kapikad; ತುಳುನಾಡಿನ ಕಲ್ಜಿಗದ ಕಥೆ: ಕರಾವಳಿ ಮಂದಿಯ ಮತ್ತೊಂದು ಸಾಹಸ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.