ಒಂದೇ ಚಿತ್ರದಲ್ಲಿ ಧರ್ಮ-ಕೀರ್ತಿರಾಜ್‌


Team Udayavani, Jun 12, 2018, 10:59 AM IST

dharma-keerthiraj-41.jpg

ಕನ್ನಡದ ಅನೇಕ ಚಿತ್ರಗಳಲ್ಲಿ ಈಗಾಗಲೇ ಅಣ್ಣ-ತಮ್ಮ, ಅಪ್ಪ-ಮಗ, ಅಕ್ಕ-ತಂಗಿ ಹೀಗೆ ಒಂದೇ ಕುಟುಂಬದವರು ಒಂದಿಲ್ಲೊಂದು ಪಾತ್ರಗಳ ಮೂಲಕ ಕಾಂಬಿನೇಷನ್‌ನಲ್ಲಿ ನಟಿಸಿರುವುದು ಗೊತ್ತೇ ಇದೆ. ಆ ಸಾಲಿಗೆ ಈಗ ಧರ್ಮ ಮತ್ತು ಕೀರ್ತಿರಾಜ್‌ ಕೂಡ ಸೇರಿದ್ದಾರೆ. ಹೌದು. ಧರ್ಮ ಕೀರ್ತಿರಾಜ್‌ ಅವರ ತಂದೆ ಕೀರ್ತಿರಾಜ್‌ ಜೊತೆಗೆ ತೆರೆ ಹಂಚಿಕೊಂಡಿದ್ದಾರೆ. ಇದೇ ಮೊದಲ ಬಾರಿಗೆ ಅವರು “ವಿವಿಕ್ತ’ ಎಂಬ ಚಿತ್ರದಲ್ಲಿ ಅಪ್ಪ, ಮಗ ಜೊತೆಯಾಗಿ ನಟಿಸಿದ್ದಾರೆ. 

“ವಿವಿಕ್ತ’ ಚಿತ್ರದಲ್ಲಿ ಧರ್ಮ ಕೀರ್ತಿರಾಜ್‌ ಹೀರೋ. ಅವರೊಂದಿಗೆ ಪ್ರತಾಪ್‌ ನಾರಾಯಣ್‌ ಕೂಡ ನಟಿಸಿದ್ದಾರೆ. ಈ ಚಿತ್ರದಲ್ಲಿ ಕೀರ್ತಿರಾಜ್‌ ಅವರಿಗೆ ಪೊಲೀಸ್‌ ಅಧಿಕಾರಿ ಪಾತ್ರ ಸಿಕ್ಕಿದೆ. ತಮ್ಮ ಮಗನ ಜೊತೆಗೆ ನಟಿಸುವ ಅವಕಾಶ ಸಿಕ್ಕಿದ್ದನ್ನು ಪ್ರೀತಿಯಿಂದಲೇ ಒಪ್ಪಿಕೊಂಡ ಕೀರ್ತಿರಾಜ್‌, ತಮ್ಮ ಭಾಗದ ಚಿತ್ರೀಕರಣವನ್ನು ಮುಗಿಸಿದ್ದಾರೆ. ಈ ಚಿತ್ರದಲ್ಲಿ ಕೀರ್ತಿರಾಜ್‌ ಪೊಲೀಸ್‌ ಅಧಿಕಾರಿಯಾಗಿದ್ದರೆ, ಧರ್ಮ ಕೀರ್ತಿರಾಜ್‌ ಪಾತ್ರ ಏನು?

ಇದಕ್ಕೆ ಉತ್ತರ “ವಿವಿಕ್ತ’ ಬಿಡುಗಡೆವರೆಗೂ ಕಾಯಬೇಕು ಎಂಬುದು ಧರ್ಮ ಕೀರ್ತಿರಾಜ್‌ ಮಾತು. ಅಂದಹಾಗೆ, “ವಿವಿಕ್ತ’ ಚಿತ್ರಕ್ಕೆ ವಿಘ್ನೇಶ್‌ ನಿರ್ದೇಶಕರು. ಇದು ಇವರ ಮೊದಲ ಸಿನಿಮಾ. ಈ ಹಿಂದೆ ವಿಘ್ನೇಶ್‌ “ಜಿಗರ್‌ಥಂಡ’ ಚಿತ್ರದಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದರು. ಈಗ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಪೂಜಶ್ರೀ ಸಾನಿಕ ನಾಯಕಿಯಾಗಿ ನಟಿಸಿದ್ದಾರೆ.

