“ಗ್ರಾಮ’ ಚಿತ್ರದ ಮೊದಲ ಹಂತ ಮುಕ್ತಾಯ


Team Udayavani, Jun 12, 2018, 10:58 AM IST

grama.jpg

ಯಶ್‌ದೀಪ್‌ ಪ್ರೊಡಕ್ಷನ್ಸ್‌ ಲಾಂಛನದಲ್ಲಿ ಹೇಮಂತಕುಮಾರ್‌ ಅವರು ನಿರ್ಮಿಸುತ್ತಿರುವ “ಗ್ರಾಮ’ ಚಿತ್ರಕ್ಕೆ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಮಾಸಾಂತ್ಯಕ್ಕೆ ದ್ವಿತೀಯ ಹಂತದ ಚಿತ್ರೀಕರಣ ಆರಂಭವಾಗಲಿದೆ. ಕರ್ನಾಟಕ- ಆಂದ್ರ ಪ್ರದೇಶ ಗಡಿಯ, ಚಿಂತಾಮಣಿ ಬಳಿಯ ಹಳ್ಳಿಯೊಂದರಲ್ಲೇ ಚಿತ್ರಕ್ಕೆ 23 ದಿನಗಳ ಚಿತ್ರೀಕರಣ ನಡೆದಿದೆ.

ಮಾತಿನ ಭಾಗದ ಚಿತ್ರೀಕರಣದೊಂದಿಗೆ, ಒಂದು ಹಾಡು ಹಾಗೂ ಸಾಹಸ ಸನ್ನಿವೇಶದ ಚಿತ್ರೀಕರಣ ಈ ಹಂತದಲ್ಲಿ ನಡೆದಿದೆ. ಲಿಖಿತ್‌ ಸೂರ್ಯ, ಲಹರಿ, ಸತ್ಯಪ್ರಕಾಶ್‌, ಸುಧಾರಾಣಿ, ಶಿಪ್ರ ಮುಂತಾದವರು ಈ ಹಂತದ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು.   

ಹರಿ ಕಿರಣ್‌ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರ ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ನಿರ್ಮಾಣವಾಗುತ್ತಿದೆ. ತೆಲುಗಿನಲ್ಲಿ ಒಂದು ಚಿತ್ರ ನಿರ್ದೇಶಿಸಿ, ಹತ್ತಕ್ಕೂ ಹೆಚ್ಚು ಚಿತ್ರಗಳಿಗೆ ಕಥೆ ಒದಗಿಸಿರುವ ಹರಿ ಕಿರಣ್‌ ಅವರಿಗೆ ಕನ್ನಡದಲ್ಲಿ ಇದು ಮೊದಲ ಚಿತ್ರ. ಕೃಷ್ಣಪ್ರಸಾದ್‌ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ರವಿಕಲ್ಯಾಣ್‌ ಸಂಗೀತ ನೀಡಿದ್ದಾರೆ.

ಬಾಬಿ ಸಂಕಲನ, ವಿಜಯ್‌ ಕೃಷ್ಣ ಕಲಾ ನಿರ್ದೇಶನ ಹಾಗೂ ಥ್ರಿಲ್ಲರ್‌ ಮಂಜು, ಶಿವು,  ಅವರ ಸಾಹಸ ನಿರ್ದೇಶನವಿರುವ ಈ ಚಿತ್ರಕ್ಕೆ ವಿಜಯ್‌ ಭರಮಸಾಗರ ಗೀತರಚನೆ ಮಾಡಿ, ಸಂಭಾಷಣೆಯನ್ನು ಬರೆದಿದ್ದಾರೆ. ಲಿಖಿತ್‌ ಸೂರ್ಯ ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ನಾಯಕಿ ಲಹರಿ. ಶಿಪ್ರ, ಸತ್ಯಪ್ರಕಾಶ್‌, ಸುಧಾರಾಣಿ, ಸುಮನ್‌, ಗಾಂಧಿ, ಸಾಧುಕೋಕಿಲ, ಗೋಟುರಿ, ಶ್ರೇಯಸ್‌ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. 

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.