“ಗ್ರಾಮ’ ಚಿತ್ರದ ಮೊದಲ ಹಂತ ಮುಕ್ತಾಯ
Team Udayavani, Jun 12, 2018, 10:58 AM IST
ಯಶ್ದೀಪ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಹೇಮಂತಕುಮಾರ್ ಅವರು ನಿರ್ಮಿಸುತ್ತಿರುವ “ಗ್ರಾಮ’ ಚಿತ್ರಕ್ಕೆ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಮಾಸಾಂತ್ಯಕ್ಕೆ ದ್ವಿತೀಯ ಹಂತದ ಚಿತ್ರೀಕರಣ ಆರಂಭವಾಗಲಿದೆ. ಕರ್ನಾಟಕ- ಆಂದ್ರ ಪ್ರದೇಶ ಗಡಿಯ, ಚಿಂತಾಮಣಿ ಬಳಿಯ ಹಳ್ಳಿಯೊಂದರಲ್ಲೇ ಚಿತ್ರಕ್ಕೆ 23 ದಿನಗಳ ಚಿತ್ರೀಕರಣ ನಡೆದಿದೆ.
ಮಾತಿನ ಭಾಗದ ಚಿತ್ರೀಕರಣದೊಂದಿಗೆ, ಒಂದು ಹಾಡು ಹಾಗೂ ಸಾಹಸ ಸನ್ನಿವೇಶದ ಚಿತ್ರೀಕರಣ ಈ ಹಂತದಲ್ಲಿ ನಡೆದಿದೆ. ಲಿಖಿತ್ ಸೂರ್ಯ, ಲಹರಿ, ಸತ್ಯಪ್ರಕಾಶ್, ಸುಧಾರಾಣಿ, ಶಿಪ್ರ ಮುಂತಾದವರು ಈ ಹಂತದ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು.
ಹರಿ ಕಿರಣ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರ ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ನಿರ್ಮಾಣವಾಗುತ್ತಿದೆ. ತೆಲುಗಿನಲ್ಲಿ ಒಂದು ಚಿತ್ರ ನಿರ್ದೇಶಿಸಿ, ಹತ್ತಕ್ಕೂ ಹೆಚ್ಚು ಚಿತ್ರಗಳಿಗೆ ಕಥೆ ಒದಗಿಸಿರುವ ಹರಿ ಕಿರಣ್ ಅವರಿಗೆ ಕನ್ನಡದಲ್ಲಿ ಇದು ಮೊದಲ ಚಿತ್ರ. ಕೃಷ್ಣಪ್ರಸಾದ್ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ರವಿಕಲ್ಯಾಣ್ ಸಂಗೀತ ನೀಡಿದ್ದಾರೆ.
ಬಾಬಿ ಸಂಕಲನ, ವಿಜಯ್ ಕೃಷ್ಣ ಕಲಾ ನಿರ್ದೇಶನ ಹಾಗೂ ಥ್ರಿಲ್ಲರ್ ಮಂಜು, ಶಿವು, ಅವರ ಸಾಹಸ ನಿರ್ದೇಶನವಿರುವ ಈ ಚಿತ್ರಕ್ಕೆ ವಿಜಯ್ ಭರಮಸಾಗರ ಗೀತರಚನೆ ಮಾಡಿ, ಸಂಭಾಷಣೆಯನ್ನು ಬರೆದಿದ್ದಾರೆ. ಲಿಖಿತ್ ಸೂರ್ಯ ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ನಾಯಕಿ ಲಹರಿ. ಶಿಪ್ರ, ಸತ್ಯಪ್ರಕಾಶ್, ಸುಧಾರಾಣಿ, ಸುಮನ್, ಗಾಂಧಿ, ಸಾಧುಕೋಕಿಲ, ಗೋಟುರಿ, ಶ್ರೇಯಸ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು
Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್ ಟೀಂ
ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?