ಇನ್ನು, ಭಾಸ್ಕರ್‌ ಮತ್ತು ರಾಕೇಶ್‌ ಚಿತ್ರವನ್ನು ನಿರ್ಮಿಸಿದ್ದಾರೆ. “ವಿವಿಕ್ತ’ ಒಂದು ಯುವಕರ ಕುರಿತಾದ ಚಿತ್ರ. ಥ್ರಿಲ್ಲರ್‌ ಹಾಗೂ ಹಾರರ್‌ ಅಂಶಗಳು ಚಿತ್ರದಲ್ಲಿರಲಿವೆ. ಕೇರಳ ಮೂಲದ ಛಾಯಾಗ್ರಾಹಕ ಬಿಪಿನ್‌ ಈ ಚಿತ್ರಕ್ಕೆ ಛಾಯಾಗ್ರಹಣ ಮಾಡಿದ್ದಾರೆ. ಇನ್ನು, ಧರ್ಮಕೀರ್ತಿರಾಜ್‌ ಅವರು ಸದ್ದಿಲ್ಲದೆಯೇ ಇನ್ನೂ ಎರಡು ಚಿತ್ರಗಳನ್ನು ಮುಗಿಸಿದ್ದು, ಆ ಚಿತ್ರಗಳು ಈಗ ಬಿಡುಗಡೆ ತಯಾರಿಯಲ್ಲಿವೆ.

“ಚಾಣಾಕ್ಷ’ ಚಿತ್ರದ ಬಗ್ಗೆ ಸಾಕಷ್ಟು ನಂಬಿಕೆ ಇಟ್ಟುಕೊಂಡಿರುವ ಧರ್ಮ, ಈ ಚಿತ್ರ ನನಗೊಂದು ಹೊಸ ಇಮೇಜ್‌ ತಂದುಕೊಡುತ್ತೆ ಎನ್ನುತ್ತಾರೆ. ಸದ್ಯಕ್ಕೆ “ಚಾಣಾಕ್ಷ’ ಡಿಐ ಮತ್ತು ಹಿನ್ನೆಲೆ ಸಂಗೀತದ ಕೆಲಸದಲ್ಲಿ ನಿರತವಾಗಿದೆ. ಬಿಡುಗಡೆ ಮುನ್ನವೇ ಹಿಂದಿ ಡಬ್ಬಿಂಗ್‌ ಹಕ್ಕು ಮಾರಾಟವಾಗಿರುವ ಖುಷಿಯಲ್ಲಿರುವ ಧರ್ಮ, “ಜಾಸ್ತಿ ಪ್ರೀತಿ’ ಎಂಬ ಇನ್ನೊಂದು ಚಿತ್ರದಲ್ಲೂ ನಟಿಸಿದ್ದಾರೆ. ಆ ಚಿತ್ರ ಕೂಡ ಬಹುತೇಕ ಪೂರ್ಣಗೊಂಡಿದೆ. ಈ ಚಿತ್ರದಲ್ಲಿ ಕೃಷಿ ತಪಂಡ ನಾಯಕಿಯಾಗಿದ್ದಾರೆ.

ಅರುಣ್‌ ನಿರ್ದೇಶಕರು. ಉಳಿದಂತೆ “ಬಿಂದಾಸ್‌ ಗೂಗ್ಲಿ’ ಚಿತ್ರದಲ್ಲಿ ಕೋಚ್‌ ಪಾತ್ರ ನಿರ್ವಹಿಸಿದ್ದಾರೆ. ಸಂತೋಷ್‌ ಈ ಚಿತ್ರ ನಿರ್ದೇಶಿಸಿದ್ದು, ವಿಜಯಕುಮಾರ್‌ ಅವರ ನಿರ್ಮಾಣವಿದೆ. ಸದ್ಯಕ್ಕೆ ಎರಡು ಹೊಸ ಚಿತ್ರಗಳ ಮಾತುಕತೆ ನಡೆಸಿರುವ ಧರ್ಮ, ಇನ್ನೂ ಯಾವ ಚಿತ್ರವನ್ನೂ ಅಂತಿಮಗೊಳಿಸಿಲ್ಲ. ಈ ನಡುವೆ ತೆಲುಗು ಸಿನಿಮಾವೊಂದನ್ನು ರಿಮೇಕ್‌ ಮಾಡುವ ಕುರಿತು ಮಾತುಕತೆ ನಡೆಯುತ್ತಿದ್ದು, ಸದ್ಯದಲ್ಲೇ ಆ ಚಿತ್ರದಲ್ಲೂ ಧರ್ಮ ನಟಿಸುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.