ವರ್ಮ ಅವರನ್ನು ಭೇಟಿ ಮಾಡಿದ್ದು ಹೌದು
Team Udayavani, May 23, 2018, 10:00 PM IST
ರಾಮ್ ಗೋಪಾಲ್ ವರ್ಮ ನಿರ್ದೇಶನದ ಹೊಸ ಚಿತ್ರವೊಂದರಲ್ಲಿ ಧನಂಜಯ್ ನಟಿಸುತ್ತಿದ್ದಾರಂತೆ! ಹಾಗಂತ ಸುದ್ದಿಯೊಂದು ಕಳೆದ ಎರಡು ದಿನಗಳಿಂದ ಓಡಾಡುತ್ತಿದೆ. ಇತ್ತೀಚೆಗಷ್ಟೇ “ಆ ದಿನಗಳು’ ಖ್ಯಾತಿಯ ಚೇತನ್, ತೆಲುಗಿನ “ರಣಂ’ ಎಂಬ ಚಿತ್ರದಲ್ಲಿ ನಟಿಸುತ್ತಿರುವ ಸುದ್ದಿ ಬಂದಿತ್ತು. ಈಗ ಧನಂಜಯ್ ಸಹ ಬೇರೆ ಭಾಷೆಗೆ ಹೊರಟಿದ್ದಾರೆ ಎಂದುಕೊಳ್ಳುವಾಗಲೇ, ಧನಂಜಯ್ ಆ ಬಗ್ಗೆ ಮಾತನಾಡಿದ್ದಾರೆ.
“ಅಂದು “ಟಗರು’ ಚಿತ್ರ ನೋಡಿದಾಗಲೇ, ವರ್ಮ ಅವರು ನನ್ನ ಅಭಿನಯದ ಬಗ್ಗೆ ಮೆಚ್ಚಿ ಮಾತಾಡಿದ್ದರು. ಇತ್ತೀಚೆಗೆ ಕನ್ನಡ ಮತ್ತು ತೆಲುಗಿನಲ್ಲಿ ಒಂದು ಚಿತ್ರ ಮಾಡೋಣ ಎಂದು ಹೇಳಿ ಕಳಿಸಿದ್ದರು. ಅದರಂತೆ ಹೈದರಾಬಾದ್ಗೆ ಹೋಗಿ ಭೇಟಿ ಮಾಡಿಕೊಂಡು ಬಂದೆ. ಚಿತ್ರ ಮಾಡೋಣ ಅಂತ ಹೇಳಿದ್ದಾರಾದರೂ, ಸದ್ಯಕ್ಕೆ ಇನ್ನೂ ಯಾವುದೂ ಪಕ್ಕಾ ಆಗಿಲ್ಲ’ ಎನ್ನುತ್ತಾರೆ ಧನಂಜಯ್.
ಈ ಮಧ್ಯೆ ಧನಂಜಯ್ ಅಭಿನಯಿಸಲಿರುವ ಹೊಸ ಚಿತ್ರದ ಹೆಸರು ಪಕ್ಕಾ ಆಗಿದೆ. ಈ ಹಿಂದೆ ಸೂರಿ ನಿರ್ದೇಶನದ ಚಿತ್ರದಲ್ಲಿ ಧನಂಜಯ್ ಹೀರೋ ಆಗಿ ನಟಿಸುತ್ತಾರೆ ಎಂದು ಸುದ್ದಿಯಾಗಿತ್ತಾದರೂ, ಚಿತ್ರದ ಹೆಸರು ಫಿಕ್ಸ್ ಆಗಿರಲಿಲ್ಲ. ಈಗ ಚಿತ್ರಕ್ಕೆ “ಪಾಪ್ಕಾರ್ನ್ ಮಂಕಿ ಟೈಗರ್’ ಎಂಬ ಹೆಸರನ್ನು ಇಡಲಾಗಿದೆಯಂತೆ. ಹೆಸರು ವಿಲಕ್ಷಣವಾಗಿದೆಯಾದರೂ, ಕಥೆಗೆ ಆ ಹೆಸರೇ ಸೂಕ್ತ ಎಂದನಿಸಿ, ನಿರ್ದೇಶಕ ಸೂರಿ ಅದೇ ಹೆಸರನ್ನು ಪಕ್ಕಾ ಮಾಡಿಕೊಂಡಿದ್ದಾರೆ.
ಈ ಚಿತ್ರದಲ್ಲಿ ಧನಂಜಯ್ ಜೊತೆಗೆ ನಿವೇದಿತಾ ನಾಯಕಿಯಾಗಿ ನಟಿಸುತ್ತಿದ್ದು, ಇದಲ್ಲದೆ ಇನ್ನೂ ಇಬ್ಬರು ನಾಯಕಿಯರು ಚಿತ್ರದಲ್ಲಿರುತ್ತಾರಂತೆ. ಸದ್ಯಕ್ಕೆ ಚಿತ್ರಕಥೆ ಕಟ್ಟುವಲ್ಲಿ ಸೂರಿ ನಿರತರಾಗಿರುವ ಸೂರಿ, ಧನಂಜಯ್ ಮತ್ತು ನಿವೇದಿತಾ ಅವರನ್ನು ಮಾತ್ರ ಅಂತಿಮ ಮಾಡಿದ್ದು, ಸದ್ಯದಲ್ಲೇ ಇನ್ನಿತರ ಕಲಾವಿದರ ಆಯ್ಕೆ ಮಾಡಲಿದ್ದಾರಂತೆ.
“ಪಾಪ್ಕಾರ್ನ್ ಮಂಕಿ ಟೈಗರ್’ನಲ್ಲೂ “ಟಗರು’ ಚಿತ್ರದ ಬಹುತೇಕ ಸದಸ್ಯರು ಮುಂದುವರೆಯುತ್ತಿದ್ದಾರೆ. “ಟಗರು’ ಚಿತ್ರಕ್ಕೆ ಸಂಭಾಷಣೆ ಬರೆಯುತ್ತಿರುವ ಮಾಸ್ತಿ ಮಂಜು ಈ ಚಿತ್ರಕ್ಕೂ ಸಂಭಾಷಣೆಗಳನ್ನು ರಚಿಸುತ್ತಿದ್ದಾರಂತೆ. ಆ ಚಿತ್ರಕ್ಕೆ ಹಿಟ್ ಸಂಗೀತವನ್ನು ಸಂಯೋಜಿಸಿದ್ದ ಚರಣ್ ರಾಜ್ ಈ ಚಿತ್ರಕ್ಕೂ ಸಂಗೀತ ಸಂಯೋಜಿಸುತ್ತಿದ್ದಾರೆ. ಇನ್ನು ಕೆ.ಪಿ. ಶ್ರೀಕಾಂತ್ ಈ ಚಿತ್ರವನ್ನು ನಿರ್ಮಿಸುತ್ತಿದ್ದು, ಸದ್ಯದಲ್ಲೇ ಚಿತ್ರೀಕರಣ ಪ್ರಾರಂಭವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