ಕುಸ್ತಿಗೆ ರಾಘು ಶಿವಮೊಗ್ಗ ನಿರ್ದೇಶನ


Team Udayavani, Jun 13, 2018, 11:09 AM IST

kusti.jpg

“ದುನಿಯಾ’ ವಿಜಯ್‌ ತಮ್ಮ ಮಗ ಸಾಮ್ರಾಟ್‌ನನ್ನು “ಕುಸ್ತಿ’ ಸಿನಿಮಾ ಮೂಲಕ ಲಾಂಚ್‌ ಮಾಡಲು ಹೊರಟಿರೋದು, ಈಗಾಗಲೇ ಚಿತ್ರದ ಫ‌ಸ್ಟ್‌ಲುಕ್‌ ಬಿಡುಗಡೆಯಾಗಿದೆ. ಈ ಚಿತ್ರವನ್ನು ಯಾರು ನಿರ್ದೇಶಿಸುತ್ತಾರೆಂಬ ಕುತೂಹಲ ಅನೇಕರಿಗಿತ್ತು. ಈ ನಡುವೆಯೇ ಅನಿಲ್‌ ಎನ್ನುವವರು “ಕುಸ್ತಿ’ ಸಿನಿಮಾ ಮಾಡುತ್ತಾರೆಂಬ ಸುದ್ದಿಯೂ ಕೇಳಿಬಂದಿತ್ತು. ಆದರೆ ಈಗ ಆಂತಿಮವಾಗಿ “ಕುಸ್ತಿ’ಗೆ ನಿರ್ದೇಶಕರು ಸಿಕ್ಕಿದ್ದಾರೆ.

ಅದು ರಾಘು ಶಿವಮೊಗ್ಗ. ಈ ಹೆಸರನ್ನು ಎಲ್ಲೋ ಕೇಳಿದಂತಿದೆಯಲ್ಲ ಎಂದುಕೊಳ್ಳಬಹುದು. “ಚೂರಿಕಟ್ಟೆ’ ಎಂಬ ಬಗ್ಗೆ ನಿಮಗೆ ಗೊತ್ತಿದ್ದರೆ ರಾಘು ಶಿವಮೊಗ್ಗ ಅವರ ಬಗ್ಗೆಯೂ ಗೊತ್ತಿರುತ್ತದೆ. “ಚೂರಿಕಟ್ಟೆ’ ಸಿನಿಮಾವನ್ನು ನಿರ್ದೇಶಿಸಿದ್ದು ಇದೇ ರಾಘು ಶಿವಮೊಗ್ಗ. ಅದಕ್ಕಿಂತ ಮುನ್ನ ರಾಘು ಶಿವಮೊಗ್ಗ “ಚೌಕಭಾರ’ ಎಂಬ ಕಿರುಚಿತ್ರವನ್ನು ನಿರ್ದೇಶಿಸಿದ್ದರು ಮತ್ತು ಅದಕ್ಕೆ ಪ್ರಶಸ್ತಿಯೂ ಬಂದಿತ್ತು.

“ಚೂರಿಕಟ್ಟೆ’ ನಂತರ ಹೊಸ ಸಿನಿಮಾಕ್ಕೆದ ಸ್ಕ್ರಿಪ್ಟ್ ಮಾಡುವಲ್ಲಿ ಬಿಝಿಯಾಗಿದ್ದ ರಾಘು ಅವರಿಗೆ ವಿಜಯ್‌ “ಕುಸ್ತಿ’ಯ ಆಫ‌ರ್‌ ಕೊಟ್ಟಿದ್ದಾರೆ. 15 ದಿನಗಳ ಹಿಂದೆ ರಾಘು “ಕುಸ್ತಿ’ ತಂಡ ಸೇರಿಕೊಂಡು, ಸಿನಿಮಾದ ಪೂರ್ವಸಿದ್ಧತೆಯಲ್ಲಿ ಬಿಝಿಯಾಗಿದ್ದಾರೆ. ಎಲ್ಲಾ ಓಕೆ, ರಾಘು ಅವರಿಗೆ ಈ ಆಫ‌ರ್‌ ಹೇಗೆ ಸಿಕ್ಕಿತು ಎಂದು ನೀವು ಕೇಳಬಹುದು. ಅದಕ್ಕೆ ಕಾರಣ “ಚೂರಿಕಟ್ಟೆ’. “ಚೂರಿಕಟ್ಟೆ’ ಸಿನಿಮಾ ನೋಡಿದ ವಿಜಯ್‌ ಅವರಿಗೆ ಆ ಸಿನಿಮಾ ತುಂಬಾ ಇಷ್ಟವಾಯಿತಂತೆ.

ನಂತರ ಕರೆದು, ತಮ್ಮ ಸಿನಿಮಾದಲ್ಲಿ ಕೆಲಸ ಮಾಡುವ ಆಫ‌ರ್‌ ನೀಡಿದ್ದಾರೆ. ರಾಘು ಕೂಡಾ ಈ ಅವಕಾಶವನ್ನು ಖುಷಿಯಿಂದಲೇ ಒಪ್ಪಿಕೊಂಡು, ಸಿನಿಮಾದ ಸಿದ್ಧತೆಯಲ್ಲಿ ಬಿಝಿಯಾಗಿದ್ದಾರೆ. ಇದೇ 17ಕ್ಕೆ ಚಿತ್ರದ ಟೀಸರ್‌ ಬಿಡುಗಡೆಯಾಗಲಿದೆ. ಅಂದು ವಿಜಯ್‌ ಪುತ್ರ ಸಾಮ್ರಾಟ್‌ ಅವರ ಹುಟ್ಟುಹಬ್ಬವಾಗಿದ್ದು, ಚಿತ್ರದ ಟೀಸರ್‌ ಮೂಲಕ ಸಿನಿಮಾದ ಝಲಕ್‌ ತೋರಿಸಲಿದ್ದಾರೆ. “ಇದು ನನಗೆ ಸಿಕ್ಕ ಒಳ್ಳೆಯ ಅವಕಾಶ.

ಒಬ್ಬ ಸ್ಟಾರ್‌ ನಟ ಕರೆದು ನಮ್ಮಂತಹ ಹೊಸ ನಿರ್ದೇಶಕರಿಗೆ ಅವಕಾಶ ಕೊಡುತ್ತಾರೆಂದರೆ ಅದಕ್ಕಿಂತ ಖುಷಿ ಇನ್ನೇನಿದೆ. ವಿಜಯ್‌ ಅವರ ಸಿನಿಮಾ ಪ್ರೀತಿ, ಶ್ರದ್ಧೆಯನ್ನು ಮೆಚ್ಚಲೇಬೇಕು’ ಎನ್ನುತ್ತಾರೆ ರಾಘು. ಇತ್ತ ಕಡೆ ವಿಜಯ್‌ ಪುತ್ರ ಸಾಮ್ರಾಟ್‌ ಕೂಡಾ “ಕುಸ್ತಿ’ಗಾಗಿ ಭರ್ಜರಿ ತಯಾರಿ ನಡೆಸಿದ್ದಾರೆ. ಕುಸ್ತಿ’ಗಾಗಿ ಅಪ್ಪ-ಮಗ ಇಬ್ಬರೂ ತೊಡೆ ತಟ್ಟಿ ಸೆಡ್ಡು ಹೊಡೆಯೋ ಮೂಲಕ ಸಜ್ಜಾಗಿದ್ದಾರೆ.

ದಿನವೊಂದಕ್ಕೆ ಇಬ್ಬರೂ ನಾಲ್ಕೈದು ಗಂಟೆಗಳ ಕಾಲ ಕಸರತ್ತು ನಡೆಸುತ್ತಿದ್ದಾರೆ. ವಿಜಯ್‌ ದಿನವೊಂದಕ್ಕೆ ಐದು ತಾಸು ವಕೌìಟ್‌ ಮಾಡಿದರೆ, ಅವರ ಪುತ್ರ ಸಾಮ್ರಾಟ್‌ ಕೂಡ ಅಪ್ಪನಿಗಿಂತ ನಾನೇನು ಕಮ್ಮಿ ಎಂಬಂತೆ ದಿನಕ್ಕೆ ನಾಲ್ಕು ತಾಸು ವಕೌìಟ್‌ ಮಾಡುತ್ತಿದ್ದಾನೆ. “ಕುಸ್ತಿ’ಗೋಸ್ಕರ ಪಕ್ಕಾ ಪೈಲ್ವಾನ್‌ಗಳಂತೆ ರೆಡಿಯಾಗಬೇಕೆಂಬುದು ವಿಜಯ್‌ ಆಸೆ. ಅದಕ್ಕಾಗಿಯೇ, ಯಾವ ಚಿತ್ರವನ್ನೂ ಒಪ್ಪಿಕೊಳ್ಳದೆ, ಬರೀ “ಕುಸ್ತಿ’ಗಾಗಿಯೇ ಬೆಳಗ್ಗೆ, ಸಂಜೆ ತಯಾರಿ ನಡೆಸುತ್ತಿದ್ದಾರೆ.

ಸಾಮ್ರಾಟ್‌ಗೆ ಈಗಾಗಲೇ ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಕುಸ್ತಿಪಟುಗಳು ತರಬೇತಿ ಕೊಡುತ್ತಿದ್ದಾರಂತೆ. ವಿಜಯ್‌ ಅವರೂ ಕೂಡ “ಕುಸ್ತಿ’ಯ ಪಟ್ಟುಗಳನ್ನು ಹೇಗೆಲ್ಲಾ ಹಿಡಿಯಬೇಕೆಂಬ ಬಗ್ಗೆಯೂ ಗಂಭೀರವಾಗಿ ಅಭ್ಯಾಸ ಮಾಡುತ್ತಿದ್ದಾರಂತೆ. ಒಟ್ಟು ಮೂವರು ಪ್ರಸಿದ್ಧ ಕುಸ್ತಿ ಪಟುಗಳಿಂದ ಅಪ್ಪ-ಮಗ ತರಬೇತಿ ಪಡೆಯುತ್ತಿದ್ದಾರೆ. ಇನ್ನು, ಚಿತ್ರದ ಇತರ ತಾರಾಗಣ, ತಾಂತ್ರಿಕ ವರ್ಗ ಇನ್ನಷ್ಟೇ ಅಂತಿಮವಾಗಬೇಕಿದೆ. 

ಟಾಪ್ ನ್ಯೂಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.